ನೆಲಮಂಗಲ: ಓಲೊ ಎಲೆಕ್ಟ್ರಿಕ್ ಬೈಕ್​ನಲ್ಲಿ ಬೆಂಕಿ, ಮೂರುವರೆ ಲಕ್ಷ ಮೌಲ್ಯದ ಬೈಕ್​ಗಳು ಭಸ್ಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್​ನಲ್ಲಿ ಎಲೆಕ್ಟ್ರಿಕ್ ಓಲೊ ಕಂಪನಿಯ ಬೈಕ್ ಬ್ಯಾಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕ್ಷಣ ಮಾತ್ರದಲ್ಲಿ ಎಲೆಕ್ಟ್ರಿಕ್ ಬೈಕ್ ಸೇರಿದಂತೆ ನಾಲ್ಕು ಬೈಕ್​ಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿ ಆರಿಸುವ ವೇಳೆ ಶ್ರೀಕಾಂತ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ವಾರದ ಹಿಂದೆಯಷ್ಟೇ ಶ್ರೀಕಾಂತ್ ಎಲೆಕ್ಟ್ರಿಕ್ ಬೈಕ್ ಖರೀದಿಸಿದ್ದರು.

ನೆಲಮಂಗಲ: ಓಲೊ ಎಲೆಕ್ಟ್ರಿಕ್ ಬೈಕ್​ನಲ್ಲಿ ಬೆಂಕಿ, ಮೂರುವರೆ ಲಕ್ಷ ಮೌಲ್ಯದ ಬೈಕ್​ಗಳು ಭಸ್ಮ
ಸುಟ್ಟ ಭಸ್ಮವಾದ ಬೈಕ್​ಗಳು
Edited By: ಆಯೇಷಾ ಬಾನು

Updated on: Nov 14, 2023 | 10:25 AM

ನೆಲಮಂಗಲ, ನ.14: ಎಲೆಕ್ಟ್ರಿಕ್ ಓಲೊ ಕಂಪನಿಯ ಬೈಕ್ ಬ್ಯಾಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕ್ಷಣ ಮಾತ್ರದಲ್ಲಿ ಎಲೆಕ್ಟ್ರಿಕ್ ಬೈಕ್ (Electric Bikes) ಸೇರಿದಂತೆ ನಾಲ್ಕು ಬೈಕ್​ಗಳು ಬೆಂಕಿಗೆ ಆಹುತಿಯಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್​ನಲ್ಲಿ ನಡೆದಿದೆ. ಶ್ರೀಕಾಂತ್ ಶರ್ಮಾ ಅವರಿಗೆ ಸೇರಿದ ಬೈಕ್ ಗಳಿಗೆ ಬೆಂಕಿ ತಗುಲಿದ್ದು ಬೆಂಕಿ ಆರಿಸುವ ವೇಳೆ ಶ್ರೀಕಾಂತ್ ಅವರಿಗೆ ಸಣ್ಣಪುಟ್ಟ (Injury) ಗಾಯಗಳಾಗಿವೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂರುವರೆ ಲಕ್ಷ ಬೆಲೆ ಬಾಳುವ ಬೈಕ್​ಗಳು ಸುಟ್ಟು ಭಸ್ಮವಾಗಿವೆ ಎಂಬ ಮಾಹಿತಿ ಸಿಕ್ಕಿದೆ.

ವಾರದ ಹಿಂದೆಯಷ್ಟೇ ಶ್ರೀಕಾಂತ್ ಎಲೆಕ್ಟ್ರಿಕ್ ಬೈಕ್ ಖರೀದಿಸಿದ್ದರು. ಮನೆಯ ಆವರಣದಲ್ಲಿ ಜೋರು ಶಬ್ದ ಕೇಳಿಸಿದಾಗ ಶ್ರೀಕಾಂತ್ ಆಚೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸುವ ಕಾರ್ಯ ಯಶಸ್ವಿಯಾಗಿದ್ದು ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು: ರಾತ್ರೊ ರಾತ್ರಿ ಶ್ರೀಮಂತರಾಗಬೇಕೆಂಬ ಆಸೆಯಿಂದ ಕಳ್ಳತನಕ್ಕೆ ಇಳಿದಿದ್ದ ಗ್ಯಾಂಗ್​ ಅರೆಸ್ಟ್​

ಶಾರ್ಟ್​ ಸರ್ಕ್ಯೂಟ್​​ನಿಂದ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಭಸ್ಮ

ಇನ್ನು ಮತ್ತೊಂದೆಡೆ ಮೈಸೂರು ಜಿಲ್ಲೆಯ ಹುಣಸೂರಿನ ಸ್ಟೋರ್ ಬೀದಿಯಲ್ಲಿ ಶೇಖರ್​ ಎಂಬುವರಿಗೆ ಸೇರಿದ ಮನೆಯಲ್ಲಿದ್ದ ವಸ್ತು ಸುಟ್ಟು ಭಸ್ಮವಾಗಿದೆ. ಅಂಗಡಿಯಿಂದ ಮನೆಗೆ ಬಟ್ಟೆ ತಂದು ಐರನ್ ಮಾಡ್ತಿದ್ದಾಗ ಅವಘಡ ಸಂಭವಿಸಿದ್ದು ಶಾರ್ಟ್​ ಸರ್ಕ್ಯೂಟ್​​ನಿಂದ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಭಸ್ಮವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಹುಣಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಐರನ್ ಮಾಡಿ ಜೀವನ ನಡೆಸುತ್ತಿದ್ದ ಶೇಖರ್​ ಅವರಿಗೆ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಐರನ್ ಮಾಡಲು ಬಹಳ ಬಟ್ಟೆ ಬಂದಿದ್ದವು. ಹೀಗಾಗಿ ಅವರು ಅಂಗಡಿಯಿಂದ ಮನೆಗೆ ತಂದು ಐರನ್ ಮಾಡುತ್ತಿದ್ದ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿದೆ. ಇದರಿಂದ ಬೆಂಕಿ ಹಚ್ಚಿಕೊಂಡಿದ್ದು ಮನೆಯಲ್ಲಿದ್ದ ಟಿವಿ, ವಾಷಿಂಗ್ ಮಷೀನ್ ಸೇರಿದಂತೆ ಹಲವು ವಸ್ತುಗಳು ಬೆಂಕಿಗಾಹುತಿಯಾಗಿವೆ. ಘಟನೆಯಲ್ಲಿ ಶೇಖರ್ ಅವರಿಗೆ ಗಾಯಗಳಾಗಿವೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:24 am, Tue, 14 November 23

ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
Follow Us