AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲದಲ್ಲಿ ನಕಲಿ ಬ್ರಾಂಡ್​​​ಗಳ ಹಾವಳಿ: ಸ್ವಲ್ಪ ಯಾಮಾರಿದ್ರೂ ನಿಮ್ಮ ಮನ-ಮನೆಯ ನೆಮ್ಮದಿ ಹಾಳಾಗಿ ಬಿಡುತ್ತೆ!

ಬ್ರಾಂಡೆಡ್ ಪದಾರ್ಥಗಳಿಗೆ ಅಗ್ಗದ ನಕಲಿ ರಾಸಾಯನಿಕಗಳನ್ನು ಕಲಬೆರಕೆ ಮಾಡಿ ಸುಲಭವಾಗಿ ಹಣ ಮಾಡುವ ದೊಡ್ಡ ಜಾಲವೊಂದು ಪೂಲೀಸ್ ಬಲೆಗೆ ಸಿಕ್ಕಿ ಬಿದ್ದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮಲ್ಲರಬಾಣವಾಡಿ ಗ್ರಾಮದಲ್ಲಿ ಅಕ್ರಮ ಗೋಡಾನ್ ನಲ್ಲಿ ಈ ದಂಧೆ ನಡೆಯುತ್ತಿತ್ತು.

ನೆಲಮಂಗಲದಲ್ಲಿ ನಕಲಿ ಬ್ರಾಂಡ್​​​ಗಳ ಹಾವಳಿ: ಸ್ವಲ್ಪ ಯಾಮಾರಿದ್ರೂ ನಿಮ್ಮ ಮನ-ಮನೆಯ ನೆಮ್ಮದಿ ಹಾಳಾಗಿ ಬಿಡುತ್ತೆ!
ನೆಲಮಂಗಲದಲ್ಲಿ ನಕಲಿ ಬ್ರಾಂಡ್​​​ಗಳ ಹಾವಳಿ
ಬಿ ಮೂರ್ತಿ, ನೆಲಮಂಗಲ
| Edited By: |

Updated on: Mar 23, 2024 | 9:38 AM

Share

ನೀವು ಬ್ರಾಂಡೆಡ್ ಡಿಟರ್ಜೆಂಟ್ ವಸ್ತುಗಳನ್ನ ತಗೆದುಕೊಳ್ಳುತ್ತಿದ್ರೆ ಎಚ್ಚರದಿಂದ ಇರಬೇಕು. ಸ್ವಲ್ಪ ಯಾಮಾರಿದ್ರೂ ನಿಮ್ಮ ಮನೆಯ (home) ಶುಚಿತ್ವ ಹಾಳಾಗಿ, ನಿಮ್ಮ ನೆಮ್ಮದಿಯೂ ಹಾಳಾಗಿ ಬಿಡುತ್ತೆ. ಯಾಕೆಂದ್ರೆ ನಕಲಿ ಡಿಟರ್ಜೆಂಟ್ ವಸ್ತುಗಳ ಕಲಬೆರಕೆ ಹಾಗೂ ನಕಲಿಯ (Fake brand) ದೊಡ್ಡ ಜಾಲವೇ ಪತ್ತೆಯಾಗಿದೆ. ಹಾರ್ಪಿಕ್, ಲೈಸೋಲ್, ಕೂಲೀನ್, ಏನೇ ಬಳಸಿದ್ರು ಗಲೀಜು ಹೋಗುತ್ತಿಲ್ಲ. ರಾತ್ರಿ ಮಲಗುವಾ ಅಂದ್ರೆ ಸೊಳ್ಳೆ ಕಾಟಕ್ಕೆ ಗುಡ್ ನೈಟ್ ಬಳಸಿದ್ರು ಸೊಳ್ಳೆಯಿಂದ ಮುಕ್ತಿ ಸಿಗದೆ ಬ್ಯಾಡ್​ ನೈಟ್​ ಆಗುತ್ತಿದೆ! ಹಾಗಾದರೆ ನೀವು ಬಳಸುತ್ತಿರುವ ಡಿಟರ್ಜೆಂಟ್ ಹಾಗೂ ಗುಡ್ ನೈಟ್ ಅಸಲಿ ಅಲ್ಲದೆ ನಕಲಿ ಆಗಿರಬಹುದು ಎಂಬುದನ್ನ ಯೋಚಿಸಿದ್ದೀರಾ?

ಬ್ರಾಂಡೆಡ್ ಪದಾರ್ಥಗಳಿಗೆ ಅಗ್ಗದ ನಕಲಿ ರಾಸಾಯನಿಕಗಳನ್ನು ಕಲಬೆರಕೆ ಮಾಡಿ ಸುಲಭವಾಗಿ ಹಣ ಮಾಡುವ ದೊಡ್ಡ ಜಾಲವೊಂದು ಪೂಲೀಸ್ ಬಲೆಗೆ ಸಿಕ್ಕಿ ಬಿದ್ದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ (Nelamangala) ಮಲ್ಲರಬಾಣವಾಡಿ ಗ್ರಾಮದಲ್ಲಿರುವ ಅಕ್ರಮವಾದ ಗೋಡಾನ್ ನಲ್ಲಿ ಈ ಅಡ್ಡೆ ನಡೆಯುತ್ತಿತ್ತು. ಪೊಲೀಸ್ ಹಾಗೂ ಐಪಿ ಇನ್ವೆಸ್ಟಿಗೇಷನ್ ಡಿಟೆಕ್ಟಿವ್ ಸೆರ್ವಿಸ್ ಜಂಟಿ ಕಾರ್ಯಚರಣೆ ನಡೆಸಿದಾಗ ಅಕ್ರಮ ಜಾಲ ಕಂಡು ಶಾಕ್​ ಆಗಿದೆ.

ಬ್ರಾಂಡೆಡ್ ಡಿಟರ್ಜೆಂಟ್ ವಸ್ತುಗಳನ್ನ ನಕಲು ಮಾಡುತ್ತಿದ್ದ ಗೋಡಾನ್ ಮೇಲೆ ದಾಳಿ ನಡೆಸಿ ಮಹೇಶ್ ಗಾಂಧಿ, ಅಶ್ವಿನ್, ನಿರ್ಮಲ್ ಎಂಬ ಮೊವರನ್ನ ದಾಳಿಯ ಸಂದರ್ಭದಲ್ಲಿ ಪೊಲೀಸರು ಬಂಧಿಸಿದ್ದಾರೆ. ಹೊಸಕೋಟೆ ಬಳಿಯ ಅವಲಹಳ್ಳಿಯ ತಯಾರಕ ಘಟಕದಿಂದ ಲೋಡ್‌ಗಟ್ಟಲೇ ನಕಲಿ ಡಿಟರ್ಜೆಂಟ್ ಕೆಮಿಕಲ್ ಖರೀದಿ ಮಾಡಿ ಬ್ರಾಂಡೆಡ್ ಬಾಕ್ಸ್ ನಲ್ಲಿ ಪ್ಯಾಕ್‌ ಮಾಡುತ್ತಿದ್ದರು.

Also Read: ಛೇ! ಇದೆಂಥಾ ಹೇಳಿಕೆ – ಬಿಜೆಪಿ ಅಭ್ಯರ್ಥಿ ಕೋಟಗೆ ಹಿಂದಿ, ಇಂಗ್ಲಿಷ್ ಬರೋಲ್ಲ, ಅವರನ್ನ ಗೆಲ್ಲಿಸಬೇಡಿ ಎಂದ ಜೆಪಿ ಹೆಗ್ಡೆ

ಮುಂದೆ, ನಕಲಿಯಾಗಿ ಪ್ರಿಂಟ್ ಮಾಡಿದ ಬ್ರಾಂಡೆಡ್ ಲೇಬಲ್ ಬಳಸಿ ಡಿಟರ್ಜೆಂಟ್ ಬಾಟಲ್ ಗಳಲ್ಲಿ ತುಂಬಿ ನಕಲಿ ಬ್ರಾಂಡ್‌ಗಳನ್ನು ಅಸಲಿ ಬ್ರಾಂಡ್ ಆಗಿ ಕನ್ವರ್ಟ್ ಮಾಡಿ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವಾರು ಭಾಗಗಳಲ್ಲಿ ಮಾರಾಟ ಮಾಡಿ ಕೋಟ್ಯಾಂತರ ಹಣ ಗಳಿಸುತ್ತಿದ್ದ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕಿದ್ದಾರೆ.

ಇನ್ನು ದಾಳಿಯ ವೇಳೆ ಹದಿನೈದು, ಇಪ್ಪತ್ತು ಲಕ್ಷ ರೂಪಾಯಿ ಬೆಲೆಬಾಳುವ ಡಿಟರ್ಜೆಂಟ್ ಗಳ ನೂರಾರು ಬಾಕ್ಸ್, ಲೇಬಲ್, ಖಾಲಿ ಬಾಟಲ್, ಗುಡ್ ನೈಟ್ ಗಳನ್ನ ಸೀಜ್ ಮಾಡಿಕೊಳ್ಳಲಾಗಿದೆ. ಮಿಕ್ಸಿಂಗ್ ಮಷಿನ್‌ಗಳನ್ನು ಗೋಡಾನ್ ನಲ್ಲೇ ಸೀಜ್ ಮಾಡಲಾಗಿದೆ. ಈ ಕೃತ್ಯಕ್ಕೆ ಸಂಬಂಧಿಸಿದಂತೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿ ಮೂರ್ತಿ, ನೆಲಮಂಗಲ
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?