AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ಘಟನೆ: ಬಾಲಕಿ ಮೇಲೆ ದೈಹಿಕ ಶಿಕ್ಷಕನಿಂದ ಅತ್ಯಾಚಾರ, ಮದುವೆ ಆಗುವುದಾಗಿ ನಂಬಿಸಿ ಯುವತಿಗೆ ವಂಚನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ದಾಬಸ್​ಪೇಟೆಯಲ್ಲಿ 17 ವರ್ಷದ ಬಾಲಕಿ ಮೇಲೆ ದೈಹಿಕ ಶಿಕ್ಷಕನಿಂದ ಅತ್ಯಾಚಾರ ಮಾಡಿರುವಂತಹ ಘಟನೆ ನಡೆದಿದೆ. ಮತ್ತೊಂದು ಪ್ರಕರಣದಲ್ಲಿ ಮದುವೆ ಆಗುವುದಾಗಿ 24 ವರ್ಷದ ದಲಿತ ಯುವತಿಯನ್ನು ನಂಬಿಸಿ ಅತ್ಯಾಚಾರ ಮಾಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಟೌನ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪ್ರತ್ಯೇಕ ಘಟನೆ: ಬಾಲಕಿ ಮೇಲೆ ದೈಹಿಕ ಶಿಕ್ಷಕನಿಂದ ಅತ್ಯಾಚಾರ, ಮದುವೆ ಆಗುವುದಾಗಿ ನಂಬಿಸಿ ಯುವತಿಗೆ ವಂಚನೆ
ಪ್ರತ್ಯೇಕ ಘಟನೆ: ಬಾಲಕಿ ಮೇಲೆ ದೈಹಿಕ ಶಿಕ್ಷಕನಿಂದ ಅತ್ಯಾಚಾರ, ಮದುವೆ ಆಗುವುದಾಗಿ ನಂಬಿಸಿ ಯುವತಿಗೆ ವಂಚನೆ
ಬಿ ಮೂರ್ತಿ, ನೆಲಮಂಗಲ
| Edited By: |

Updated on: Nov 30, 2024 | 9:18 PM

Share

ನೆಲಮಂಗಲ, ನವೆಂಬರ್​ 30: 17 ವರ್ಷದ ಬಾಲಕಿ (Girl) ಮೇಲೆ ಬಲವಂತವಾಗಿ ದೈಹಿಕ ಶಿಕ್ಷಕನಿಂದ ಅತ್ಯಾಚಾರ ಎಸಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್​ಪೇಟೆನಲ್ಲಿ ನಡೆದಿದೆ. 22 ವರ್ಷದ ದೈಹಿಕ ಶಿಕ್ಷಕ ದಾದಾಪೀರ್​ನಿಂದ ಅತ್ಯಾಚಾರ ಮಾಡಲಾಗಿದೆ. ಸಂತ್ರಸ್ತೆ ದೂರು ಆಧರಿಸಿ ದೈಹಿಕ ಶಿಕ್ಷಕನ ಬಂಧಿಸಲಾಗಿದೆ. ದಾಬಸ್​ಪೇಟೆ ಠಾಣೆ ಪೊಲೀಸರಿಂದ ತನಿಖೆ ನಡೆಯುತ್ತಿದೆ.

ದೈಹಿಕ ಶಿಕ್ಷಕ ದಾದಾಪೀರ್​ ಬಾಲಕಿಯನ್ನು ನಂಬಿಸಿ ದೇವರಾಯನ ದುರ್ಗ ಬೆಟ್ಟಕ್ಕೆ ಕರೆದೊಯ್ದಿದ್ದ. ನಂತರ ತುಮಕೂರಿಗೆ ಕರೆದೊಯ್ದು ಲಾಡ್ಜ್​​ವೊಂದರಲ್ಲಿ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಾನೆ. 10 ದಿನದ ನಂತರ ಮತ್ತೆ ಮನೆಗೆ ಕರೆಸಿಕೊಂಡು ಅತ್ಯಾಚಾರವೆಸಗಿದ್ದಾನೆ. ಈ ಬಗ್ಗೆ ಬಾಯಿಬಿಟ್ಟರೆ ಕೊಲ್ಲುವುದಾಗಿ ಬೆದರಿಕೆ ಕೂಡ ಹಾಕಿದ್ದ.

ಮದುವೆ ಆಗುವುದಾಗಿ ನಂಬಿಸಿ ಲವ್, ಸೆಕ್ಸ್, ದೋಖಾ

ಮತ್ತೊಂದು ಪ್ರಕರಣದಲ್ಲಿ ಮದುವೆ ಆಗುವುದಾಗಿ 24 ವರ್ಷದ ದಲಿತ ಯುವತಿಯನ್ನು ನಂಬಿಸಿ ಅತ್ಯಾಚಾರ ಮಾಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಟೌನ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶ್ರೀಕಾಂತ್​ ಬಂಧತ ಆರೋಪಿ.

ಇದನ್ನೂ ಓದಿ: ಮದುವೆಯಾಗುವುದಾಗಿ ನಂಬಿಸಿ ಮೋಸ: ನ್ಯಾಯಕ್ಕಾಗಿ ಯೋಧನ ಮನೆ ಮುಂದೆ ಕುಳಿತ ಮಹಿಳೆ

ಸೊಂಡೆಕೊಪ್ಪಕ್ಕೆ ಮನೆ ಸಾಮಾನು ತರಲು ಹೋಗಿದ್ದಾಗ ಯುವತಿಗೆ ಶ್ರೀಕಾಂತ್ ಪರಿಚಯವಾಗಿದೆ. ಫೋನ್ ನಂಬರ್‌ ಪಡೆದು ಪ್ರೀತಿಸಿ ಮದುವೆಯಾಗುತ್ತೇನೆಂದು ನಂಬಿಸಿದ್ದ. ಬಳಿಕ ನೆಲಮಂಗಲದ ಲಾಡ್ಜ್​ಗೆ ಕರೆದೊಯ್ದು ಯುವತಿ ಜೊತೆ ದೈಹಿಕ ಸಂಪರ್ಕ ಮಾಡಿದ್ದಾನೆ.

ದಲಿತ ಜಾತಿಯವಳು ನಾನು ಮದುವೆಯಾಗುವುದಿಲ್ಲ. ಎಂಜಾಯ್ ಮಾಡುವುದಷ್ಟೇ ನನ್ನ ಕೆಲಸ ಎಂದಿದ್ದ. ಇದೇ ವಿಷಯವಾಗಿ ಇಬ್ಬರ ನಡುವೆ ಗಲಾಟೆ ಆಗಿದೆ. ಬಳಿಕ ಯುವತಿಯನ್ನು ಲಾಡ್ಜ್​​ನಲ್ಲೇ ಬಿಟ್ಟು ಎಸ್ಕೇಪ್ ಆಗಿದ್ದ. ಹೀಗಾಗಿ ನೆಲಮಂಗಲ ನಗರ ಪೊಲೀಸ್​ ಠಾಣೆಗೆ ಯುವತಿ ದೂರು ನೀಡಿದ್ದರು. ಇದೀಗ ಶ್ರೀಕಾಂತ್​ನನ್ನು ಬಂಧಿಸಿದ ಪೊಲೀಸರು ಜೈಲಿಗಟ್ಟಿದ್ದಾರೆ.

ಇದನ್ನೂ ಓದಿ: ಸಂಬಂಧಿ ಮನೆಯಲ್ಲಿ ಸ್ನಾನಕ್ಕೆಂದು ಹೋಗಿದ್ದ ಮಹಿಳೆ ಬಾತ್​ರೂಮ್​ನಲ್ಲಿ ನಿಗೂಢ ಸಾವು

ಇತ್ತೀಚಿಗೆ 15 ವರ್ಷದ ಬಾಲಕಿ ಮೇಲೆ 70 ವರ್ಷದ ವೃದ್ಧನಿಂದ ಅತ್ಯಾಚಾರ ನಡೆದಿತ್ತು. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿ ಮೇಲೆ ಅತ್ಯಾಚಾರವೆಸಗಲಾಗಿತ್ತು. ವೃದ್ದನಿಗೆ ಗ್ರಾಮಸ್ಥರು ಹಲ್ಲೆ ಮಾಡಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ
‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು