AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್‌ ಬಾಗಿಲು; ರೋಗಿಗಳ ಪರದಾಟ

ಆ ಆಸ್ಪತ್ರೆಯಲ್ಲಿ ಗರ್ಭಿಣಿಗೆ ಇನ್ನೇನು ಕೆಲವೇ ನಿಮಿಷಗಳಲ್ಲಿ ಸಿ-ಸೆಕ್ಷನ್ ಡಿಲೆವರಿ ಮಾಡಬೇಕಿತ್ತು, ಆದ್ರೆ, ಆಸ್ಪತ್ರೆಗೆ ರಜೆಯ ಮೇಲಿದ್ದ ಅನಸ್ತೇಷಿಯಾ ವೈದ್ಯೆ ಹಠಾತ್ತನೆ ಬಂದು ಆಪರೇಷನ್ ಥಿಯೇಟರ್‌ಗೆ ಬೀಗ ಹಾಕಿ ಹೋಗಿರುವ ಘಟನೆ ನಡೆದಿದೆ.

ನೆಲಮಂಗಲ: ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್‌ ಬಾಗಿಲು; ರೋಗಿಗಳ ಪರದಾಟ
ಆಪರೇಷನ್ ಥಿಯೇಟರ್​ಗೆ ಬಾಗಿಲು ಹಾಕಿದ ಡಾ.ಚಂದ್ರಕಲಾ
ಕಿರಣ್ ಹನುಮಂತ್​ ಮಾದಾರ್
|

Updated on: Apr 16, 2023 | 3:15 PM

Share

ಬೆಂಗಳೂರು ಗ್ರಾಮಾಂತರ: ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್‌(Operation Theater)ಗೆ ಬಾಗಿಲು ಹಾಕಿದೆ. ವೈದ್ಯರು ಥಿಯೇಟರ್ ತಜ್ಞರು, ಗರ್ಭಿಣಿ ಸೇರಿದಂತೆ ಎಲ್ಲರೂ ಆಪರೇಷನ್ ಥಿಯೇಟರ್ ಬಾಗಿಲಿನಲ್ಲಿ ನಿಂತುಕೊಂಡಿದ್ದಾರೆ ಇದಕ್ಕೆಲ್ಲ ಕಾರಣ ಆಗಿರುವುದು ಇದೇ ಆಸ್ಪತ್ರೆಯ ಅನಸ್ತೇಷಿಯಾ(Anesthesia) ತಜ್ಞರಾದ ಡಾ. ಚಂದ್ರಕಲಾ ಅವರು ಆಪರೇಷನ್ ಥಿಯೇಟರ್‌ಗೆ ಬೀಗ ಹಾಕಿರುವುದು. ಹೌದು ಇದೇ ಏಪ್ರಿಲ್ 13ರಂದು ಜಿಲ್ಲೆಯ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಗ್ರಾಮದಲ್ಲಿರುವ ಸರ್ಕಾರಿ ಸಮುದಾಯ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಈ ಕುರಿತು ಆಸ್ಪತ್ರೆಯ ವೈದ್ಯರ ಮೇಲೆ ಶೀಘ್ರ ಕ್ರಮ ವಹಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.‌

ಇನ್ನು ಡಾ.ಚಂದ್ರಕಲಾ ಒಂದು ವಾರದ ರಜೆ ತೆಗೆದುಕೊಂಡಿದ್ದರಂತೆ, ಈ ವೇಳೆ ಸಿ ಸೆಕ್ಷನ್ ಡೆಲಿವರಿಗೆ ಗರ್ಭಿಣಿ ಮಹಿಳೆಯೊಬ್ಬರು ಬಂದಿದ್ದಾರೆ. ಆಸ್ಪತ್ರೆಯ ಆಡಳಿತ ವೈಧ್ಯಾಧಿಕಾರಿ ಹೇಗೋ ಮಾಡಿ ಖಾಸಗಿ ವೈದ್ಯರೊಬ್ಬರನ್ನ ಅನಸ್ತೇಷಿಯಾ ನೀಡಲು ನಿಯೋಜಿಸಿದ್ದಾರೆ. ಈ ವಿಷಯವನ್ನ ಅರಿತ ಡಾ.ಚಂದ್ರಕಲಾ ಹಠಾತ್ತನೆ ಆಸ್ಪತ್ರೆಗೆ ದೌಡಾಯಿಸಿ ಇನ್ನೇನು ಕೆಲ ನಿಮಿಷಗಳಲ್ಲಿ ಆಪರೇಷನ್ ಶುರು ಮಾಡಬೇಕು ಅನ್ನೋ ಅಷ್ಟರಲ್ಲಿ ಬಂದು, ಆಪರೇಷನ್ ಥಿಯೇಟರ್ ನನ್ನ ಕಂಟ್ರೋಲ್, ಇಲ್ಲಿ ನನ್ನನ್ನ ಕೇಳಿ ಆಪರೇಷನ್ ಮಾಡಬೇಕು ಎಂದು ದಬಾಯಿಸಿ ಆಪರೇಷನ್ ಥಿಯೇಟರ್‌ಗೆ ಬೀಗ ಜಡಿದು ಅಲ್ಲಿಂದ ಹೋಗಿದ್ದಾರೆ. ಬಳಿಕ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿ ಗರ್ಭಿಣಿ ಸ್ತ್ರೀಯನ್ನ ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ವರ್ಗಾಯಿಸಿ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿಸಿದ್ದಾರೆ.

ಇದನ್ನೂ ಓದಿ:ಜಿಮ್ಸ್​ ಆಸ್ಪತ್ರೆ ವೈದ್ಯರು ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿರುವ ಆರೋಪ: ಕ್ರಮ ಕೈಗೊಳ್ಳುವಂತೆ ಒತ್ತಾಯ

ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳು ಪತ್ರ ಬರೆದಿದ್ದು, ಜಿಲ್ಲಾ ಆರೋಗ್ಯಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅದೇನೆ ಇರಲಿ ರೋಗಿಗಳ ತುರ್ತು ಸಂದರ್ಭಕ್ಕೆ ಬಳಕೆಯಾಗಬೇಕಿದ್ದ ಆಸ್ಪತ್ರೆ, ವೈದ್ಯೆಯೊಬ್ಬರ ವೈಯಕ್ತಿಕ ಹಿತಾಸಕ್ತಿಗೆ ಬಲಿಯಾಗಿದ್ದು ಮಾತ್ರ ದುರಾದೃಷ್ಟಕರ.

ವರದಿ: ವಿನಾಯಕ್ ಗುರವ್ ಟಿವಿ9 ನೆಲಮಂಗಲ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!