AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರನ ಬಂಧನ

ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಇತ್ತೀಚಿಗೆ ದೇಶದ್ರೋಹ ಆರೋಪದಡಿ ನೌಕಾನೆಲೆಯ ಮೂವರನ್ನು ವಶಕ್ಕೆ ಪಡೆದಿದ್ದರು. ಇದರ ಬೆನ್ನಲ್ಲೇ, ಅಧಿಕಾರಿಗಳು ಬೆಂಗಳೂರಿನಿಂದ ಸೌದಿಗೆ ಪಾರಾರಿಯಾಗುತ್ತಿದ್ದ ಶಂಕಿತ ಉಗ್ರ ಅಜೀಜ್​ ಅಹ್ಮದ್​ನನ್ನು ಶುಕ್ರವಾರ ಬಂಧಿಸಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರನ ಬಂಧನ
ರಾಷ್ಟ್ರೀಯ ತನಿಖಾ ದಳ
ನವೀನ್ ಕುಮಾರ್ ಟಿ
| Updated By: ವಿವೇಕ ಬಿರಾದಾರ|

Updated on:Aug 31, 2024 | 12:40 PM

Share

ಬೆಂಗಳೂರು, ಆಗಸ್ಟ್​​ 31: ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಶಂಕಿತ ಉಗ್ರನನ್ನು ಬಂಧಿಸಿದ್ದಾರೆ. ಅಜೀಜ್ ಅಹ್ಮದ್ ಬಂಧಿತ ಶಂಕಿತ ಉಗ್ರ. ಹಿಜ್ಬ್ ಉಲ್ ತಹ್ರೀರ್ ಭಯೋತ್ಪಾದಕ ಸಂಘಟನೆಯ ಅಜೀಜ್​ ಅಹ್ಮದ್​ ಶುಕ್ರವಾರ ಬೆಳಗ್ಗೆ ಕೆಂಪೇಗೌಡ ವಿಮಾನ ನಿಲ್ದಾಣದ ಮೂಲಕ ಸೌದಿಯ ಜಿದ್ದಾಗೆ ಪಾರಾರಿಯಾಗುತ್ತಿದ್ದನು. ಈ ಮಾಹಿತಿಯನ್ನು ಇಮಿಗ್ರೇಷನ್ ಅಧಿಕಾರಿಗಳು ಎನ್​ಐಎಗೆ ನೀಡಿದ್ದಾರೆ. ಮಾಹಿತಿ ಆಧರಿಸಿ ಕೂಡಲೆ ಸ್ಥಳಕ್ಕೆ ತೆರಳಿದ ಎನ್ಐಎ ಅಧಿಕಾರಿಗಳು ಶಂಕಿತ ಉಗ್ರ ಅಜೀಜ್​ ಅಹ್ಮದ್​​ನನ್ನು ಬಂಧಿಸಿದ್ದಾರೆ.

ನಾಕಾನೆಲೆಯ ಮೂವರು ವಶಕ್ಕೆ

ಇತ್ತೀಚಿಗೆ ಎನ್​ಐಎ ಅಧಿಕಾರಿಗಳು ನೌಕಾನೆಲೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿದ್ದ ಮೂವರನ್ನು ವಶಕ್ಕೆ ಪಡೆದಿದ್ದರು. ಆರೋಪಿಗಳು ಹನಿಟ್ರ್ಯಾಪ್​​ಗೆ ಒಳಗಾಗಿ, ಹಣಕ್ಕಾಗಿ ಸೀಬರ್ಡ್ ನೌಕಾನೆಲೆ ಫೋಟೋ, ಇತರೆ ಮಾಹಿತಿಯನ್ನು ಶತ್ರು ರಾಷ್ಟ್ರ ಪಾಕಿಸ್ತಾನಕ್ಕೆ ನೀಡಿದ್ದರು. ಈ ಮಾಹಿತಿ ಆಧಾರದ ಮೇಲೆ ಎನ್​ಐಎ ಅಧಿಕಾರಿಗಳು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

ಇದನ್ನೂ ಓದಿ: ಭಾರತದಲ್ಲಿ ಖಲಿಫೇಟ್, ದೇಶಾದ್ಯಂತ ಪ್ರತಿ ಜಿಲ್ಲೆಯಲ್ಲಿ 50 ಸ್ಲೀಪರ್ ಸೆಲ್: ಬಳ್ಳಾರಿ ಉಗ್ರರ ಬಗ್ಗೆ ಎನ್​ಐಎ ಸ್ಫೋಟಕ ಮಾಹಿತಿ

ತೋಡೂರಿನ ಸುನೀಲ್ ನಾಯ್ಕ್, ಮುದುಗಾದ ವೇತನ್ ತಾಂಡೇಲ್​ ಮತ್ತು ಹಳವಳ್ಳಿಯ ಅಕ್ಷಯ್ ರವಿ ನಾಯ್ಕ್ ವಶಕ್ಕೆ ಪಡೆದು ಎನ್​ಐಎ ಡಿವೈಎಸ್‌ಪಿ, ಮೂವರು ಇನ್ಸ್‌ಪೆಕ್ಟರ್‌ಗಳಿಂದ ವಿಚಾರಣೆ ಮಾಡಿದ್ದರು.

ಓರ್ವನನ್ನು ಗೋವಾದಿಂದ ವಶಕ್ಕೆ ಪಡೆದಿದ್ದು, ಇನ್ನಿಬ್ಬರನ್ನು ಸೀಬರ್ಡ್‌ನಿಂದ ವಶಕ್ಕೆ ಪಡೆಯಲಾಗಿತ್ತು. ಆರೋಪಿಗಳು ಸೀಬರ್ಡ್‌ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ರಾಷ್ಟ್ರವಿರೋಧಿ ಚಟುವಟಿಕೆಯಡಿ 2023ರಲ್ಲಿ ಹೈದ್ರಾಬಾದ್‌ನಲ್ಲಿ ಎನ್​ಐಎ ದೀಪಕ್ ಹಾಗೂ ಇತರರನ್ನು ಬಂಧಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:13 pm, Sat, 31 August 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!