AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನ್ಸ್‌ಟೇಬಲ್ ಪತಿ ಜೊತೆ ಅಡುಗೆ ಮಾಡುವ ವಿಷಯವಾಗಿ ಭಿನ್ನಾಭಿಪ್ರಾಯ; ನವ ವಿವಾಹಿತ ಮಹಿಳಾ ಕಾನ್ಸ್‌ಟೆಬಲ್​ ಆತ್ಮಹತ್ಯೆ

ಮಂಜುನಾಥ್ ಮತ್ತು ನೇತ್ರಾ ಇಬ್ಬರು ಕೂಡ ತುಮಕೂರು ಜಿಲ್ಲೆಯವರು. ಇಬ್ಬರು ಪ್ರೀತಿಸಿ ಮನೆಯವರ ಒಪ್ಪಿಗೆ ಪಡೆದು ಮದುವೆಯಾಗಿದ್ದರು. ಅಡುಗೆ ಮಾಡುವ ವಿಚಾರಕ್ಕೆ ಗಲಾಟೆ ನಡೆದು ನೇತ್ರಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದಾಗಿ ಮೂಲಗಳು ಹೇಳಿವೆ.

ಕಾನ್ಸ್‌ಟೇಬಲ್ ಪತಿ ಜೊತೆ ಅಡುಗೆ ಮಾಡುವ ವಿಷಯವಾಗಿ ಭಿನ್ನಾಭಿಪ್ರಾಯ; ನವ ವಿವಾಹಿತ ಮಹಿಳಾ ಕಾನ್ಸ್‌ಟೆಬಲ್​ ಆತ್ಮಹತ್ಯೆ
ನೇತ್ರಾ ಮತ್ತು ಮಂಜುನಾಥ್
TV9 Web
| Edited By: |

Updated on:Jul 28, 2021 | 12:49 PM

Share

ಬೆಂಗಳೂರು: ನವವಿವಾಹಿತ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಗೊಲ್ಲರಹಟ್ಟಿಯಲ್ಲಿ ನಡೆದಿದೆ. ಮನೆಯಲ್ಲಿ ನೇಣುಬಿಗಿದುಕೊಂಡು ನೇತ್ರಾ(27) ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ. ನೇತ್ರಾ, ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯ ಪಿಸಿ ಆಗಿ ಕಾರ್ಯನಿರ್ವಹಿಸುತ್ತಿದ್ದರು. ತಿಂಗಳ ಹಿಂದೆಯಷ್ಟೇ ಪೀಣ್ಯ ಸಂಚಾರಿ ಠಾಣೆಯ ಕಾನ್ಸ್‌ಟೇಬಲ್ ಮಂಜುನಾಥ್ ಜತೆಗೆ ವಿವಾಹವಾಗಿತ್ತು.

ಮಂಜುನಾಥ್ ಮತ್ತು ನೇತ್ರಾ ಇಬ್ಬರು ಕೂಡ ತುಮಕೂರು ಜಿಲ್ಲೆಯವರು. ಇಬ್ಬರು ಪ್ರೀತಿಸಿ ಮನೆಯವರ ಒಪ್ಪಿಗೆ ಪಡೆದು ಮದುವೆಯಾಗಿದ್ದರು. ಸದ್ಯಕ್ಕೆ ಅಡುಗೆ ಮಾಡುವ ವಿಚಾರಕ್ಕೆ ಗಲಾಟೆ ನಡೆದು ನೇತ್ರಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದಾಗಿ ಮೂಲಗಳು ಹೇಳಿವೆ. ಆದರೆ ಆತ್ಮಹತ್ಯೆಗೆ ಪೊಲೀಸರು ಇನ್ನೂ ನಿಖರ ಕಾರಣ ಸಿಕ್ಕಿಲ್ಲ ಎಂದು ತಿಳಿಸಿದ್ದಾರೆ. ಸದ್ಯ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ 10 ಮಂದಿ ಪೊಲೀಸರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ಉತ್ತರಪ್ರದೇಶದ ಬಾಗಪತ್​ ಜಿಲ್ಲೆಯ ಕೊವಿಡ್​ 19 ಲಸಿಕಾ ಕೇಂದ್ರದಲ್ಲಿ ಯುವಕ ಮತ್ತು ಪೊಲೀಸರ ಮಧ್ಯೆ ಜಗಳ ನಡೆದಿತ್ತು. ಹೀಗೆ ಪೊಲೀಸರೊಂದಿಗೆ ಸಂಘರ್ಷ ನಡೆದ ದಿನ ಸಂಜೆ ಆ ಯುವಕ ತಮ್ಮ ಮನೆಯ ಬಳಿ ಇರುವ ಮರಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆ.

ಲಸಿಕಾ ಕೇಂದ್ರದಲ್ಲಿ ಯುವಕನೊಂದಿಗೆ ಬೈದು, ಗಲಾಟೆ ಮಾಡಿದ್ದ ಆರೋಪದಡ 10 ಮಂದಿ ಪೊಲೀಸರನ್ನು ಅಮಾನತು ಮಾಡಲಾಗಿದೆ. ಅಷ್ಟೇ ಅಲ್ಲ ಅವರ ವಿರುದ್ಧ ಆತ್ಮಹತ್ಯೆ ಪ್ರಚೋದನೆ ಪ್ರಕರಣವೂ ದಾಖಲಾಗಿದೆ. ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಕೊವಿಡ್​ 19 ಲಸಿಕಾ ಕೇಂದ್ರದಲ್ಲಿದ್ದ ಪೊಲೀಸರೇ ಕಾರಣ ಎಂದು ಆತನ ಸಂಬಂಧಿಕರು ಆರೋಪ ಮಾಡಿದ್ದಾರೆ. ಕಾರಣವೇ ಇಲ್ಲದೆ ಯುವಕ ಮತ್ತು ಆತನ ತಾಯಿಗೆ ಹೊಡೆದಿದ್ದರು. ಅದೇ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಎಂದೂ ದೂರು ನೀಡಿದ್ದಾರೆ.

ಇದನ್ನೂ ಓದಿ: ಮನೆ ಬಳಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ; 10 ಪೊಲಿಸರು ಅಮಾನತು-ಅಂಥದ್ದೇನಾಯ್ತು?

ಭಾವಿ ಪತ್ನಿ 3 ದಿನದಿಂದ ಫೋನ್​ ಮಾಡಿಲ್ಲ ಎಂದು ಕಾನ್ಸ್​ಟೇಬಲ್​ ಆತ್ಮಹತ್ಯೆ

Published On - 11:07 am, Wed, 28 July 21

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್