AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಆಘಾತ: ಆಮಂತ್ರಣ ಕೊಡಲು ಹೋದ ವೇಳೆ ಮನೆಗೆ ಕನ್ನ, ವಧುವಿಗೆಂದು ತಂದಿದ್ದ ಆಭರಣ ಕದ್ದ ಕಳ್ಳರು

ನೆಲಮಂಗಲದಲ್ಲಿ ಮಗಳ ಮದುವೆ ತಯಾರಿಯಲ್ಲಿದ್ದ ಕುಟುಂಬಕ್ಕೆ ಆಘಾತ ಎದುರಾಗಿದೆ. ಆಮಂತ್ರಣ ನೀಡಲು ಪರವೂರಿಗೆ ಹೋದಾಗ ಮನೆಗೆ ಕನ್ನ ಹಾಕಿರುವ ಖದೀಮರು, ವಧುವಿಗೆಂದು ತಂದಿದ್ದ 60 ಗ್ರಾಂಗೂ ಅಧಿಕ ಚಿನ್ನಾಭರಣ ದೋಚಿದ್ದಾರೆ. ಈ ಕಳ್ಳತನದಿಂದ ಮದುವೆ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ತೀವ್ರ ಸಂಕಷ್ಟ ಎದುರಾಗಿದ್ದು, ವಿವಾಹ ನಡೆಸುವುದು ಹೇಗೆಂದು ಆತಂಕಕ್ಕೀಡಾಗಿದೆ. ಪೊಲೀಸರು ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.

ಮದುವೆ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಆಘಾತ: ಆಮಂತ್ರಣ ಕೊಡಲು ಹೋದ ವೇಳೆ ಮನೆಗೆ ಕನ್ನ, ವಧುವಿಗೆಂದು ತಂದಿದ್ದ ಆಭರಣ ಕದ್ದ ಕಳ್ಳರು
ಬಂಗಾರದ ಆಭರಣಗಳ ಕಳವುImage Credit source: Tv9 Kannada
ಪ್ರಸನ್ನ ಹೆಗಡೆ
|

Updated on:May 05, 2026 | 4:46 PM

Share

ನೆಲಮಂಗಲ, ಮೇ 05: ಮಗಳ ಮದುವೆ ತಯಾರಿಯಲ್ಲಿದ್ದ ಕುಟುಂಬವೊಂದು ಆಮಂತ್ರಣಪತ್ರ ಕೊಡಲು ಪರವೂರಿಗೆ ಹೋಗಿಬರುವುದರ ಒಳಗೆ ವಿವಾಹಕ್ಕೆಂದು ಮಾಡಿಸಿಟ್ಟ ಮನೆಯಲ್ಲಿದ್ದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ನೆಲಮಂಗಲ ಬಳಿಯ ದಾಸನಪುರದ ಮುನೇಶ್ವರ ಬಡಾವಣೆಯಲ್ಲಿ ನಡೆದಿದೆ. ಶಿವ ಮತ್ತು ಲೋಕೇಶ್ವರಿ ಎಂಬುವವರ ಮನೆಯ ಡೋರ್ ಒಡೆದು ಒಳ ನುಗ್ಗಿರುವ ಕಳ್ಳರು ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಚಿನ್ನಾಭರಣ, ನಗದು ದೋಚಿ ಎಸ್ಕೇಪ್​​ ಆಗಿದ್ದಾರೆ.

  • ಮದುವೆ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಬಿಗ್​​ ಶಾಕ್​​
  • ಆಮಂತ್ರಣ ಕೊಡಲು ಹೋದ ವೇಳೆ ಮನೆಗೆ ಕನ್ನ
  • ವಧುವಿಗೆಂದು ತಂದಿದ್ದ ಬಂಗಾರದ ಆಭರಣಗಳು ಕಳವು

ತಮಿಳುನಾಡಿನ ಮೂಲವರಾದ ಲೋಕೇಶ್ವರಿ ಹಾಗೂ ಶಿವ ಎಂಬವರು ಸಾಕಷ್ಟು ವರ್ಷದಿಂದ ನೆಲಮಂಗಲದಲ್ಲಿ ನೆಲೆಸಿ ತಮ್ಮ ಜೀವನ ಕಟ್ಟುಕೊಂಡಿದ್ದರು. ಕೂಲಿ ನಾಲಿ ಮಾಡಿ ಜೀವನ ನಡೆಸುತ್ತಿದ್ದ ಇವರು ತಮ್ಮ ಮೂರನೇ ಮಗಳಾದ ಶಂಕರಿ ಮದುವೆ ತಯಾರಿಯಲ್ಲಿದ್ದರು. ಈ ಹಿನ್ನೆಲೆ ಕೂಡಿಟ್ಟ ಹಣದ ಜೊತೆಗೆ ಸಾಲ ಮಾಡಿ ಮಗಳಿಗೆ ಚಿನ್ನಾಭರಣ ತಂದಿದ್ದರು. ಈ ನಡುವೆ ಮದುವೆ ಆಮಂತ್ರಣ ಪತ್ರಿಕೆಯನ್ನ ವರನ ಮನೆಯವರಿಗೆ ಕೊಡಲೆಂದು ತಮಿಳುನಾಡಿಗೆ ಹೋಗಿ ಬರುವುದರ ಒಳಗೆ ಅವು ಕಳ್ಳರಪಾಲಾಗಿವೆ. ವಧುವಿಗೆಂದು ಖರೀದಿಸಿದ್ದ ನೆಕ್ಲೆಸ್, ಕಿವಿ ಓಲೆ, ಸೇರಿದಂತೆ 60 ಗ್ರಾಂಗಳಿಗೂ ಅಧಿಕ ಒಡವೆ ಮನೆಯಲ್ಲಿತ್ತು ಎನ್ನಲಾಗಿದೆ.

ಇದನ್ನೂ ಓದಿ: ಸಚಿವ ಜಮೀರ್ ಮನೆಯಲ್ಲಿ 1.13 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕದ್ದಿದ್ದ ಇಬ್ಬರ ಬಂಧನ

ಮಗಳ ಮದುವೆಯನ್ನು ಸಡಗರದಿಂದ ಮಾಡಬೇಕೆಂಬ ಆಸೆಯಲ್ಲಿದ್ದ ಕುಟುಂಬಕ್ಕೆ ಈ ಘಟನೆ ಭಾರಿ ಆಘಾತ ತಂದಿದ್ದು, ವಿವಾಹ ನೆರವೇರಿಸೋದು ಹೇಗೆಂಬ ಆತಂಕ ಕಾಡತೊಡಗಿದೆ. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶೀಘ್ರ ಕಳ್ಳರನ್ನು ಪತ್ತೆ ಮಾಡಿ ತಮ್ಮ ಬಂಗಾರ ಮರಳಿ ಸಿಗುವಂತೆ ಮಾಡಿ ಎಂದು ಕುಟುಂಬ ಅಂಗಲಾಚಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಕೂಡ ಬಲೆ ಬೀಸಿದ್ದಾರೆ. ಘಟನೆಯಿಂದ ಸ್ಥಳೀಯರೂ ಬೆಚ್ಚಿಬಿದ್ದಿದ್ದು, ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲೀಗ ಆತಂಕ ಮನೆ ಮಾಡಿದೆ.

ವರದಿ: ಮಂಜುನಾಥ್​​, ಟಿವಿ9, ನೆಲಮಂಗಲ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 4:41 pm, Tue, 5 May 26

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ