AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡಬಳ್ಳಾಪುರ: ಕೆಲಸ ಅರಸಿ ಬಂದ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವು

8 ದಿನಗಳ ಹಿಂದೆಯಷ್ಟೇ ಕೆಲಸ ಅರಸಿ ಬಂದಿದ್ದ ನಾಲ್ವರು ಸದಸ್ಯರ ಕುಟುಂಬವೊಂದು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ. ರಾತ್ರಿ ಮಲಗಿದ್ದವರು ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದು, ನಾಲ್ವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಇನ್ನು ಸ್ಥಳಕ್ಕೆ ಪೊಲೀಸರು ದೌಡಾಯಿಸಿ ತನಿಖೆ ಕೈಗೊಂಡಿದ್ದಾರೆ. ಆದ್ರೆ, ಕೆಲಸ ಅರಸಿ ಬಂದವರು ನಿಗೂಢವಾಗಿ ಸಾವನ್ನಪ್ಪಿದ್ದು ದುರಂತವೇ ಸರಿ.

ದೊಡ್ಡಬಳ್ಳಾಪುರ: ಕೆಲಸ ಅರಸಿ ಬಂದ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವು
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Sep 17, 2023 | 12:06 PM

ದೊಡ್ಡಬಳ್ಳಾಪುರ, (ಸೆಪ್ಟೆಂಬರ್ 17): ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ(Doddaballapura) ತಾಲೂಕಿನ ಹೊಲೆಯರಹಳ್ಳಿಯಲ್ಲಿ ನಡೆದಿದೆ. ನೇಪಾಳ ಮೂಲದ ಕಾಲೆ ಸರೆರಾ(60), ಲಕ್ಷ್ಮೀ ಸರೇರಾ(50), ಉಷಾ ಸರೇರಾ(40), ಪೊಲ್ ಸರೇರಾ(16) ಎನ್ನುವ ಒಂದೇ ಕುಟುಂಬದ ನಾಲ್ವರು ರಾತ್ರಿ ಕೋಳಿ ಫಾರಂನಲ್ಲಿ ಮಲಗಿದ್ದವರು ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಈ ನೇಪಾಳಿ ಕುಟುಂಬ 8 ದಿನಗಳ ಹಿಂದೆಯಷ್ಟೇ ಕೆಲಸ ಅರಸಿ ದೊಡ್ಡಬಳ್ಳಾಪುರ ತಾಲೂಕಿನ ಹೊಲೆಯರಹಳ್ಳಿಗೆ ಬಂದಿತ್ತು. ಆದ್ರೆ, ನಿನ್ನೆ (ಸೆಪ್ಟೆಂಬರ್ 16) ರಾತ್ರಿ ಶೆಡ್ ಬಾಗಿಲು ಹಾಕಿಕೊಂಡು ಮಲಗಿದ್ದವರು, ಇಂದು(ಸೆ್ಪಟೆಂಬರ್ 17) ಬೆಳಗ್ಗೆ ಸ್ಥಳೀಯರು ಹೋಗಿ ನೋಡಿದಾಗ ಶವವಾಗಿ ಪತ್ತೆಯಾಗಿದ್ದಾರೆ.

ಅನುಮಾನಗೊಂಡ ಸ್ಥಳೀಯರು ಹೋಗಿ ನೋಡಿದಾಗ ನಾಲ್ವರು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಆದ್ರೆ, ನಾಲ್ವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನು ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸಿದ್ದಾರೆ.

ಸೊಳ್ಳೆ ಕಾಟ ತಪ್ಪಿಸಲು ಹೋಗಿ ಬಲಿ ಆಯ್ತಾ ಕುಟುಂಬ?

ಕೋಳಿ ಪಾರಂನಲ್ಲಿ ಸೊಳ್ಳೆಕಾಟ ಹೆಚ್ಚಾಗಿದ್ದರಿಂದ ರಾತ್ರಿ ನಿದ್ದೆ ಬರಲ್ಲ ಅಂತ ಹೊಗೆ ಹಾಕಿದ್ದು, ಇದ್ದಿಲಿನಿಂದ ಹೊಗೆ ಹಾಕಿಕೊಂಡು ಮಲಗಿದ್ದರಿಂದ ಉಸಿರುಗಟ್ಟಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಕೊಠಡಿಯಲ್ಲಿ ಕಿಟಕಿ ಬಾಗಿಲು ಬಂದ್ ಆಗಿದ್ದ ಕಾರಣ ಹೊಗೆ ದಟ್ಟವಾಗಿ ಆವರಿಸಿದ ಹಿನ್ನೆಲೆಯಲ್ಲಿ ಉಸಿರುಗಟ್ಟಿ ಮೃತಪಟ್ಟಿರಬಹುದು ಎನ್ನಲಾಗುತ್ತಿದೆ. ಈಗಲು ಕೊಠಡಿ ಒಳಗಡೆ ಹೊಗೆ ತುಂಬಿಕೊಂಡಿದೆ. ಹೀಗಾಗಿ ಕೊಠಡಿಯಲ್ಲಿ ಕಿಟಕಿ ಬಾಗಿಲು ಬಂದ್ ಆಗಿದ್ದ ಕಾರಣ ಹೊಗೆ ದಟ್ಟವಾಗಿ ಆವರಿಸಿದ ಹಿನ್ನೆಲೆಯಲ್ಲಿ ಉಸಿರುಗಟ್ಟಿ ಮೃತಪಟ್ಟಿರಬಹುದು ಎನ್ನಲಾಗುತ್ತಿದೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ‌ ಹಾಗೂ ಎಫ್​ಎಸ್ಎಲ್ ಹಾಗೂ ಕ್ರೈಂ ಸೀನ್ ಅಧಿಕಾರಿಗಳು ಸಹ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Published On - 11:15 am, Sun, 17 September 23

ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್