AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಪೊಲೀಸ್ ಇಲಾಖೆಯಲ್ಲೊಬ್ಬ ಭೂಗಳ್ಳ; ಸುಮಾರು 25 ಕೋಟಿ ರೂ. ಜಮೀನು ಪರಭಾರೆ

ನೆಲಮಂಗಲದಲ್ಲಿ 25 ಕೋಟಿ ರೂ. ಮೌಲ್ಯದ ಭಾರೀ ಭೂಗಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ಪೊಲೀಸ್ ಇಲಾಖೆಯ ಹೆಡ್ ಕಾನ್ಸ್‌ಟೇಬಲ್ ವಿರುದ್ಧ ಭೂಮಿ ಮಾಲೀಕರಿಗೆ ತಿಳಿಯದಂತೆ ನಕಲಿ ದಾಖಲೆ ಸೃಷ್ಟಿಸಿ ಜಮೀನು ಲಪಟಾಯಿಸಿದ ಆರೋಪ ಕೇಳಿಬಂದಿದೆ. ಡಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪ್ರಕರಣದಲ್ಲಿ ಇನ್ನೂ ಹಲವರ ಕೈವಾಡವಿರುವುದು ತಿಳಿದುಬಂದಿದೆ.

ನೆಲಮಂಗಲ: ಪೊಲೀಸ್ ಇಲಾಖೆಯಲ್ಲೊಬ್ಬ ಭೂಗಳ್ಳ; ಸುಮಾರು 25 ಕೋಟಿ ರೂ. ಜಮೀನು ಪರಭಾರೆ
ಪೊಲೀಸ್ ಇಲಾಖೆಯಲ್ಲೊಬ್ಬ ಭೂಗಳ್ಳ; ಸುಮಾರು 25 ಕೋಟಿ ರೂ. ಜಮೀನು ಪರಭಾರೆ
ಮಂಜುನಾಥ ಕೆಬಿ
| Edited By: |

Updated on: Dec 13, 2025 | 8:39 AM

Share

ನೆಲಮಂಗಲ, ಡಿಸೆಂಬರ್ 13: ಪೊಲೀಸ್ ಇಲಾಖೆಯನ್ನೇ ಬೆಚ್ಚಿಬೀಳಿಸುವ ಭೂಗಳ್ಳತನದ ಭಾರೀ ಪ್ರಕರಣ ನೆಲಮಂಗಲ (Nelamangala) ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ವಂಚಕರನ್ನು ಸೆರೆ ಹಿಡಿಯಬೇಕಿದ್ದ ಆರಕ್ಷಕನ ವಿರುದ್ಧವೇ ಭೂಗಳ್ಳತನದ ಆರೋಪ ಕೇಳಿ ಬಂದಿದ್ದು, ನೆಲಮಂಗಲ ಗ್ರಾಮಾಂತರ ಠಾಣೆಯ ಹೆಡ್ ಕಾನ್ಸಟೇಬಲ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಸಸ್ಪೆಂಡ್ ಆಗಿ ಮನೆಲ್ಲಿದ್ದರೂ ಬುದ್ದಿ ಕಲಿಯದ ಆಸಾಮಿ

ಹೆಡ್ ಕಾನ್ಸಟೇಬಲ್ ಗಿರಿಜೇಶ್ ಜೊತೆಗೆ ಮನೋಜ್, ರೋಹಿಣಿ ಸೇರಿದಂತೆ ಇನ್ನೂ ಹಲವರ ವಿರುದ್ಧವೂ ಭೂಗಳ್ಳತನದ ಪ್ರಕರಣ ದಾಖಲಾಗಿದ್ದು, ಸುಮಾರು 25 ಕೋಟಿ ರೂ. ಮೌಲ್ಯದ ಭೂಮಿ ಲಪಟಾಯಿಸಿದ ಆರೋಪ ಕೇಳಿಬಂದಿದೆ. ಈ ಹಿಂದೆಯೂ ಗಿರಿಜೇಶ್ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದವು. ಸಸ್ಪೆಂಡ್ ಆಗಿ ಮನೆಲ್ಲಿದ್ದರೂ ಬುದ್ದಿ ಕಲಿಯದ ಆಸಾಮಿ, ಭೂ ಮಾಲೀಕರಿಗೆ ತಿಳಿಯದಂತೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಜಮೀನನ್ನು ತನ್ನ ಹಾಗೂ ಸಹಚರರ ಹೆಸರಿಗೆ ರಿಜಿಸ್ಟರ್ ಮಾಡಿಸಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ ಡೆತ್ ನೋಟ್ ಬರೆದಿಟ್ಟು MBA ವಿದ್ಯಾರ್ಥಿ ಆತ್ಮಹತ್ಯೆ: ಯುವಕನ ಬಲಿಪಡೆದ ಬೆತ್ತಲೆ ‌ಫೋಟೋ

25 ಕೋಟಿ ರೂ. ಮೌಲ್ಯದ 8 ಎಕರೆ ಜಮೀನು ಪರಭಾರೆ

ನೆಲಮಂಗಲ ತಾಲೂಕು ಸೋಂಪುರ ಹೋಬಳಿ, ಮಾಚನಹಳ್ಳಿ ಗ್ರಾಮದಲ್ಲಿರುವ ಥ್ಯಾಂಪಿ ಮ್ಯಾಥ್ಯೂ ಅವರಿಗೆ ಸೇರಿದ 8 ಎಕರೆ ಜಮೀನನ್ನು ಅವರಿಗೆ ತಿಳಿಯದೆ ಮೂರ್ನಾಲ್ಕು ಜನರ ಮೂಲಕ ರಿಜಿಸ್ಟರ್ ಮಾಡಲಾಗಿದೆ ಎಂದು ಎಫ್ಐಆರ್​ನಲ್ಲಿ ಉಲ್ಲೇಖಿಸಲಾಗಿದೆ. ಈ ಜಮೀನು ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ(‌ KIADB) ಸೇರಿದ್ದು, ಅದರ ಪರಿಹಾರ ಹಣ ಲಪಟಾಯಿಸಲು ಗಿರಿಜೇಶ್ ಯೋಜನೆ ರೂಪಿಸಿದ್ದಾನೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ರಿಜಿಸ್ಟರ್ ಆಗದೇ ಇದ್ದರೂ ದಾಖಲೆಗಳಲ್ಲಿ ಗಿರಿಜೇಶ್ ಹಾಗೂ ಇನ್ನಿಬ್ಬರ ಹೆಸರುಗಳಿರುವುದು ಅನುಮಾನಕ್ಕೆ ಕಾರಣವಾಗಿದೆ. ಈ ಸಂಬಂಧ ಥ್ಯಾಂಪಿ ಮ್ಯಾಥ್ಯೂ ನೀಡಿದ ದೂರಿನ ಮೇರೆಗೆ ಡಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್