ನೆಲಮಂಗಲದಲ್ಲಿ ಹಿಟ್ ಆ್ಯಂಡ್ ರನ್​ಗೆ ವೃದ್ಧೆ ಬಲಿ

ನೆಲಮಂಗಲ(Nelamangala) ತಾಲೂಕಿನ ರಾಷ್ಟ್ರೀಯ ಹೆದ್ದಾರಿ4 ಆನಂದನಗರದಲ್ಲಿ ಹಿಟ್ ಆ್ಯಂಡ್ ರನ್​(Hit And Run)ಗೆ ವೃದ್ಧೆ ಬಲಿಯಾಗಿದ್ದಾರೆ. ರಸ್ತೆ ದಾಟುವ ವೇಳೆ ವೃದ್ದೆಗೆ ಕಾರು ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ನೆಲಮಂಗಲದಲ್ಲಿ ಹಿಟ್ ಆ್ಯಂಡ್ ರನ್​ಗೆ ವೃದ್ಧೆ ಬಲಿ
ನೆಲಮಂಗಲದಲ್ಲಿ ಹಿಟ್ ಆ್ಯಂಡ್ ರನ್​ಗೆ ವೃದ್ಧೆ ಬಲಿ
Edited By: ಕಿರಣ್ ಹನುಮಂತ್​ ಮಾದಾರ್

Updated on: Apr 07, 2024 | 1:27 PM

ಬೆಂಗಳೂರು ಗ್ರಾಮಾಂತರ, ಏ.07: ಜಿಲ್ಲೆಯ ನೆಲಮಂಗಲ(Nelamangala) ತಾಲೂಕಿನ ರಾಷ್ಟ್ರೀಯ ಹೆದ್ದಾರಿ4 ಆನಂದನಗರದಲ್ಲಿ ಹಿಟ್ ಆ್ಯಂಡ್ ರನ್​(Hit And Run)ಗೆ ವೃದ್ಧೆ ಬಲಿಯಾಗಿದ್ದಾರೆ. ರಸ್ತೆ ದಾಟುವ ವೇಳೆ ವೃದ್ದೆಗೆ ಕಾರು ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸಿರೇಸಂದ್ರದ ನಾರಯಣಮ್ಮ(66) ಮೃತ ರ್ದುದೈವಿ. ಅಪಘಾತದ ಬಳಿಕ ಕಾರಿನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಆಸ್ಪತ್ರೆಯಿಂದ ವಾಪಸ್ ಮನೆಗೆ ತೆರಳುವಾಗ ಈ ಅವಘಡ ಸಂಭವಿಸಿದೆ. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಗೂಡ್ಸ್​​ ವಾಹನ ಡಿಕ್ಕಿ; ಟ್ರ್ಯಾಕ್ಟರ್​​ನಲ್ಲಿದ್ದ ರೈತ ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ತಾಲೂಕಿನ ಹಲಗಾ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗೂಡ್ಸ್​​ ವಾಹನ ಡಿಕ್ಕಿಯಾಗಿ ಟ್ರ್ಯಾಕ್ಟರ್​​ನಲ್ಲಿದ್ದ ರೈತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬಸ್ತವಾಡ ಗ್ರಾಮದ ಮಲ್ಲಪ್ಪ ದೊಡ್ಡಕಲ್ಲನ್ನವರ್(41) ಮೃತ ರ್ದುದೈವಿ. ಅಪಘಾತದ ರಭಸಕ್ಕೆ ಟ್ರ್ಯಾಕ್ಟರ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಘಟನೆ ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ:Arunachal Crime: ಹೋಟೆಲ್​ವೊಂದರಲ್ಲಿ ಕೇರಳದ ದಂಪತಿ ಹಾಗೂ ಸ್ನೇಹಿತೆ ಸೇರಿ ಮೂವರ ನಿಗೂಢ ಸಾವು

ಚಳ್ಳಕೆರೆಯಲ್ಲಿ ಬೈಕ್ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಚಿತ್ರದುರ್ಗ: ಚಳ್ಳಕೆರೆಯ ಚಿತ್ರಯ್ಯನಹಟ್ಟಿಯಲ್ಲಿ ಕೆಎಸ್​ಆರ್​ಟಿಸಿ ನಿರ್ವಾಹಕ ‌ನಾಗರಾಜು ಎಂಬುವವರಿಗೆ ಸೇರಿದ ಬೈಕ್ ಕಳ್ಳತನವಾಗಿದೆ. ಮನೆ ಬಳಿ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಕುರಿತು ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:23 pm, Sun, 7 April 24

ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
Follow Us