AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ, ಮರ್ಮಾಂಗ ತುಳಿದು ಹಲ್ಲೆ: ರೇಣುಕಾಸ್ವಾಮಿ ರೀತಿ ಮಾಡುತ್ತೇವೆ ಎಂದ ಆರೋಪಿಗಳು

ಕಳೆದ ವರ್ಷ ಬೆಂಗಳೂರಿನ ಪಟ್ಟಣಗೆರೆ ಶೆಡ್​ನಲ್ಲಿ ರೇಣುಕಾಸ್ವಾಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿ, ಕೊಲೆ ಮಾಡಲಾಗಿತ್ತು. ಈ ಪ್ರಕರಣ ಮಾಸುವ ಮುನ್ನವೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ಇಂತಹದ್ದೇ ಪ್ರಕರಣ ನಡೆದಿದೆ. ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ ರೀತಿಯಲ್ಲೇ ಓರ್ವ ಯುವಕನ ಮೇಲೆ ಹಲ್ಲೆ ಮಾಡಲಾಗಿದೆ.

ವಿವೇಕ ಬಿರಾದಾರ
|

Updated on:Jul 07, 2025 | 12:03 PM

Share

ನೆಲಮಂಗಲ, ಜುಲೈ 07: ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ನೆಲಮಂಗಲ (Nelamangala) ತಾಲೂಕಿನ ಸೋಲದೇವನಹಳ್ಳಿಯಲ್ಲಿ ನಡೆದೆ. ಕುಶಾಲ್ ಹಲ್ಲೆಗೊಳಗಾದ ಯುವಕ. ಪ್ರಕರಣ ಸಂಬಂಧ ಸೋಲದೇವನಹಳ್ಳಿ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕಾಲೇಜಿನ ದಿನಗಳಲ್ಲಿ ಕುಶಾಲ್ ಮತ್ತು ಯುವತಿ ಮಧ್ಯೆ ಪ್ರೀತಿ ಅರಳಿತ್ತು. ಎರಡು ವರ್ಷದ ಪ್ರೀತಿ ಕೆಲವು ತಿಂಗಳ ಹಿಂದೆ ಮುರಿದು ಬಿದ್ದಿತ್ತು. ಈ ವೇಳೆ ಯುವತಿಗೆ ಬೇರೊಬ್ಬ ಹುಡುಗನ ಪರಿಚಯವಾಗಿತ್ತು. ಇದನ್ನು ಸಹಿಸಲಾಗದೆ ಕುಶಾಲ್, ಯುವತಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದನು. ಹೀಗಾಗಿ, ಯುವತಿಯ ಗೆಳೆಯ ಮತ್ತು ಆತನ ಸ್ನೇಹಿತರು ಸೇರಿಕೊಂಡು ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ ಅಂತ ಕುಶಾಲ್​ನನ್ನು ಬಾಗಲಗುಂಟೆಯ ಎಜಿಪಿ ಲೇಔಟ್​ಗೆ ಕರೆಸಿಕೊಂಡು ಅಪಹರಿಸಿದ್ದಾರೆ.

ಇದನ್ನೂ ಓದಿ: ಶಾಸಕರ ಮನೆಯ ಹಿಂಭಾಗದ ರಸ್ತೆಯಲ್ಲಿ ನಿಲ್ಲಿಸಿದ್ದ 20 ವಾಹನಗಳ ಮೇಲೆ ದುಷ್ಕರ್ಮಿಗಳಿಂದ ದಾಳಿ

ಇದನ್ನೂ ಓದಿ
Image
ಸಂಚಾರ ಮಾಡದಿದ್ದರೂ ಬಿಎಂಟಿಸಿ ಬಸ್​ಗೆ ಬೇಕಂತೆ ಡೀಸೆಲ್! ಡೀಸೆಲ್ ಹಣ ಲೂಟಿ
Image
ಪತ್ನಿಯ ಕುತ್ತಿಗೆ, ಮುಖಕ್ಕೆ 20 ಕ್ಕೂ ಹೆಚ್ಚು ಬಾರಿ ಇರಿದು ಕೊಂದ ಪತಿ
Image
ಶಿವಮೊಗ್ಗದಲ್ಲಿ ಹಿಂದೂ ದೇವರಿಗೆ ಅಪಮಾನ: ಇಬ್ಬರು ಕಿಡಿಗೇಡಿಗಳು ಅಂದರ್
Image
ಗೆಳತಿಯ ಪತಿಯನ್ನು ಕೊಲೆ ಮಾಡಿದ ಶಾಲಾ ವಾಹನ ಚಾಲಕ? ಅನೈತಿಕ ಸಂಬಂಧ ಶಂಕೆ

ಬಳಿಕ, ಆರೋಪಿಗಳು ಕುಶಾಲ್​ನನ್ನು ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಕುಶಾಲ್​ನ ಬಟ್ಟೆ ಬಿಚ್ಚಿ ಮರ್ಮಾಂಗ ತುಳಿದು ವಿಕೃತಿ ಮೆರೆದಿದ್ದಾರೆ. ಕುಶಾಲ್​ನ​ ಬಟ್ಟೆ ಬಿಚ್ಚಿ ಹಲ್ಲೆ ಮಾಡಿರುವುದನ್ನು ಆರೋಪಿಗಳು ವಿಡಿಯೋ ಮಾಡಿಕೊಂಡಿದ್ದಾರೆ. ವಿಡಿಯೋದಲ್ಲಿ ಆರೋಪಿಗಳು, ರೇಣುಕಾಸ್ವಾಮಿ ಕೊಲೆ ಕೇಸ್​ನಂತೆ ಇದೂ ಆಗುತ್ತೆ. ಎ1 ಹೇಮಂತ ಎ2 ನಾನು ಎಂದು ವಿಡಿಯೋದಲ್ಲಿ ಹೇಳಿದ್ದಾರೆ. ಬಳಿಕ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಕುಶಾಲ್​ಗೆ ಆರೋಪಿಗಳು ಬೆದರಿಕೆ ಹಾಕಿದ್ದಾರೆ.

ಈ ಘಟನೆ ಸಂಬಂಧ ಸೋಲದೇವನಹಳ್ಳಿ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಹೇಮಂತ್, ಯಶವಂತ್​, ಶಿವಶಂಕರ್, ಶಶಾಂಕ್ ಗೌಡ ಬಂಧಿತರು. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ: ಮಂಜುನಾಥ್, ಟಿವಿ9 ನೆಲಮಂಗಲ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:55 am, Mon, 7 July 25

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು