AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ವೆಗಾಗಿ ಅಣ್ಣ ಮಾಡಿಸಿಟ್ಟಿದ್ದ ಒಡವೆ ಕಳ್ಳತನ: ಕಷ್ಟಪಟ್ಟು ದುಡಿದು ತಂದ ಚಿನ್ನ ಕಳೆದುಕೊಂಡ ಸಹೋದರರು ಕಣ್ಣೀರು

ಆತ ಊರುಬಿಟ್ಟು ಊರಿಗೆ ಬಂದು ತನ್ನ ಕಾಲ ಮೇಲೆ ತಾನು ನಿಂತಿದ್ದ. 8 ವರ್ಷಗಳ ಕಾಲ ಕಷ್ಟಪಟ್ಟು ದುಡಿದ ಹಣದಲ್ಲಿ ತಮ್ಮನ ಮದುವೆಗೆಂದು ಒಡವೆ ಖರೀದಿ ಮಾಡಿದ್ದ. ಆದರೆ ಮನೆಯಲ್ಲಿಟ್ಟು ಹೊರಗೆ ಹೋಗಿ ಬರುವಷ್ಟರಲ್ಲಿ ಚಿನ್ನಾಭರಣ ಕಳ್ಳತನವಾಗಿದೆ. ಬೆಂಗಳೂರು ಉತ್ತರ ಕೆಜಿ ಲಕ್ಕೇನಹಳ್ಳಿಯಲ್ಲಿ ಘಟನೆ ನಡೆದಿದೆ.

ಮದ್ವೆಗಾಗಿ ಅಣ್ಣ ಮಾಡಿಸಿಟ್ಟಿದ್ದ ಒಡವೆ ಕಳ್ಳತನ: ಕಷ್ಟಪಟ್ಟು ದುಡಿದು ತಂದ ಚಿನ್ನ ಕಳೆದುಕೊಂಡ ಸಹೋದರರು ಕಣ್ಣೀರು
Theft
ಗಂಗಾಧರ​ ಬ. ಸಾಬೋಜಿ
|

Updated on:Dec 15, 2025 | 10:36 PM

Share

ನೆಲಮಂಗಲ, ಡಿಸೆಂಬರ್​​ 15: ತಮ್ಮನ ಮದುವೆಗೆ ಅಣ್ಣ ಮಾಡಿಸಿದ್ದ 6 ಲಕ್ಷ ರೂ ಮೌಲ್ಯದ ಚಿನ್ನಾಭರಣಗಳನ್ನು ಖತರ್ನಾಕ್ ಕಳ್ಳ ದೋಚಿರುವಂತಹ (Robbery) ಘಟನೆ ಬೆಂಗಳೂರು ಉತ್ತರ ಕೆಜಿ ಲಕ್ಕೇನಹಳ್ಳಿಯಲ್ಲಿ ನಡೆದಿದೆ. ಮೂರು ದಿನಗಳ ಹಿಂದೆ ಕಳ್ಳತನ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮನೆಯಿಂದ ಹೊರಗೆ ಹೋಗಿ ವಾಪಸ್​ ಬರುವಷ್ಟರಲ್ಲಿ ಕಳ್ಳ ತನ್ನ ಕೈಚಳ ತೋರಿಸಿದ್ದಾನೆ. ಸದ್ಯ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

55 ಗ್ರಾಂ ನಷ್ಟು ಚಿನ್ನಾಭರಣ ಕಳ್ಳತನ

ಯೋಗೀಶ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಯೋಗೀಶ್ ಮೂಲತಃ ಹಾಸನ ಜಿಲ್ಲೆಯವರು. ಕಳೆದ 8 ವರ್ಷಗಳ ಹಿಂದೆ ಬದುಕು ಕಟ್ಟಿಕೊಳ್ಳಲು ಬೆಂಗಳೂರಿಗೆ ಆಗಮಿಸಿದ್ದರು. ಬೆಂಗಳೂರು ಉತ್ತರ ತಾಲೂಕಿನ ಕೆಜಿ ಲಕ್ಕೆನಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ಪತ್ನಿ ಹಾಗೂ ತಮ್ಮನ ಜೊತೆ ವಾಸವಿದ್ದರು. ಡ್ರೈವರ್ ಕೆಲಸ ಮಾಡಿಕೊಂಡಿದ್ದ ಯೋಗೀಶ್,​ ತಮ್ಮನ ಮದುವೆಗೆ ಎಂದು 55 ಗ್ರಾಂ ನಷ್ಟು ಚಿನ್ನಾಭರಣ ಖರೀದಿಸಿದ್ದ. ಆದರೆ ಖತರ್ನಾಕ್​​ ಕಳ್ಳ ತನ್ನ ಕೈಚಳಕ ತೋರಿಸಿದ್ದಾನೆ.

ಇದನ್ನೂ ಓದಿ: ಭರ್ಜರಿ ಕಾರ್ಯಚರಣೆ: 4 ಕಳ್ಳತನ ಪ್ರಕರಣ ಭೇದಿಸಿದ ಕಲಬುರಗಿ ಪೊಲೀಸ್; 6 ಖದೀಮರ ಬಂಧನ

ಮನೆಯ ಬೀರುವಿನಲ್ಲಿ ಭದ್ರವಾಗಿ ಚಿನ್ನಾಭರಣ ಇಡಲಾಗಿತ್ತು. ಆದರೆ ಕಳೆದ ಎರಡು ದಿನದ ಹಿಂದೆ ಬೀರು ನೋಡಿದಾಗ ಯೋಗೀಶ್​​ ಶಾಕ್​ ಆಗಿದ್ದಾರೆ. ಏಕೆಂದರೆ ಬೀರುವಿನಲ್ಲಿದ್ದ ಚಿನ್ನಾಭರಣ ಕಳ್ಳತನವಾಗಿತ್ತು. ನಂತರ ಸಿಸಿಟಿವಿ ಪರಿಶೀಲನೆ ಮಾಡಿದಾಗ ಕಪ್ಪು ಬಣ್ಣದ ಶರ್ಟ್ ಧರಿಸಿ ಕಳ್ಳತನ ಮಾಡಿರುವುದು ಗೊತ್ತಾಗಿದೆ.

ಇದನ್ನೂ ಓದಿ: ಮತ್ತೊಮ್ಮೆ ಸುದ್ದಿಯಾದ ಕಾರವಾರ ಕಾರಾಗೃಹ; ಕೈದಿಗಳ ಬಳಿ ಏಳು ಮೊಬೈಲ್ ಪತ್ತೆ

ಇನ್ನು ಇದೆ ಮನೆಯ ಬೀಗ ಮುರಿಯದೆ ಕಳ್ಳತನವಾಗಿರುವುದರಿಂದ ನಕಲಿ ಕೀ ಬಳಸಿ ಕಳ್ಳತನ ಮಾಡಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಸದ್ಯ ಘಟನೆ ಸಂಬಂಧ 6 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣ ಕಳ್ಳತನವಾಗಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರಲ್ಲಿ ಮನವಿ ಮಾಡಿದ ಯೋಗೀಶ್ 

ಇನ್ನು ಘಟನೆ ಸಂಬಂಧ ಅಣ್ಣ ಯೋಗೀಶ್ ಮಾತನಾಡಿದ್ದು, ಸರ್ ನಾನು ಕಷ್ಟಪಟ್ಟು ದುಡಿದ ಹಣ. ದಯ ಮಾಡಿ ನಮಗೆ ಕಳುವಾದ ಚಿನ್ನಾಭರಣ ಕೊಡಿಸಿ ಎಂದು ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ವರದಿ: ಮಂಜುನಾಥ್ ಟಿವಿನೈನ್ ನೆಲಮಂಗಲ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:35 pm, Mon, 15 December 25

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ