AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಪ್ರೇಯಸಿಯೊಂದಿಗಿನ ಕಾಮದಾಟಕ್ಕೆ ಬಾಲ್ಯ ಸ್ನೇಹಿತನನ್ನೇ ಕೊಂದ ಗೆಳೆಯ

ನೆಲಮಂಗಲದಲ್ಲಿ ನಡೆದ ವಿಜಯ್ ಕೊಲೆ ಪ್ರಕರಣವನ್ನು ಪೊಲೀಸರು 48 ಗಂಟೆಯೊಳಗೆ ಭೇದಿಸಿದ್ದಾರೆ. ಏಳು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರೇಯಸಿಯೊಂದಿಗಿನ ಕಾಮದ ಆಟಕ್ಕೆ ಕೊಲೆ ಆರೋಪಿ ಧನಂಜಯ್ ತನ್ನ ಬಾಲ್ಯ ಸ್ನೇಹಿತ ವಿಜಯ್​​ನನ್ನೇ ಕೊಲೆ ಮಾಡಿದ್ದಾನೆ. ಮಾದನಾಯಕನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆಲಮಂಗಲ: ಪ್ರೇಯಸಿಯೊಂದಿಗಿನ ಕಾಮದಾಟಕ್ಕೆ ಬಾಲ್ಯ ಸ್ನೇಹಿತನನ್ನೇ ಕೊಂದ ಗೆಳೆಯ
ಆರೋಪಿ ಆಶಾ, ಧನಂಜಯ್​
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Aug 13, 2025 | 10:29 PM

Share

ನೆಲಮಂಗಲ, ಆಗಸ್ಟ್​ 13: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ನೆಲಮಂಗಲ (Nelamangala) ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಮಾದನಾಯಕನಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯ ಜನಪ್ರಿಯ ಲೇಔಟ್​ನಲ್ಲಿ ಸೋಮವಾರ (ಆ. 11) ರಾತ್ರಿ ವಿಜಯ್ ಎಂಬುವರನ್ನು ಕೊಲೆ ಮಾಡಲಾಗಿತ್ತು. ಕೊಲೆ ನಡೆದು 48 ಗಂಟೆಯಲ್ಲಿ ಪೊಲೀಸರು ಪ್ರಕರಣವನ್ನು ಭೇದಿಸಿದ್ದು, ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಧನಂಜಯ್, ರಮೇಶ್, ವಿವೇಕ್, ಸಾಗರ್, ಹೇಮಂತ್, ರೋಹಿತ್, ವಿಜಯ್ ​ ಪತ್ನಿ ಆಶಾ ಬಂಧಿತ ಆರೋಪಿಗಳು.

ಕೊಲೆ ಮಾಡಿದ ಬಳಿಕ ಪರಾರಿಯಾಗಿದ್ದ ಧನುಂಜಯ್​ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಇತ್ತ ತಟಸ್ಥವಾಗಿದ್ದ ಪತ್ನಿ ಆಶಾಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ, ಪ್ರಣಯರಾಜ ಧನಂಜಯ್ ಜೊತೆಗಿನ ಲವ್ವಿಡವ್ವಿ, ಕೈ ಮೇಲೆ ಹಚ್ಚೆ, ಫೋನ್​ನಲ್ಲಿದ್ದ ಪೋಟೋಗಳು ಪತ್ತೆಯಾಗಿದ್ದವು. ಆದರೆ, ಕೊಲೆ ಬಗ್ಗೆ ತನಗೆ ಏನೂ ಗೊತ್ತಿಲ್ಲ ಅಂತ ಆಶಾ ಹೇಳಿದ್ದಳು.

ಬಳಿಕ, ಪೊಲೀಸರು ಆರೋಪಿ ಧನುಂಜಯ್​ನನ್ನು ಪತ್ತೆ ಹಚ್ಚಿ ವಿಚಾರಣೆಗೆ ಒಳಪಡಿಸಿದಾಗ ಸತ್ಯ ಬಯಲಾಗಿದೆ. “ನಾನು (ಧನಂಜಯ್​) ಮತ್ತು ವಿಜಯ್ ​ಬಾಲ್ಯ ಸ್ನೇಹತರು. ವಿಜಯ್ ​ ಪತ್ನಿ, ಆಶಾ ಜೊತೆಯಲ್ಲಿ ಕರೆದುಕೊಂಡು ಹೋಗು ಅಂತ ನನಗೆ ಹೇಳುತ್ತಿದ್ದಳು. ನಿನ್ನ ಜೊತೆಗೆ ಬಂದುಬಿಡುತ್ತೇನೆ ಅಂತಿದ್ಲು. ನನ್ನ ಗಂಡನನ್ನು ಏನಾದರೂ ಮಾಡಿಕೊ. ನಿನ್ನ ಜೊತೆಗೆ ಬರುತ್ತಿದ್ದೇನೆ ಅಂತಿದ್ಲು. ಅಲ್ಲದೇ, ನನ್ನ (ಧನಂಜಯ್) ತಾಯಿಗೆ, ವಿಜಯ್ ​ ಬೆದರಿಕೆ ಹಾಕಿದ್ದನು. “ನಿನ್ನ ಮಗನನ್ನು ಬಿಡುವುದಿಲ್ಲ ಕೊಲೆ ಮಾಡುತ್ತೇನೆ” ಅಂತ ಅಂದಿದ್ದನು. ಇದೇ ಕಾರಣಕ್ಕೆ ನಾನು (ಧನಂಜಯ್)​ ಸ್ನೇಹಿತರನ್ನು ಕರೆದುಕೊಂಡು ಹೋಗಿ ಕೊಲೆ ಮಾಡಿದೆ” ಎಂದು ಬಾಯಿ ಬಿಟ್ಟಿದ್ದಾನೆ.

ಇದನ್ನೂ ಓದಿ: ಪತಿಯ ಕೊಲೆ ಅಳಿಯನ ತಲೆಗೆ ಕಟ್ಟಿ ಪ್ರಿಯಕರನ ಜೊತೆ ಜಾಲಿಯಾಗಿರಲು ಪ್ಲಾನ್​ ಮಾಡಿದ್ದ ಪತ್ನಿ

ಸದ್ಯ ಪೊಲೀಸರು ಏಳೂ ಮಂದಿ ಆರೋಪಿಗಳನ್ನ ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ಇನ್ನು, ಆರೋಪಿ ಆಶಾ ವಿಚಾರಣೆ ವೇಳೆ ಏನನ್ನೂ ಹೇಳದೆ ತಟಸ್ಥವಾಗಿದ್ದು, ಬೇರೆ ಬೇರೆ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದಾರೆ.

ವರದಿ: ಮಂಜುನಾಥ್ ಟಿವಿ9 ನೆಲಮಂಗಲ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ