ಅಯೋಧ್ಯೆ ರಾಮ ಮಂದಿರಕ್ಕೆ ಬೆಂಗಳೂರು ಕೈಗಾರಿಕೋದ್ಯಮಿಯಿಂದ ಬೃಹದಾಕಾರದ ‘ಅಳಿಲು’ ಸೇವೆ!

ಬೆಂಗಳೂರಿನ ನಾಗಸಂದ್ರ ಮೆಟ್ರೋ ಬಳಿಯ ಪ್ರಸಿದ್ಧಿ ಇಂಜಿನಿಯರ್ಸ್ ಕಂಪೆನಿಯ ಮಾಲೀಕರಾದ ಸಿ ಪ್ರಕಾಶ್ ಅವರು ಎರಡೂವರೆ ಟನ್ ಕಾರ್ಟನ್ ಸ್ಟೀಲ್ ಬಳಸಿ, 15 ಅಡಿ ಎತ್ತರ ಹಾಗೂ 7.5 ಅಡಿ ಅಗಲ ವಿಸ್ತೀರ್ಣದಲ್ಲಿ ಶ್ರೀರಾಮನ ಸೇವೆ ಎಂದು ನಿರ್ಮಿಸಿರುವ ಬೃಹದಾಕಾರದ ಅಳಿಲು ಪುತ್ಥಳಿ ಅಯೋಧ್ಯೆಯ ರೈಲ್ವೆ ನಿಲ್ದಾಣ ಆವರಣದ ಮಧ್ಯ ಭಾಗದಲ್ಲಿ ಅನಾವರಣಗೊಳ್ಳಲಿದೆ.

ಅಯೋಧ್ಯೆ ರಾಮ ಮಂದಿರಕ್ಕೆ ಬೆಂಗಳೂರು ಕೈಗಾರಿಕೋದ್ಯಮಿಯಿಂದ ಬೃಹದಾಕಾರದ ‘ಅಳಿಲು’ ಸೇವೆ!
ಬೆಂಗಳೂರು ಕೈಗಾರಿಕೋದ್ಯಮಿಯಿಂದ ಬೃಹದಾಕಾರದ ‘ಅಳಿಲು’ ಸೇವೆ!
Edited By: ಸಾಧು ಶ್ರೀನಾಥ್​

Updated on: Jan 06, 2024 | 1:49 PM

ರಾಮಾಯಣದಲ್ಲಿ ಶ್ರೀ ರಾಮಸೇತು ನಿರ್ಮಾಣದ ವೇಳೆ ಪುಟ್ಟ ಪ್ರಾಣಿ ಅಳಿಲು ಸಲ್ಲಿಸಿದ ಸೇವೆ ಪ್ರಶಂಸನಾರ್ಹ ಮತ್ತು ಗಮನ ಸೆಳೆಯುವಂತಹದ್ದು. ಇದೇ ಒಂದು ವಿಷಯವನ್ನಿಟ್ಟುಕೊಂಡು ಬೆಂಗಳೂರಿನ ನಾಗಸಂದ್ರದ ಕೈಗಾರಿಕೋದ್ಯಮಿಯೊಬ್ಬರು ನಿರ್ಮಿಸಿರುವ ಬೃಹದಾಕಾರದ ಅಳಿಲು ಪುತ್ಥಳಿ ಶ್ರೀರಾಮನ ಜನ್ಮಭೂಮಿ ಅಯೋಧ್ಯೆಯ ನವ ನಿರ್ಮಾಣದ ವೇದಿಕೆಯಲ್ಲಿ ಶಾಶ್ವತವಾಗಿ ವಿರಾಜಮಾನವಾಗಲಿದೆ.

ಬೆಂಗಳೂರಿನ ನಾಗಸಂದ್ರ ಮೆಟ್ರೋ ಬಳಿಯ ಪ್ರಸಿದ್ಧಿ ಇಂಜಿನಿಯರ್ಸ್ ಕಂಪೆನಿಯ ಮಾಲೀಕರಾದ ಸಿ ಪ್ರಕಾಶ್ ಅವರು ಎರಡೂವರೆ ಟನ್ ಕಾರ್ಟನ್ ಸ್ಟೀಲ್ ಬಳಸಿ, 15 ಅಡಿ ಎತ್ತರ ಹಾಗೂ 7.5 ಅಡಿ ಅಗಲ ವಿಸ್ತೀರ್ಣದಲ್ಲಿ ಶ್ರೀರಾಮನ ಸೇವೆ ಎಂದು ನಿರ್ಮಿಸಿರುವ ಬೃಹದಾಕಾರದ ಅಳಿಲು ಪುತ್ಥಳಿ ಅಯೋಧ್ಯೆಯ ರೈಲ್ವೆ ನಿಲ್ದಾಣ ಆವರಣದ ಮಧ್ಯ ಭಾಗದಲ್ಲಿ ಅನಾವರಣಗೊಳ್ಳಲಿದೆ.

ಇಂದು ಬೃಹದಾಕಾರದ ಅಳಿಲು ಪುತ್ಥಳಿ ಹೊತ್ತ ಟ್ರಕ್ ರಸ್ತೆ ಮಾರ್ಗವಾಗಿ ಅಯೋಧ್ಯೆಯತ್ತ ತೆರಳಿತು.ಇದೇ 11 ನೇ ತಾರೀಖು ಅಯೋಧ್ಯೆಗೆ ತಲುಪಲಿದ್ದು, 12 ನೇ ತಾರೀಖು ಅಯೋಧ್ಯೆ ರೈಲ್ವೆ ನಿಲ್ದಾಣ ಆವರಣದಲ್ಲಿ ಅಳಿಲು ಪ್ರತಿಷ್ಠಾಪನೆಗೊಳ್ಳಲಿದೆ. ಪ್ರತಿಷ್ಟಾಪನೆಗೆ ಸಂಬಂಧಿಸಿದಂತೆ ಈಗಾಗಲೇ ರೈಲ್ವೆ ಇಲಾಖೆ ಹಸಿರು ನಿಶಾನೆ ತೋರಿದೆಯಲ್ಲದೆ. ಸ್ಥಳವನ್ನೂ ನಿಗದಿ ಪಡಿಸಿದೆ ಎಂದು ಪುತ್ಥಳಿ ನಿರ್ಮಾತೃ ಸಿ. ಪ್ರಕಾಶ್ ಟಿವಿ 9ಗೆ ತಿಳಿಸಿದ್ದಾರೆ.

ಈ ಪುತ್ಥಳಿ ನಿರ್ಮಾಣಕ್ಕೆ ಕಾರ್ಟನ್ ಸ್ಟೀಲ್ ಬಳಸಿದ್ದು ಇದರಲ್ಲಿ ತಾಮ್ರದ ಮಿಶ್ರಣ ಇರುವುದರಿಂದ 100 ವರ್ಷಗಳಾದರೂ ಸಹ ಪುತ್ಥಳಿ ಯಾವುದೇ ರೀತಿ ಹಾಳಾಗಲು ಸಾಧ್ಯವಿಲ್ಲ. ಜೊತೆಗೆ ನಿರ್ವಹಣೆಗೆ ಯಾವುದೇ ವೆಚ್ಚ ತಗುಲುವುದಿಲ್ಲ ಎಂದು ಪುತ್ಥಳಿ ನಿರ್ಮಾಣ ಇಂಜಿನಿಯರ್ ಧನುಶ್ರೀ ಟಿವಿ 9ಗೆ ತಿಳಿಸಿದ್ದಾರೆ.

Also Read: ರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ಕೊಪ್ಪಳ ಯುವಕ; ಕುಟುಂಬ, ಜಿಲ್ಲೆಯ ಜನರಲ್ಲಿ ಮನೆ ಮಾಡಿದ ಸಂತಸ

ಅಳಿಲು ಪುತ್ಥಳಿಯ ವಿನ್ಯಾಸಗಾರ ಕಲ್ಯಾಣ್ ರಾಥೋಡ್ ಟಿವಿ 9 ಜೊತೆ ಮಾತನಾಡಿ ಮೊದಲಿಗೆ ಪೇಪರ್ ನಲ್ಲಿ ಪುತ್ಥಳಿಯ ಮಾಡೆಲ್ ರೆಡಿ ಮಾಡಿಕೊಂಡು ನಂತರ ಈ ರೀತಿಯ ಪುತ್ಥಳಿ ರೆಡಿ ಮಾಡಲು ಸಾಧ್ಯವಾಯಿತು. ಇದರಲ್ಲಿ ಉದ್ಯಮಿ ಪ್ರಕಾಶ್ ಅವರ ಆಸಕ್ತಿ ಜೊತೆಗೆ ಕಂಪನಿಯ ಕಾರ್ಮಿಕರ ಸ್ವಇಚ್ಛೆ ಸಫಲವಾಗಿದೆ ಎಂದಿದ್ದಾರೆ.

ಶ್ರೀರಾಮನ ಜನ್ಮಸ್ಥಳ ಅಯೋಧ್ಯೆಯಲ್ಲಿ ರಾಮಭಕ್ತ ಹನುಮನ ಜನ್ಮ ಭೂಮಿಯಾದ ಕರ್ನಾಟಕದ ವತಿಯಿಂದ ಈ ಅಳಿಲು ಸೇವೆ ಸಲ್ಲಿಕೆಯಾಗಿರುವುದು ಧನ್ಯತಾಭಾವದಿಂದ ಕೂಡಿದೆ ಎನ್ನುತ್ತಾರೆ ಪ್ರಕಾಶ್ ಪತ್ನಿ ಭಾರತಿ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

 

ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
Follow Us