AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಪ್ರೇಯಸಿಯೊಂದಿಗಿನ ಕಾಮದಾಟಕ್ಕೆ ಬಾಲ್ಯ ಸ್ನೇಹಿತನನ್ನೇ ಕೊಂದ ಗೆಳೆಯ

ನೆಲಮಂಗಲದಲ್ಲಿ ನಡೆದ ವಿಜಯ್ ಕೊಲೆ ಪ್ರಕರಣವನ್ನು ಪೊಲೀಸರು 48 ಗಂಟೆಯೊಳಗೆ ಭೇದಿಸಿದ್ದಾರೆ. ಏಳು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರೇಯಸಿಯೊಂದಿಗಿನ ಕಾಮದ ಆಟಕ್ಕೆ ಕೊಲೆ ಆರೋಪಿ ಧನಂಜಯ್ ತನ್ನ ಬಾಲ್ಯ ಸ್ನೇಹಿತ ವಿಜಯ್​​ನನ್ನೇ ಕೊಲೆ ಮಾಡಿದ್ದಾನೆ. ಮಾದನಾಯಕನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆಲಮಂಗಲ: ಪ್ರೇಯಸಿಯೊಂದಿಗಿನ ಕಾಮದಾಟಕ್ಕೆ ಬಾಲ್ಯ ಸ್ನೇಹಿತನನ್ನೇ ಕೊಂದ ಗೆಳೆಯ
ಆರೋಪಿ ಆಶಾ, ಧನಂಜಯ್​
ವಿವೇಕ ಬಿರಾದಾರ
|

Updated on: Aug 13, 2025 | 10:29 PM

Share

ನೆಲಮಂಗಲ, ಆಗಸ್ಟ್​ 13: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ನೆಲಮಂಗಲ (Nelamangala) ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಮಾದನಾಯಕನಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯ ಜನಪ್ರಿಯ ಲೇಔಟ್​ನಲ್ಲಿ ಸೋಮವಾರ (ಆ. 11) ರಾತ್ರಿ ವಿಜಯ್ ಎಂಬುವರನ್ನು ಕೊಲೆ ಮಾಡಲಾಗಿತ್ತು. ಕೊಲೆ ನಡೆದು 48 ಗಂಟೆಯಲ್ಲಿ ಪೊಲೀಸರು ಪ್ರಕರಣವನ್ನು ಭೇದಿಸಿದ್ದು, ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಧನಂಜಯ್, ರಮೇಶ್, ವಿವೇಕ್, ಸಾಗರ್, ಹೇಮಂತ್, ರೋಹಿತ್, ವಿಜಯ್ ​ ಪತ್ನಿ ಆಶಾ ಬಂಧಿತ ಆರೋಪಿಗಳು.

ಕೊಲೆ ಮಾಡಿದ ಬಳಿಕ ಪರಾರಿಯಾಗಿದ್ದ ಧನುಂಜಯ್​ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಇತ್ತ ತಟಸ್ಥವಾಗಿದ್ದ ಪತ್ನಿ ಆಶಾಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ, ಪ್ರಣಯರಾಜ ಧನಂಜಯ್ ಜೊತೆಗಿನ ಲವ್ವಿಡವ್ವಿ, ಕೈ ಮೇಲೆ ಹಚ್ಚೆ, ಫೋನ್​ನಲ್ಲಿದ್ದ ಪೋಟೋಗಳು ಪತ್ತೆಯಾಗಿದ್ದವು. ಆದರೆ, ಕೊಲೆ ಬಗ್ಗೆ ತನಗೆ ಏನೂ ಗೊತ್ತಿಲ್ಲ ಅಂತ ಆಶಾ ಹೇಳಿದ್ದಳು.

ಬಳಿಕ, ಪೊಲೀಸರು ಆರೋಪಿ ಧನುಂಜಯ್​ನನ್ನು ಪತ್ತೆ ಹಚ್ಚಿ ವಿಚಾರಣೆಗೆ ಒಳಪಡಿಸಿದಾಗ ಸತ್ಯ ಬಯಲಾಗಿದೆ. “ನಾನು (ಧನಂಜಯ್​) ಮತ್ತು ವಿಜಯ್ ​ಬಾಲ್ಯ ಸ್ನೇಹತರು. ವಿಜಯ್ ​ ಪತ್ನಿ, ಆಶಾ ಜೊತೆಯಲ್ಲಿ ಕರೆದುಕೊಂಡು ಹೋಗು ಅಂತ ನನಗೆ ಹೇಳುತ್ತಿದ್ದಳು. ನಿನ್ನ ಜೊತೆಗೆ ಬಂದುಬಿಡುತ್ತೇನೆ ಅಂತಿದ್ಲು. ನನ್ನ ಗಂಡನನ್ನು ಏನಾದರೂ ಮಾಡಿಕೊ. ನಿನ್ನ ಜೊತೆಗೆ ಬರುತ್ತಿದ್ದೇನೆ ಅಂತಿದ್ಲು. ಅಲ್ಲದೇ, ನನ್ನ (ಧನಂಜಯ್) ತಾಯಿಗೆ, ವಿಜಯ್ ​ ಬೆದರಿಕೆ ಹಾಕಿದ್ದನು. “ನಿನ್ನ ಮಗನನ್ನು ಬಿಡುವುದಿಲ್ಲ ಕೊಲೆ ಮಾಡುತ್ತೇನೆ” ಅಂತ ಅಂದಿದ್ದನು. ಇದೇ ಕಾರಣಕ್ಕೆ ನಾನು (ಧನಂಜಯ್)​ ಸ್ನೇಹಿತರನ್ನು ಕರೆದುಕೊಂಡು ಹೋಗಿ ಕೊಲೆ ಮಾಡಿದೆ” ಎಂದು ಬಾಯಿ ಬಿಟ್ಟಿದ್ದಾನೆ.

ಇದನ್ನೂ ಓದಿ: ಪತಿಯ ಕೊಲೆ ಅಳಿಯನ ತಲೆಗೆ ಕಟ್ಟಿ ಪ್ರಿಯಕರನ ಜೊತೆ ಜಾಲಿಯಾಗಿರಲು ಪ್ಲಾನ್​ ಮಾಡಿದ್ದ ಪತ್ನಿ

ಸದ್ಯ ಪೊಲೀಸರು ಏಳೂ ಮಂದಿ ಆರೋಪಿಗಳನ್ನ ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ಇನ್ನು, ಆರೋಪಿ ಆಶಾ ವಿಚಾರಣೆ ವೇಳೆ ಏನನ್ನೂ ಹೇಳದೆ ತಟಸ್ಥವಾಗಿದ್ದು, ಬೇರೆ ಬೇರೆ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದಾರೆ.

ವರದಿ: ಮಂಜುನಾಥ್ ಟಿವಿ9 ನೆಲಮಂಗಲ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ