AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಕೆಲಸ ಕೊಡಿಸೋದಾಗಿ ನಂಬಿಸಿ ನೆಲಮಂಗಲ ಮಾಜಿ ಶಾಸಕನ ಗನ್​ ಮ್ಯಾನ್​ನಿಂದ ವಂಚನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಮಾಜಿ ಶಾಸಕ ಡಾ.ಶ್ರೀನಿವಾಸಮೂರ್ತಿ(Dr. K Srinivasamurthy) ಗನ್ ​ಮ್ಯಾನ್​, ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಿದ ಆರೋಪ ಕೇಳಿಬಂದಿದೆ. ಈ ಹಿನ್ನಲೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಐಪಿಸಿ 1860-406,420 ರೀತ್ಯಾ ದೂರು ದಾಖಲು ಮಾಡಲಾಗಿದೆ.

ಸರ್ಕಾರಿ ಕೆಲಸ ಕೊಡಿಸೋದಾಗಿ ನಂಬಿಸಿ ನೆಲಮಂಗಲ ಮಾಜಿ ಶಾಸಕನ ಗನ್​ ಮ್ಯಾನ್​ನಿಂದ ವಂಚನೆ
ಆರೋಪಿ ಗನ್​ ಮ್ಯಾನ್​ ವೆಂಕಟೇಶ್​
ಬಿ ಮೂರ್ತಿ, ನೆಲಮಂಗಲ
| Edited By: |

Updated on:Jun 13, 2024 | 6:29 PM

Share

ಬೆಂಗಳೂರು ಗ್ರಾಮಾಂತರ, ಜೂ.13: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಮಾಜಿ ಶಾಸಕ ಡಾ.ಶ್ರೀನಿವಾಸಮೂರ್ತಿ(Dr. K Srinivasamurthy) ಗನ್ ​ಮ್ಯಾನ್​ ಲಕ್ಷಾಂತರ ರೂಪಾಯಿ ವಂಚಿಸಿದ ಆರೋಪ ಕೇಳಿಬಂದಿದೆ. ನೆಲಮಂಗಲದಲ್ಲಿ ಹಿಂದಿನ ಎಂಎಲ್​ಎ ಗೆ 10ವರ್ಷ ಗನ್ ಮ್ಯಾನ್ ಆಗಿದ್ದ ವೆಂಕಟೇಶ್ ಎಂಬಾತ ವಿಧಾನಸೌಧದಲ್ಲಿ ಸರ್ಕಾರಿ ಕೆಲಸ ಕೊಡಿಸುತ್ತೇನೆ ಎಂದು ನಂಬಿಸಿ ಹಣಪೀಕಿದ ಆರೋಪದ ಹಿನ್ನಲೆ ದಾಬಸ್ ಪೇಟೆ ನಿವಾಸಿ ಸುನಂದಾ ಅವರು ಠಾಣೆಗೆ ದೂರು ದಾಖಲಿಸಿದ್ದಾರೆ.

ಇಂಜಿನಿಯರಿಂಗ್ ಪದವೀಧರರಾದ ತನ್ನ ಎರಡು ಹೆಣ್ಣು ಮಕ್ಕಳಿಗೆ ಉದ್ಯೋಗ ಕೊಡಿಸುತ್ತೇನೆ ಎಂದು ಬರೋಬ್ಬರಿ 16.50 ಲಕ್ಷ ಹಣ ಪೀಕಿರುವ ಗನ್ ಮ್ಯಾನ್, ಇತ್ತ ಕೆಲಸವೂ ಕೊಡಿಸದೇ, ಹಣವೂ ನೀಡದೆ ಸತಾಯಿಸುತ್ತಿದ್ದ. ಡಿಸೆಂಬರ್ 2022 ರಿಂದಲೂ ಕೆಲಸ ಕೊಡಿಸೊದಾಗಿ ನಂಬಿಸಿದ್ದ ವೆಂಕಟೇಶ್, ಪೋನ್ ಪೇ ಮೂಲಕ ಹಾಗೂ ನಗದು ರೂಪದಲ್ಲಿ 25 ಬಾರಿ ಹಣ ಪಡೆದಿದ್ದಾನೆ. ಇದೀಗ ವೆಂಕಟೇಶ್ ವಿರುದ್ದ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಐಪಿಸಿ 1860-406,420 ರೀತ್ಯಾ ದೂರು ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಬ್ಯಾಂಕ್ ಸಿಬ್ಬಂದಿಗಳೇ ಸೇರಿಕೊಂಡು ಬ್ಯಾಂಕ್, ಗ್ರಾಹಕರಿಗೆ ವಂಚನೆ; ಏನಿದು ಪ್ರಕರಣ?

ಇಬ್ಬರು ಕಳ್ಳರ ಮೇಲೆ ಮಾರಣಾಂತಿಕ ಹಲ್ಲೆ, ಓರ್ವ ಸ್ಥಳದಲ್ಲೇ ಸಾವು

ಬೆಂಗಳೂರು: ಆರ್​ಬಿಐ ಲೇಔಟ್​ನ ನಿರ್ಮಾಣ ಹಂತದ ಕಟ್ಟಡದಲ್ಲಿ ಕಬ್ಬಿಣ ಕದಿಯಲು ಹೋಗಿದ್ದ ಇಬ್ಬರು ಯುವಕರ ಮೇಲೆ ಹಲ್ಲೆ ಮಾರಣಾಂತಿಕ ಹಲ್ಲೆ ಮಾಡಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮುಂಜಾನೆ 4.30ರ ಸುಮಾರಿಗೆ ಕಬ್ಬಿಣ ಕಳ್ಳತನಕ್ಕೆ ಹೋಗಿದ್ದ ಸಲ್ಮಾನ್, ಸಲೀಂ ಮೇಲೆ ಕೂಲಿ ಕಾರ್ಮಿಕರು ಸೇರಿಕೊಂಡು ಈ ಕೃತ್ಯ ಎಸಗಿದ್ದಾರೆ. ಸಲ್ಮಾನ್(25) ಸ್ಥಳದಲ್ಲೇ ಸಾವನ್ನಪ್ಪಿದರೆ, ಹಲ್ಲೆಗೊಳಗಾದ ಸಲೀಂ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಕುರಿತು ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:40 pm, Thu, 13 June 24

Follow Us
ಬಿ ಮೂರ್ತಿ, ನೆಲಮಂಗಲ
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More