AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ವಾಹನಕ್ಕೆ ಸಿಲುಕಿ 4 ವರ್ಷದ ಬಾಲಕಿ ಸಾವು: ತಾಯಿ ಕಣ್ಣೆದುರೇ ಉಸಿರು ಚೆಲ್ಲಿದ ಕಂದಮ್ಮ

Nelamangala Tragedy: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ದಾಸನಪುರ ಬಳಿ ಶಾಲಾ ಬಸ್ ಹರಿದು 4 ವರ್ಷದ ಕಂದಮ್ಮ ತಾಯಿಯ ಕಣ್ಣೆದುರೇ ದಾರುಣವಾಗಿ ಮೃತಪಟ್ಟಿದ್ದಾಳೆ. ಕಿಡ್ಸ್ ಇಂಟರ್‌ನ್ಯಾಷನಲ್ ಶಾಲಾ ಬಸ್ ಚಾಲಕನ ನಿರ್ಲಕ್ಷ್ಯವೇ ಅವಘಡಕ್ಕೆ ಕಾರಣ ಎನ್ನಲಾಗಿದ್ದು, ಘಟನೆ ಬಳಿಕ ವಾಹನ ಬಿಟ್ಟು ಚಾಲಕ ಎಸ್ಕೇಪ್​​ ಆಗಿದ್ದಾನೆ. ಬಾಲಕಿಯನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಕಾಗಿ ನೆಲಮಂಗಲದ ಶವಾಗಾರಕ್ಕೆ ರವಾನಿಸಲಾಗಿದೆ.

ಶಾಲಾ ವಾಹನಕ್ಕೆ ಸಿಲುಕಿ 4 ವರ್ಷದ ಬಾಲಕಿ ಸಾವು: ತಾಯಿ ಕಣ್ಣೆದುರೇ ಉಸಿರು ಚೆಲ್ಲಿದ ಕಂದಮ್ಮ
ಮೃತ ಬಾಲಕಿImage Credit source: Tv9 Kannada
ಪ್ರಸನ್ನ ಹೆಗಡೆ
|

Updated on:Jul 08, 2026 | 7:30 PM

Share

ಮುಖ್ಯಾಂಶಗಳು

  • ನೆಲಮಂಗಲದ ದಾಸನಪುರದಲ್ಲಿ ಬಾಲಕಿ ದಾರುಣ ಸಾವು
  • ಶಾಲಾ ಬಸ್​​ ಹರಿದ ಪರಿಣಾಮ ಪ್ರಾಣಬಿಟ್ಟ 4 ವರ್ಷದ ಬಾಲಕಿ
  • ತಾಯಿ ಕಣ್ಣೆದುರೇ ದುರಂತ ಅಂತ್ಯಕಂಡ 4 ವರ್ಷದ ತನುಶಾ

ನೆಲಮಂಗಲ, ಜುಲೈ 08: ಶಾಲಾ ವಾಹನಕ್ಕೆ ಸಿಲುಕಿ 4 ವರ್ಷದ ಬಾಲಕಿ ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು (Bengaluru) ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ದಾಸನಪುರ ಬಳಿ ನಡೆದಿದೆ. ತನುಶಾ ಮೃತ ದುರ್ದೈವಿ. ವಾಹನ ರಿವರ್ಸ್​​ ತೆಗೆದುಕೊಳ್ಳುವಾಗ ಅವಘಡ ನಡೆದಿದ್ದು, ಬಾಲಕಿ ಬಸ್​ನ ಮುಂಭಾಗದ ಚಕ್ರಕ್ಕೆ ಸಿಲುಕಿ ದುರ್ಮರಣ ಹೊಂದಿದ್ದಾಳೆ. ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂಬ ಆರೋಪ ಕೇಳಿಬಂದಿದೆ.

ತಾಯಿಯ ಕಣ್ಣೆದುರೇ ಪ್ರಾಣಬಿಟ್ಟ ಬಾಲಕಿ

ತನುಶಾ, ತುಮಕೂರಿನ ಹೆಬ್ಬೂರು ನಿವಾಸಿಗಳಾಗಿರುವ ಕಿಶೋರ್ ಮತ್ತು ಮಧುಸ್ಮಿತಾ ದಂಪತಿಯ ಎರಡನೇ ಮಗು ಎನ್ನಲಾಗಿದೆ. ಶಾಂತಿನಗರದ ಆರ್​​ಟಿಒದಲ್ಲಿ ಕೆಲಸ ಮಾಡುತ್ತಿದ್ದ ಕಿಶೋರ್, ಮಧ್ಯಾಹ್ನ ಈಕೆಯನ್ನು ಶಾಲೆಯಿಂದ ಕರೆತಂದಿದ್ದರು. ಆ ಬಳಿಕ ಸಂಜೆ ಮೊದಲ ಮಗಳು ಹನಿಕಾ ಕೂಡ ಶಾಲೆಯಿಂದ ಬರಲಿರುವ ಕಾರಣ ಆಕೆಯನ್ನು ಕರೆತರಲೆಂದು ತಾಯಿ ಮಧುಸ್ಮಿತಾ ತೆರಳಿದ್ದರು. ಈ ವೇಳೆ ತನುಶಾಳನ್ನು ಸಹ ಅವರು ಕರೆದೊಯ್ದಿದ್ದರು. ಆದರೆ ದುರ್ದೈವ ಎಂಬಂತೆ ಹನಿಕಾಳನ್ನ ಕರೆತರುವಷ್ಟರಲ್ಲಿ ಅಲ್ಲೇ ಆಡಲು ಶುರುಮಾಡಿದ್ದ ಬಾಲಕಿಯ ಮೇಲೆ ಶಾಲಾ ಬಸ್​​ ಹರಿದಿದೆ. ಪರಿಣಾಮ ತಾಯಿಯ ಕಣ್ಣೆದುರೇ ತನುಶಾ ಉಸಿರು ಚೆಲ್ಲಿದ್ದಾಳೆ.

ಇದನ್ನೂ ಓದಿ: ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು; ಸಿಡಿದೆದ್ದ ಪೋಷಕರು, ಪರಿಸ್ಥಿತಿ ಉದ್ವಿಗ್ನ

ಶಾಲಾ ಬಸ್​​ ಚಾಲಕ ಎಸ್ಕೇಪ್​​!

ಇನ್ನು ಅಪಘಾತದ ಬೆನ್ನಲ್ಲೇ ಶಾಲಾ ಬಸ್​​ನ ಚಾಲಕ ಸ್ಥಳದಿಂದ ಎಸ್ಕೇಪ್​​ ಆಗಿದ್ದು, ಮೃತ ಬಾಲಕಿಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಚಿಕ್ಕಬಾಣಾವರ ಸಂಚಾರಿ ಪೊಲೀಸರೂ ಸ್ಥಳಕ್ಕೆ ಭೇಟಿ ಕೊಟ್ಟಿದ್ದು, ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಕಾಗಿ ನೆಲಮಂಗಲದ ಶವಾಗಾರಕ್ಕೆ ರವಾನಿಸಲಾಗಿದೆ. ಬಾಲಕಿ ಬಲಿ ಪಡೆದ ವಾಹನ ಕಿಡ್ಸ್​ ಇಂಟರ್​ನ್ಯಾಷನಲ್​ ಶಾಲೆಗೆ ಸೇರಿದ್ದು ಎಂಬುದು ಗೊತ್ತಾಗಿದೆ.

ವರದಿ: ಮಂಜುನಾಥ್​​, ಟಿವಿ9 ನೆಲಮಂಗಲ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:29 pm, Wed, 8 July 26

Follow Us
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ