AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ರೈತರಿಂದ ವಶಪಡಿಸಿಕೊಂಡ ಜಮೀನಿನಲ್ಲಿ ನಡೆಯುತ್ತಿದೆ ಅಕ್ರಮ ಗಣಿಗಾರಿಕೆ; ಕೈಕಟ್ಟಿ ಕುಳಿತ ಗಣಿ ಇಲಾಖೆ ಅಧಿಕಾರಿಗಳು

ಅದು ಸಿಲಿಕಾನ್ ಸಿಟಿ ಹೊರ ವಲಯದ ಅತಿ ದೊಡ್ಡ ಕೈಗಾರಿಕೆ ಪ್ರದೇಶ, ಅಲ್ಲಿ ಕೈಗಾರಿಕೆ ಪ್ರದೇಶಕ್ಕಾಗಿ ರೈತರಿಂದ ಕೆಐಡಿಬಿ ಸಾವಿರಾರು ಏಕರೆ ಪ್ರದೇಶ ವಶ ಪಡಿಸಿಕೊಂಡಿದೆ. ವಶ ಪಡಿಸಿಕೊಂಡ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆಯ ಕರಿ ಛಾಯೆ ಆವರಿಸಿದೆ. ಇದರ ವಿರುದ್ದ ಸಾರ್ವಜನಿಕರು ಇದೀಗ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ನೆಲಮಂಗಲ: ರೈತರಿಂದ ವಶಪಡಿಸಿಕೊಂಡ ಜಮೀನಿನಲ್ಲಿ ನಡೆಯುತ್ತಿದೆ ಅಕ್ರಮ ಗಣಿಗಾರಿಕೆ; ಕೈಕಟ್ಟಿ ಕುಳಿತ ಗಣಿ ಇಲಾಖೆ ಅಧಿಕಾರಿಗಳು
ನೆಲಮಂಗಲ ಅಕ್ರಮ ಗಣಿಗಾರಿಕೆ
TV9 Web
| Edited By: |

Updated on: Feb 11, 2023 | 4:50 PM

Share

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್‌ಪೇಟೆಯ ಕೈಗಾರಿಕೆ ಪ್ರದೇಶಕ್ಕಾಗಿ ಕೆಐಡಿಬಿ(Karnataka Industrial Area Development Board)ರೈತರ ಜಮೀನುಗಳನ್ನ ವಶ ಪಡಿಸಿಕೊಂಡಿದೆ. ಈ ವಶ ಪಡಿಸಿಕೊಂಡ ಪ್ರದೇಶದಲ್ಲಿ ಬಂಡೆ ಕಲ್ಲುಗಳಿದ್ದು, ಇವುಗಳನ್ನ ತಗೆದು ಸಮತಟ್ಟಾದ ಪ್ರದೇಶ ಮಾಡಲು ಗುತ್ತಿಗೆದಾರರಿಗೆ ಅನುಮತಿ ನೀಡಲಾಗಿದೆ. ಆದರೆ ಬಂಡೆ ಕಲ್ಲು ತಗೆಯುವಾಗ ಕೆಳ ಭಾಗದಲ್ಲಿ ಗ್ರಾನೈಟ್ ಕಲ್ಲು ಬಂಡೆಗಳು ಸಿಗುತ್ತಿದ್ದು, ಇದನ್ನೆ ಬಂಡವಾಳವಾಗಿಸಿಕೊಂಡು ಅಕ್ರಮವಾಗಿ ಗ್ರಾನೈಟ್ ಕಲ್ಲುಗಳನ್ನ ಹೊರ ತಗೆಯುತ್ತಿದ್ದಾರೆ. ಇನ್ನು ದಾಬಸ್‌ಪೇಟೆ ಕೈಗಾರಿಕೆ ಪ್ರದೇಶ ದಿನದಿಂದ ದಿನಕ್ಕೆ ಬೆಳೆಯುತ್ತಿದೆ ಹೀಗಾಗಿ ಇಲ್ಲಿ ಸ್ಥಳೀಯರು ಅಲ್ಲದೇ ಹೊರ ರಾಜ್ಯದ ಅದೆಷ್ಟೋ ಜನರಿಗೆ ಉದ್ಯೋಗಾವಕಾಶ ಸಿಕ್ಕಿದೆ. ಹೀಗಾಗಿ ಕೆಐಡಿಬಿ(KIDB) ಪ್ರದೇಶ ಕೂಡ ವಿಸ್ತೀರ್ಣಗೊಂಡಿದ್ದು, ಇಷ್ಟು ದಿವಸ 3 ಹಂತದಲ್ಲಿದ್ದ ಪ್ರದೇಶ ಇದೀಗ ಹೊನ್ನೆನಹಳ್ಳಿ ವ್ಯಾಪ್ತಿಯಲ್ಲಿ 4-5 ಹಂತಕ್ಕೆ ವಿಸ್ತೀರ್ಣಗೊಂಡಿದೆ.

ಇದೀಗ ಇದೇ ಪ್ರದೇಶದಲ್ಲಿ ನೂರಾರು ಏಕರೆ ಭೂಮಿ ಗುಡ್ಡಗಾಡು ಪ್ರದೇಶದಂತಿದೆ. ಹೀಗಾಗಿ ಹೊರ ಗುತ್ತಿಗೆಯವರಿಗೆ ಕಲ್ಲು ಬಂಡೆ ತಗೆದು ಸಮತಟ್ಟಾದ ಪ್ರದೇಶ ಮಾಡಲು ಗುತ್ತಿಗೆ ನೀಡಿದೆಯಾದರೆ ಅವರು ಇದರ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಇದರಿಂದಾಗಿ ಅಕ್ಕಪಕ್ಕದ ಗ್ರಾಮಸ್ಥರಿಗೂ ತೊಂದರೆಯಾಗುತ್ತಿದೆ, ಇದಕ್ಕೆ ಸಂಬಂಧಪಟ್ಟ ಕೆಐಡಿಬಿ, ಗಣಿ ಭೂ ವಿಜ್ಞಾನ ಇಲಾಖೆ ಎನು ಮಾಡುತ್ತಿದೆ ಎಂದು ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ. ಇನ್ನು ಇಲ್ಲಿ ಕೈಗಾರಿಕೆ ಪ್ರದೇಶ ವಿಕ್ಷಕರಾಗಿ ಗ್ರೌಂಡ್ ವರ್ಕರ್ ಇರಬೇಕು. ಆದರೆ ಇಲ್ಲಿ ಯಾರೊಬ್ಬರು ಕೂಡ ಇಲ್ಲ, ಹೀಗಾಗಿ ಇಲ್ಲಿ ಏನೇ ಮಾಡಿದರು ಯಾರು ಹೇಳುವವರು ಇಲ್ಲ, ಕೇಳುವವರು ಇಲ್ಲ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ.

ಇದನ್ನೂ ಓದಿ:ಹೊನ್ನಾಳಿಯ ಕೆಂಗನಳ್ಳಿಯಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ ತಡೆಯಲು ಶಾಸಕ ಎಮ್ ಪಿ ರೇಣುಕಾಚಾರ್ಯ ಯಾಕೆ ಹಿಂದೇಟು ಹಾಕುತ್ತಿದ್ದಾರೆ? ಗ್ರಾಮಸ್ಥರ ಪ್ರಶ್ನೆ

ಒಟ್ಟಿನಲ್ಲಿ ಕೆಐಡಿಬಿ ಕೈಗಾರಿಕೆ ಪ್ರದೇಶಕ್ಕೆ ರೈತರ ಜಮೀನುಗಳನ್ನ ತಗೆದುಕೊಂಡು ವಿವಿಧ ಕಂಪನಿಗಳಿಗೆ ಜಾಗ ನೀಡುತ್ತಿದೆ. ಇದರಿಂದ ಸ್ಥಳೀಯರಿಗೆ ಏನು ಅನುಕೂಲವಾಗಿದೆ. ರೈತರಿಂದ ಸ್ವಾಧೀನ ಪಡಿಸಿಕೊಂಡ ಹೊಸ ಭೂ ಪ್ರದೇಶಗಳಲ್ಲಿ ಬಂಡೆಗಳಿದ್ದು ಅವುಗಳನ್ನ ಸಮತಟ್ಟಾದ ಪ್ರದೇಶ ಮಾಡಲು ಗುತ್ತಿಗೆಯನ್ನ ನೀಡಲಾಗಿದೆ. ಆದರೆ ಇದನ್ನೆ ಬಂಡವಾಳವಾಗಿಸಿಕೊಂಡು ಗುತ್ತಿಗೆದಾರರು ತಮ್ಮ ಸ್ವಂತ ಲಾಭಕ್ಕಾಗಿ ಹೀಗೆ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕಾದ ಅಧಿಕಾರಿಗಳು ಕಂಡು ಕಾಣದಂತೆ ಸುಮ್ಮನೆ ಇರುವುದು ವಿಪರ್ಯಾಸವೇ ಸರಿ.!

ವರದಿ: ವಿನಾಯಕ್ ಗುರವ್ ಟಿವಿ9 ನೆಲಮಂಗಲ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್