AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಓಲೊ ಎಲೆಕ್ಟ್ರಿಕ್ ಬೈಕ್​ನಲ್ಲಿ ಬೆಂಕಿ, ಮೂರುವರೆ ಲಕ್ಷ ಮೌಲ್ಯದ ಬೈಕ್​ಗಳು ಭಸ್ಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್​ನಲ್ಲಿ ಎಲೆಕ್ಟ್ರಿಕ್ ಓಲೊ ಕಂಪನಿಯ ಬೈಕ್ ಬ್ಯಾಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕ್ಷಣ ಮಾತ್ರದಲ್ಲಿ ಎಲೆಕ್ಟ್ರಿಕ್ ಬೈಕ್ ಸೇರಿದಂತೆ ನಾಲ್ಕು ಬೈಕ್​ಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿ ಆರಿಸುವ ವೇಳೆ ಶ್ರೀಕಾಂತ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ವಾರದ ಹಿಂದೆಯಷ್ಟೇ ಶ್ರೀಕಾಂತ್ ಎಲೆಕ್ಟ್ರಿಕ್ ಬೈಕ್ ಖರೀದಿಸಿದ್ದರು.

ನೆಲಮಂಗಲ: ಓಲೊ ಎಲೆಕ್ಟ್ರಿಕ್ ಬೈಕ್​ನಲ್ಲಿ ಬೆಂಕಿ, ಮೂರುವರೆ ಲಕ್ಷ ಮೌಲ್ಯದ ಬೈಕ್​ಗಳು ಭಸ್ಮ
ಸುಟ್ಟ ಭಸ್ಮವಾದ ಬೈಕ್​ಗಳು
ಬಿ ಮೂರ್ತಿ, ನೆಲಮಂಗಲ
| Edited By: |

Updated on:Nov 14, 2023 | 10:25 AM

Share

ನೆಲಮಂಗಲ, ನ.14: ಎಲೆಕ್ಟ್ರಿಕ್ ಓಲೊ ಕಂಪನಿಯ ಬೈಕ್ ಬ್ಯಾಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕ್ಷಣ ಮಾತ್ರದಲ್ಲಿ ಎಲೆಕ್ಟ್ರಿಕ್ ಬೈಕ್ (Electric Bikes) ಸೇರಿದಂತೆ ನಾಲ್ಕು ಬೈಕ್​ಗಳು ಬೆಂಕಿಗೆ ಆಹುತಿಯಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್​ನಲ್ಲಿ ನಡೆದಿದೆ. ಶ್ರೀಕಾಂತ್ ಶರ್ಮಾ ಅವರಿಗೆ ಸೇರಿದ ಬೈಕ್ ಗಳಿಗೆ ಬೆಂಕಿ ತಗುಲಿದ್ದು ಬೆಂಕಿ ಆರಿಸುವ ವೇಳೆ ಶ್ರೀಕಾಂತ್ ಅವರಿಗೆ ಸಣ್ಣಪುಟ್ಟ (Injury) ಗಾಯಗಳಾಗಿವೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂರುವರೆ ಲಕ್ಷ ಬೆಲೆ ಬಾಳುವ ಬೈಕ್​ಗಳು ಸುಟ್ಟು ಭಸ್ಮವಾಗಿವೆ ಎಂಬ ಮಾಹಿತಿ ಸಿಕ್ಕಿದೆ.

ವಾರದ ಹಿಂದೆಯಷ್ಟೇ ಶ್ರೀಕಾಂತ್ ಎಲೆಕ್ಟ್ರಿಕ್ ಬೈಕ್ ಖರೀದಿಸಿದ್ದರು. ಮನೆಯ ಆವರಣದಲ್ಲಿ ಜೋರು ಶಬ್ದ ಕೇಳಿಸಿದಾಗ ಶ್ರೀಕಾಂತ್ ಆಚೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸುವ ಕಾರ್ಯ ಯಶಸ್ವಿಯಾಗಿದ್ದು ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು: ರಾತ್ರೊ ರಾತ್ರಿ ಶ್ರೀಮಂತರಾಗಬೇಕೆಂಬ ಆಸೆಯಿಂದ ಕಳ್ಳತನಕ್ಕೆ ಇಳಿದಿದ್ದ ಗ್ಯಾಂಗ್​ ಅರೆಸ್ಟ್​

ಶಾರ್ಟ್​ ಸರ್ಕ್ಯೂಟ್​​ನಿಂದ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಭಸ್ಮ

ಇನ್ನು ಮತ್ತೊಂದೆಡೆ ಮೈಸೂರು ಜಿಲ್ಲೆಯ ಹುಣಸೂರಿನ ಸ್ಟೋರ್ ಬೀದಿಯಲ್ಲಿ ಶೇಖರ್​ ಎಂಬುವರಿಗೆ ಸೇರಿದ ಮನೆಯಲ್ಲಿದ್ದ ವಸ್ತು ಸುಟ್ಟು ಭಸ್ಮವಾಗಿದೆ. ಅಂಗಡಿಯಿಂದ ಮನೆಗೆ ಬಟ್ಟೆ ತಂದು ಐರನ್ ಮಾಡ್ತಿದ್ದಾಗ ಅವಘಡ ಸಂಭವಿಸಿದ್ದು ಶಾರ್ಟ್​ ಸರ್ಕ್ಯೂಟ್​​ನಿಂದ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಭಸ್ಮವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಹುಣಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಐರನ್ ಮಾಡಿ ಜೀವನ ನಡೆಸುತ್ತಿದ್ದ ಶೇಖರ್​ ಅವರಿಗೆ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಐರನ್ ಮಾಡಲು ಬಹಳ ಬಟ್ಟೆ ಬಂದಿದ್ದವು. ಹೀಗಾಗಿ ಅವರು ಅಂಗಡಿಯಿಂದ ಮನೆಗೆ ತಂದು ಐರನ್ ಮಾಡುತ್ತಿದ್ದ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿದೆ. ಇದರಿಂದ ಬೆಂಕಿ ಹಚ್ಚಿಕೊಂಡಿದ್ದು ಮನೆಯಲ್ಲಿದ್ದ ಟಿವಿ, ವಾಷಿಂಗ್ ಮಷೀನ್ ಸೇರಿದಂತೆ ಹಲವು ವಸ್ತುಗಳು ಬೆಂಕಿಗಾಹುತಿಯಾಗಿವೆ. ಘಟನೆಯಲ್ಲಿ ಶೇಖರ್ ಅವರಿಗೆ ಗಾಯಗಳಾಗಿವೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:24 am, Tue, 14 November 23

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್