AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಪ್ರೇಯಸಿಯೊಂದಿಗಿನ ಕಾಮದಾಟಕ್ಕೆ ಬಾಲ್ಯ ಸ್ನೇಹಿತನನ್ನೇ ಕೊಂದ ಗೆಳೆಯ

ನೆಲಮಂಗಲದಲ್ಲಿ ನಡೆದ ವಿಜಯ್ ಕೊಲೆ ಪ್ರಕರಣವನ್ನು ಪೊಲೀಸರು 48 ಗಂಟೆಯೊಳಗೆ ಭೇದಿಸಿದ್ದಾರೆ. ಏಳು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರೇಯಸಿಯೊಂದಿಗಿನ ಕಾಮದ ಆಟಕ್ಕೆ ಕೊಲೆ ಆರೋಪಿ ಧನಂಜಯ್ ತನ್ನ ಬಾಲ್ಯ ಸ್ನೇಹಿತ ವಿಜಯ್​​ನನ್ನೇ ಕೊಲೆ ಮಾಡಿದ್ದಾನೆ. ಮಾದನಾಯಕನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆಲಮಂಗಲ: ಪ್ರೇಯಸಿಯೊಂದಿಗಿನ ಕಾಮದಾಟಕ್ಕೆ ಬಾಲ್ಯ ಸ್ನೇಹಿತನನ್ನೇ ಕೊಂದ ಗೆಳೆಯ
ಆರೋಪಿ ಆಶಾ, ಧನಂಜಯ್​
ವಿವೇಕ ಬಿರಾದಾರ
|

Updated on: Aug 13, 2025 | 10:29 PM

Share

ನೆಲಮಂಗಲ, ಆಗಸ್ಟ್​ 13: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ನೆಲಮಂಗಲ (Nelamangala) ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಮಾದನಾಯಕನಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯ ಜನಪ್ರಿಯ ಲೇಔಟ್​ನಲ್ಲಿ ಸೋಮವಾರ (ಆ. 11) ರಾತ್ರಿ ವಿಜಯ್ ಎಂಬುವರನ್ನು ಕೊಲೆ ಮಾಡಲಾಗಿತ್ತು. ಕೊಲೆ ನಡೆದು 48 ಗಂಟೆಯಲ್ಲಿ ಪೊಲೀಸರು ಪ್ರಕರಣವನ್ನು ಭೇದಿಸಿದ್ದು, ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಧನಂಜಯ್, ರಮೇಶ್, ವಿವೇಕ್, ಸಾಗರ್, ಹೇಮಂತ್, ರೋಹಿತ್, ವಿಜಯ್ ​ ಪತ್ನಿ ಆಶಾ ಬಂಧಿತ ಆರೋಪಿಗಳು.

ಕೊಲೆ ಮಾಡಿದ ಬಳಿಕ ಪರಾರಿಯಾಗಿದ್ದ ಧನುಂಜಯ್​ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಇತ್ತ ತಟಸ್ಥವಾಗಿದ್ದ ಪತ್ನಿ ಆಶಾಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ, ಪ್ರಣಯರಾಜ ಧನಂಜಯ್ ಜೊತೆಗಿನ ಲವ್ವಿಡವ್ವಿ, ಕೈ ಮೇಲೆ ಹಚ್ಚೆ, ಫೋನ್​ನಲ್ಲಿದ್ದ ಪೋಟೋಗಳು ಪತ್ತೆಯಾಗಿದ್ದವು. ಆದರೆ, ಕೊಲೆ ಬಗ್ಗೆ ತನಗೆ ಏನೂ ಗೊತ್ತಿಲ್ಲ ಅಂತ ಆಶಾ ಹೇಳಿದ್ದಳು.

ಬಳಿಕ, ಪೊಲೀಸರು ಆರೋಪಿ ಧನುಂಜಯ್​ನನ್ನು ಪತ್ತೆ ಹಚ್ಚಿ ವಿಚಾರಣೆಗೆ ಒಳಪಡಿಸಿದಾಗ ಸತ್ಯ ಬಯಲಾಗಿದೆ. “ನಾನು (ಧನಂಜಯ್​) ಮತ್ತು ವಿಜಯ್ ​ಬಾಲ್ಯ ಸ್ನೇಹತರು. ವಿಜಯ್ ​ ಪತ್ನಿ, ಆಶಾ ಜೊತೆಯಲ್ಲಿ ಕರೆದುಕೊಂಡು ಹೋಗು ಅಂತ ನನಗೆ ಹೇಳುತ್ತಿದ್ದಳು. ನಿನ್ನ ಜೊತೆಗೆ ಬಂದುಬಿಡುತ್ತೇನೆ ಅಂತಿದ್ಲು. ನನ್ನ ಗಂಡನನ್ನು ಏನಾದರೂ ಮಾಡಿಕೊ. ನಿನ್ನ ಜೊತೆಗೆ ಬರುತ್ತಿದ್ದೇನೆ ಅಂತಿದ್ಲು. ಅಲ್ಲದೇ, ನನ್ನ (ಧನಂಜಯ್) ತಾಯಿಗೆ, ವಿಜಯ್ ​ ಬೆದರಿಕೆ ಹಾಕಿದ್ದನು. “ನಿನ್ನ ಮಗನನ್ನು ಬಿಡುವುದಿಲ್ಲ ಕೊಲೆ ಮಾಡುತ್ತೇನೆ” ಅಂತ ಅಂದಿದ್ದನು. ಇದೇ ಕಾರಣಕ್ಕೆ ನಾನು (ಧನಂಜಯ್)​ ಸ್ನೇಹಿತರನ್ನು ಕರೆದುಕೊಂಡು ಹೋಗಿ ಕೊಲೆ ಮಾಡಿದೆ” ಎಂದು ಬಾಯಿ ಬಿಟ್ಟಿದ್ದಾನೆ.

ಇದನ್ನೂ ಓದಿ: ಪತಿಯ ಕೊಲೆ ಅಳಿಯನ ತಲೆಗೆ ಕಟ್ಟಿ ಪ್ರಿಯಕರನ ಜೊತೆ ಜಾಲಿಯಾಗಿರಲು ಪ್ಲಾನ್​ ಮಾಡಿದ್ದ ಪತ್ನಿ

ಸದ್ಯ ಪೊಲೀಸರು ಏಳೂ ಮಂದಿ ಆರೋಪಿಗಳನ್ನ ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ಇನ್ನು, ಆರೋಪಿ ಆಶಾ ವಿಚಾರಣೆ ವೇಳೆ ಏನನ್ನೂ ಹೇಳದೆ ತಟಸ್ಥವಾಗಿದ್ದು, ಬೇರೆ ಬೇರೆ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದಾರೆ.

ವರದಿ: ಮಂಜುನಾಥ್ ಟಿವಿ9 ನೆಲಮಂಗಲ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!