AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ ಬಾಲಕಿ ಅಪಹರಣ ಪ್ರಕರಣ: ಕಿಡ್ನಾಪ್ ಅಲ್ಲ, ಅಲ್ಲಿ ನಡೆದದ್ದೇ ಬೇರೆ

ಪೋಲಿಸ್ ತನಿಖೆಯ ನಂತರ ಇದು ಕಿಡ್ನಾಪ್ ಪ್ರಕರಣವಲ್ಲ ಎಂಬುವುದು ಬೆಳಕಿಗೆ ಬಂದಿದ್ದು, ಬಾಲಕಿ ಸ್ವ ಇಚ್ಚೆಯಿಂದ ತೆರಳಿದ್ದಳು ಎಂದು ತಿಳಿದು ಬಂದಿದೆ. ಬಾಲಕಿ ನೆಲಮಂಗಲದಿಂದ ಲಾಸ್ಟ್ ಬಸ್ ಹತ್ತಿ ಯಶವಂತಪುರ ಬಸ್ ನಿಲ್ದಾಣದಲ್ಲಿ ಇಳಿದಿದ್ದಳು. ಅಲ್ಲಿಂದ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ತೆರಳಿ ಮೆಜೆಸ್ಟಿಕ್ನಿಂದ ರೇಜಾ ಎಂಬ ಯುವಕನ ಜೊತೆಗೂಡಿ ಮಂಡ್ಯದ ಮದ್ದೂರಿಗೆ ಪ್ರಯಾಣ ಬೆಳೆಸಿದ್ದರು.

ನೆಲಮಂಗಲ ಬಾಲಕಿ ಅಪಹರಣ ಪ್ರಕರಣ: ಕಿಡ್ನಾಪ್ ಅಲ್ಲ, ಅಲ್ಲಿ ನಡೆದದ್ದೇ ಬೇರೆ
ನೆಲಮಂಗಲ ಪೋಲಿಸ್ ಠಾಣೆ
ಬಿ ಮೂರ್ತಿ, ನೆಲಮಂಗಲ
| Edited By: ಆಯೇಷಾ ಬಾನು|

Updated on: Aug 19, 2023 | 11:29 AM

Share

ನೆಲಮಂಗಲ, (ಆಗಸ್ಟ್ 19): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇಡೀ ನೆಲಮಂಗಲವನ್ನೇ ಬೆಚ್ಚಿಬೀಳಿಸಿದ್ದ ಬಾಲಕಿ ಕಿಡ್ನಾಪ್(Kidnap) ಪ್ರಕರಣ ಸುಖಾಂತ್ಯ ಕಂಡಿದೆ. ಆಗಸ್ಟ್ 15ರ ಸ್ವಾತಂತ್ರ್ಯ ದಿನದಂದು ಅಡ್ರೆಸ್ ಕೇಳುವ ನೆಪದಲ್ಲಿ ಬಾಲಕಿಯನ್ನು ಅಪಹರಿಸಲಾಗಿತ್ತು. ಸದ್ಯ ಪ್ರಕರಣ ತನಿಖೆ ಮುಗಿದು ಹೊಸ ತಿರುವು ಪಡೆದುಕೊಂಡಿದ್ದು ಬಾಲಕಿ ಪೋಷಕರನ್ನು ಸೇರಿದ್ದಾಳೆ. ಆದ್ರೆ ಈ ಕಿಡ್ನಾಪ್ ಹಿಂದಿನ ಸತ್ಯ ಅರಿತು ಪೊಲೀಸರೇ ದಂಗಾಗಿದ್ದಾರೆ.

ಬಿಹಾರ ಮೂಲದ ಹದಿನಾರು ವರ್ಷದ ಬಾಲಕಿ ತನ್ನ ಸ್ನೇಹಿತೆಯ ಮನೆಗೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಅಪಹರಣ ಮಾಡಲಾಗಿತ್ತು. ಓರ್ವ ಮಹಿಳೆಯನ್ನೊಳಗೊಂಡ ಮೂರು ಮಂದಿ ರಾತ್ರಿ 11.23 ಸಮಯದಲ್ಲಿ ಬಾಲಕಿಯನ್ನು ಕಿಡ್ನಾಪ್ ಮಾಡಿದ್ದರು ಎಂದು ಮೊದಲು ತಿಳಿದು ಬಂದಿತ್ತು. ಕಿಡ್ನಾಪ್ ಕುರಿತಾಗಿ ಬಾಲಕಿಯ ಅಕ್ಕ ನೆಲಮಂಗಲ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಶೀಘ್ರವೇ ತನಿಖೆಯನ್ನು ಪ್ರಾರಂಭಿಸಿದ ಪೋಲಿಸರು, ಪ್ರಕರಣದ ಇನ್ನೊಂದು ಮುಖವನ್ನು ಬಯಲಿಗೆಳೆದಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ಟ್ರೈನ್​ ಕ್ರಾಸಿಂಗ್​ ವೇಳೆ ಉಂಟಾಗುವ ಟ್ರಾಫಿಕ್​​ಗೆ ಸಿಗಲಿದೆ ಮುಕ್ತಿ; 26 ಕಡೆ ರೈಲ್ವೆ ಲೆವೆಲ್ ಕ್ರಾಸಿಂಗ್ ನಿರ್ಮಾಣ

ಪೋಲಿಸ್ ತನಿಖೆಯ ನಂತರ ಇದು ಕಿಡ್ನಾಪ್ ಪ್ರಕರಣವಲ್ಲ ಎಂಬುವುದು ಬೆಳಕಿಗೆ ಬಂದಿದ್ದು, ಬಾಲಕಿ ಸ್ವ ಇಚ್ಚೆಯಿಂದ ತೆರಳಿದ್ದಳು ಎಂದು ತಿಳಿದು ಬಂದಿದೆ. ಬಾಲಕಿ ನೆಲಮಂಗಲದಿಂದ ಲಾಸ್ಟ್ ಬಸ್ ಹತ್ತಿ ಯಶವಂತಪುರ ಬಸ್ ನಿಲ್ದಾಣದಲ್ಲಿ ಇಳಿದಿದ್ದಳು. ಅಲ್ಲಿಂದ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ತೆರಳಿ ಮೆಜೆಸ್ಟಿಕ್ನಿಂದ ರೇಜಾ ಎಂಬ ಯುವಕನ ಜೊತೆಗೂಡಿ ಮಂಡ್ಯದ ಮದ್ದೂರಿಗೆ ಪ್ರಯಾಣ ಬೆಳೆಸಿದ್ದರು. ಮದ್ದೂರಿನಲ್ಲಿ ಬಾಡಿಗೆ ಮನೆಯನ್ನು ಮಾಡಿ ಇಬ್ಬರೂ ಎರಡು ದಿನ ವಾಸವಿದ್ರು. ಜಾಲಿ ಟ್ರಿಪ್ ಮಾಡ್ತಾ ಇದ್ರು. ಈ ಸಂದರ್ಭದಲ್ಲಿ ಬಾಲಕಿಯ ನಾನಾ ಬಗೆಯ ಫೋಟೋವನ್ನು ರೇಜಾ ಕ್ಲಿಕ್ಕಿಸಿದ್ದ. ಇತ್ತ ತನಿಖೆಯನ್ನು ಚುರುಕುಗೊಳಿದ ಪೊಲೀಸರ ತಂಡ ಮೊಬೈಲ್ ಟವರ್ ಆಧಾರದ ಮೇಲೆ ಜೋಡಿಯನ್ನು ಪತ್ತೆ ಹಚ್ಚುವಲ್ಲಿ ಸಫಲರಾಗಿದ್ದಾರೆ.

ಜೋಡಿಯನ್ನು ವಶಕ್ಕೆ ಪಡೆದ ಪೊಲೀಸರು, ಬಾಲಕಿಯನ್ನು ಪೋಷಕರ ಬಳಿ ಕಳುಹಿಸಿದ್ದಾರೆ. ಯುವಕನನ್ನು ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆದಿದ್ದಾರೆ. ನೆಲಮಂಗಲ ಪೋಲಿಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 1860, ರಿತ್ಯಾ 363 ಕಿಡ್ನಾಪ್ ಅಡಿಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ