AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಹ್ಯಾಬ್ ಸೆಂಟರ್​​ನಲ್ಲಿ ವ್ಯಕ್ತಿ ಅನುಮಾನಾಸ್ಪದ ಸಾವು: ಎಣ್ಣೆ ಬಿಡಿಸುವ ನೆಪದಲ್ಲಿ ಕೊಂದೇ ಬಿಟ್ರಾ?

ಆತ ಮದ್ಯಪಾನ ವ್ಯಸನಿಯಾಗಿದ್ದ. ಹೀಗಾಗಿ ಆತನ ಕುಟುಂಬ ಸಾಕಷ್ಟು ಪರಿತಪ್ಪಿಸುತಿತ್ತು. ಈ ನಡುವೆ ರಿಹ್ಯಾಬ್ ಸೆಂಟರ್​​ಗೆ ಸೇರಿಸುವಂತೆ ಸ್ನೇಹಿತರ ಸಲಹೆ ಮೇರೆಗೆ ದಾಖಲಿಸಲಾಗಿತ್ತು. ಆದರೆ ದಾಖಲಾದ ನಾಲ್ಕು ದಿನದಲ್ಲಿ ಆ ವ್ಯಕ್ತಿ ಸಾವನಪ್ಪಿರುವ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪ ಕೇಳಿಬಂದಿದೆ.

ರಿಹ್ಯಾಬ್ ಸೆಂಟರ್​​ನಲ್ಲಿ ವ್ಯಕ್ತಿ ಅನುಮಾನಾಸ್ಪದ ಸಾವು: ಎಣ್ಣೆ ಬಿಡಿಸುವ ನೆಪದಲ್ಲಿ ಕೊಂದೇ ಬಿಟ್ರಾ?
ಮೃತ ವ್ಯಕ್ತಿ
ಗಂಗಾಧರ​ ಬ. ಸಾಬೋಜಿ
|

Updated on:Dec 04, 2025 | 7:14 PM

Share

ನೆಲಮಂಗಲ, ಡಿಸೆಂಬರ್​​ 04: ಒಂದು ವಾರದ ಹಿಂದಷ್ಟೇ ರಿಹ್ಯಾಬ್ ಸೆಂಟರ್​​ನಲ್ಲಿ (rehab center) ಓರ್ವ ಯುವಕ ಮೃತಪಟ್ಟಿದ್ದ. ಆ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು. ಇದೀಗ ಅದರ ಬೆನ್ನಲ್ಲೇ  ಮತ್ತೋರ್ವ ವ್ಯಕ್ತಿಯ ಸಾವಾಗಿದೆ (death). ಬೆಂಗಳೂರಿನ ಮಾದನಾಯಕನಹಳ್ಳಿ ಬಳಿಯ ಅಮ್ಮೂಸ್ ರಿಹ್ಯಾಬ್ ಸೆಂಟರ್​​ನಲ್ಲಿ ಕೇರಳ ಮೂಲದ ಕೆ.ಜೆ.ಮನೀಶ್(42) ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದ್ದು, ಕೈ-ಕಾಲು ಕಟ್ಟಿ ಚಿತ್ರ ಹಿಂಸೆ ನೀಡಿ ಕೊಲೆ ಮಾಡಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ಸದ್ಯ ಮಾದನಾಯಕನಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೊಲೆ ಆರೋಪ

ಹೌದು.. ರಿಹ್ಯಾಬ್ ಸೆಂಟರ್​ನಲ್ಲಿ ಮತ್ತೋರ್ವ ವ್ಯಕ್ತಿ ಸಾವನಪ್ಪಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಉಪವಿಭಾಗದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಸೆಂಟರ್ ನಲ್ಲಿ ವ್ಯಕ್ತಿಯ ಕೈ, ಕಾಲುಗಳನ್ನ ಹಗ್ಗದಿಂದ ಕಟ್ಟಿ ಚಿತ್ರ ಹಿಂಸೆ ನೀಡಿ ಕೊಲೆ ಮಾಡಿರುವ ಗಂಭೀರ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ದರ್ಶನ್ ಸಾವು: ಪೊಲೀಸರಿಂದಲೇ ಕೊಲೆ ಆರೋಪ, ಪ್ರಕರಣ ಸಿಐಡಿ ಹೆಗಲಿಗೆ

ಕೇರಳದ ಮೂಲದ ಮನೀಶ್ (42) ಸಾವನಪ್ಪಿರುವ ವ್ಯಕ್ತಿ. ರಿಹ್ಯಾಬ್ ಸೆಂಟರ್​​ ಸಿಬ್ಬಂದಿ ಚಿತ್ರಹಿಂಸೆ ನೀಡಿರುವ ದೃಶ್ಯ ಸಿಸಿಟಿವಿಯಲ್ಲಿ ಕೂಡ ಸೆರೆಯಾಗಿದ್ದು, 2 ಗಂಟೆಗಳ ಕಾಲ ಇರಬೇಕಾದ ವಿಡಿಯೋ ಕೇವಲ 2:42 ನಿಮಿಷ ಮಾತ್ರ ಇರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

ಇನ್ನು ಕುಟುಂಬಸ್ಥರು ಮಾದನಾಯಕನಹಳ್ಳಿ ಬಳಿಯ ಅಮ್ಮೂಸ್ ರಿಹ್ಯಾಬ್ ಸೆಂಟರ್​ಗೆ ಮನೀಶ್​​ರನ್ನು 4 ದಿನದ ಹಿಂದೆ ಸೇರಿಸಿದ್ದರು. ಸದ್ಯ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಮನೀಶ್, ಮರಣೋತ್ತರ ಪರೀಕ್ಷೆಗೆ ನೆಲಮಂಗಲ ಶವಗಾರಕ್ಕೆ ಮೃತದೇಹವನ್ನು ರವಾನಿಸಲಾಗಿದ್ದು, ಪೊಲೀಸರು ವರದಿಗಾಗಿ ಕಾಯುತ್ತಿದ್ದಾರೆ. ಇತ್ತ ಕುಟುಂಬಸ್ಥರು ಕೊಲೆ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಎಂಕೆ ದೊಡ್ಡಿ ಲಾಕಪ್​ ಡೆತ್​ ಕೇಸ್​: ಎಎಸ್ಐ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್

ಇತ್ತೀಚೆಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರಿಹ್ಯಾಬ್ ಸೆಂಟರ್​ನಲ್ಲಿ ಯುವಕ ಸಾವನ್ನಪ್ಪಿದ್ದ ಪ್ರಕರಣ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೇ ಕೇಸ್​​ನಲ್ಲಿ ಅಧಿಕಾರಿಗಳ ತಲೆದಂಡಕ್ಕೆ ಕೂಡ ಕಾರಣವಾಗಿದ್ದು, ಇದೀಗ ಮನೀಶ್ ಸಾವು ಕೂಡ ಸಾಕಷ್ಟು ಅನುಮಾನಸ್ಪದ ರೀತಿಯಲ್ಲಿದ್ದು, ಪೊಲೀಸರು ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಬಯಲಿಗೆಳೆಯಬೇಕಿದೆ.

ವರದಿ: ಮಂಜುನಾಥ್ ಟಿವಿನೈನ್ ನೆಲಮಂಗಲ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:14 pm, Thu, 4 December 25

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ