AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಮಾನಾಸ್ಪದ ಸಾವು ಪ್ರಕರಣ ಭೇದಿಸಿದ ನೆಲಮಂಗಲ ಪೊಲೀಸರು: ನಾಲ್ವರ ಬಂಧನ

ಮದ್ಯದ ಅಮಲಿನಲ್ಲಿ ಕಾರಿನಿಂದ ಗುದ್ದಿ ಪಾದಾಚಾರಿಯ ಸಾವಿಗೆ ಕಾರಣವಾಗಿದ್ದ ನಾಲ್ವರು ಆರೋಪಿಗಳನ್ನು ನೆಲಮಂಗಲ ಟೌನ್​ ಪೊಲೀಸರು ಬಂಧಿಸಿದ್ದಾರೆ.

ಅನುಮಾನಾಸ್ಪದ ಸಾವು ಪ್ರಕರಣ ಭೇದಿಸಿದ ನೆಲಮಂಗಲ ಪೊಲೀಸರು: ನಾಲ್ವರ ಬಂಧನ
ನೆಲಮಂಗಲ ಪೊಲೀಸ್​ ಠಾಣೆ
ಬಿ ಮೂರ್ತಿ, ನೆಲಮಂಗಲ
| Edited By: ವಿವೇಕ ಬಿರಾದಾರ|

Updated on:Aug 11, 2023 | 9:00 AM

Share

ನೆಲಮಂಗಲ: ಆಗಸ್ಟ್ 5ರಂದು ಹೆದ್ದಾರಿ4ರ ಬ್ರಿಡ್ಜ್ ಬಳಿ ಅಪರಿಚಿತ ಶವವೊಂದು ಪತ್ತೆಯಾಗಿತ್ತು. ನೆಲಮಂಗಲ (Nelamangala) ಟೌನ್ ಪೊಲೀಸರು ಅನುಮಾನಾಸ್ಪದ ಸಾವೆಂದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ಇದೀಗ ಪೊಲೀಸರು (Police) ಪ್ರಕರಣವನ್ನು ಭೇದಿಸಿದ್ದು, ನಾಲ್ವರನ್ನು ಬಂಧಿಸಿದ್ದಾರೆ. ಬೆಂಗಳೂರಿನ (Bengaluru) ಲಗ್ಗೆರೆ ಮಂಜುನಾಥ್ (31), ಅರಿಶಿನಕುಂಟೆಯ ಅಬ್ದುಲ್ ಸಲಾಂ(34), ಸುನೀಲ್(26),ಶರಣ್ ಗೌಡ(27) ಬಂಧಿತ ಆರೋಪಿಗಳು. ಸಂತೋಷ್(32) ಮೃತ ದುರ್ದೈವಿ.

ನಾಲ್ವರು ಆರೋಪಿಗಳು ಆ.5 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಚಂದು ಡಾಬಾದಲ್ಲಿ ಕಂಠಪೂರ್ತಿ ಕುಡಿದಿದ್ದರು. ಮದ್ಯದ ಅಮಲಿನಲ್ಲಿ ಕಾರು ಚಾಲನೆ ಮಾಡಿ ನೆಲಮಂಗಲ ಟೌನ್ ದಾನೋಜಿಪಾಳ್ಯ ಬಳಿ ಪಾದಚಾರಿ ಸಂತೋಷ್​ಗೆ ಕಾರಿನಿಂದ ಗುದ್ದಿ ಪರಾರಿಯಾಗಿದ್ದರು.

ಇದನ್ನೂ ಓದಿ: ನೆಲಮಂಗಲ: ಶೋಕಿ ಜೀವನಕ್ಕಾಗಿ ಬೈಕ್ ಕದಿಯುತ್ತಿದ್ದ ಕಳ್ಳ ಸ್ನೇಹಿತರು ಅರೆಸ್ಟ್

ಸಂತೋಷ್​ ಮೃತ ದೇಹ ಹೆದ್ದಾರಿ4ರ ಬ್ರಿಡ್ಜ್ ಬಳಿ ಪತ್ತೆಯಾಗಿತ್ತು. ವಿಷಯ ತಿಳಿದ ನೆಲಮಂಗಲ ಟೌನ್​ ಪೊಲೀಸರು ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಈ ಕುರಿತು ತಿನಿಖೆ ನಡೆಸುವಾಗ ಪೊಲೀಸರಿಗೆ ಮೃತ ಸಂತೋಷ್ ರಸ್ತೆ ಪಕ್ಕದಲ್ಲಿ ನಡೆದು ಬರುತ್ತಿದ್ದ ಸಿಸಿಟಿವಿ ದೃಶ್ಯ ಲಭ್ಯವಾಗಿದೆ. ಇದರ ಅಧಾರದ ಮೇಲೆ ಪ್ರಕರಣ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇದೀಗ ತನಿಖೆ ಪೂರ್ಣಗೊಳಿಸಿ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಗೆ ಪ್ರಕರಣ ವರ್ಗಾವಣೆ ಮಾಡಿದ್ದಾರೆ.

ಟ್ರಾಕ್ಟರ್ ಮತ್ತು ಬೊಲೆರೋ ಜೀಪ್ ನಡುವೆ ಅಪಘಾತ

ದೇವನಹಳ್ಳಿ: ಟ್ರಾಕ್ಟರ್ ಮತ್ತು ಬೊಲೆರೋ ಜೀಪ್ ನಡುವೆ ಅಪಘಾತ ಸಂಭವಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ‌ ಹೊಸಕೋಟೆ ತಾಲೂಕಿನ ತಾವರೆಕೆರೆ ಗ್ರಾಮದ ಎನ್​ಹೆಚ್​ 75 ರ ಪ್ಲೈ ಒವರ್ ಮೇಲೆ ನಡೆದಿದೆ. ಅಪಘಾತದ ರಬಸಕ್ಕೆ ಹೆದ್ದಾರಿಯಲ್ಲಿ ಪಲ್ಟಿಯಾದ‌ ಟ್ರಾಕ್ಟರ್ ಟ್ರಾಲಿ ಪಲ್ಟಿಯಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಓರ್ವನ ಸ್ಥಿತಿ ಗಂಭೀರವಾಗಿದ್ದು ಸ್ಥಳಿಯ ಆಸ್ವತ್ರೆಗೆ ದಾಖಲಿಸಲಾಗಿದೆ. ಟ್ರಾಕ್ಟರ್​ನಲ್ಲಿ ತೋಟಕ್ಕೆ ಗೊಬ್ಬರ ತುಂಬಲು ಹೋಗುತ್ತಿದ್ದ ವೇಳೆ ಬೊಲೆರೋ ಜೀಪ್ ಡಿಕ್ಕಿ ಹೊಡದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:56 am, Fri, 11 August 23

Follow Us
ಬಿ ಮೂರ್ತಿ, ನೆಲಮಂಗಲ
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?