AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರನ ಬಂಧನ

ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಇತ್ತೀಚಿಗೆ ದೇಶದ್ರೋಹ ಆರೋಪದಡಿ ನೌಕಾನೆಲೆಯ ಮೂವರನ್ನು ವಶಕ್ಕೆ ಪಡೆದಿದ್ದರು. ಇದರ ಬೆನ್ನಲ್ಲೇ, ಅಧಿಕಾರಿಗಳು ಬೆಂಗಳೂರಿನಿಂದ ಸೌದಿಗೆ ಪಾರಾರಿಯಾಗುತ್ತಿದ್ದ ಶಂಕಿತ ಉಗ್ರ ಅಜೀಜ್​ ಅಹ್ಮದ್​ನನ್ನು ಶುಕ್ರವಾರ ಬಂಧಿಸಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರನ ಬಂಧನ
ರಾಷ್ಟ್ರೀಯ ತನಿಖಾ ದಳ
ನವೀನ್ ಕುಮಾರ್ ಟಿ
| Edited By: ವಿವೇಕ ಬಿರಾದಾರ|

Updated on:Aug 31, 2024 | 12:40 PM

Share

ಬೆಂಗಳೂರು, ಆಗಸ್ಟ್​​ 31: ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಶಂಕಿತ ಉಗ್ರನನ್ನು ಬಂಧಿಸಿದ್ದಾರೆ. ಅಜೀಜ್ ಅಹ್ಮದ್ ಬಂಧಿತ ಶಂಕಿತ ಉಗ್ರ. ಹಿಜ್ಬ್ ಉಲ್ ತಹ್ರೀರ್ ಭಯೋತ್ಪಾದಕ ಸಂಘಟನೆಯ ಅಜೀಜ್​ ಅಹ್ಮದ್​ ಶುಕ್ರವಾರ ಬೆಳಗ್ಗೆ ಕೆಂಪೇಗೌಡ ವಿಮಾನ ನಿಲ್ದಾಣದ ಮೂಲಕ ಸೌದಿಯ ಜಿದ್ದಾಗೆ ಪಾರಾರಿಯಾಗುತ್ತಿದ್ದನು. ಈ ಮಾಹಿತಿಯನ್ನು ಇಮಿಗ್ರೇಷನ್ ಅಧಿಕಾರಿಗಳು ಎನ್​ಐಎಗೆ ನೀಡಿದ್ದಾರೆ. ಮಾಹಿತಿ ಆಧರಿಸಿ ಕೂಡಲೆ ಸ್ಥಳಕ್ಕೆ ತೆರಳಿದ ಎನ್ಐಎ ಅಧಿಕಾರಿಗಳು ಶಂಕಿತ ಉಗ್ರ ಅಜೀಜ್​ ಅಹ್ಮದ್​​ನನ್ನು ಬಂಧಿಸಿದ್ದಾರೆ.

ನಾಕಾನೆಲೆಯ ಮೂವರು ವಶಕ್ಕೆ

ಇತ್ತೀಚಿಗೆ ಎನ್​ಐಎ ಅಧಿಕಾರಿಗಳು ನೌಕಾನೆಲೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿದ್ದ ಮೂವರನ್ನು ವಶಕ್ಕೆ ಪಡೆದಿದ್ದರು. ಆರೋಪಿಗಳು ಹನಿಟ್ರ್ಯಾಪ್​​ಗೆ ಒಳಗಾಗಿ, ಹಣಕ್ಕಾಗಿ ಸೀಬರ್ಡ್ ನೌಕಾನೆಲೆ ಫೋಟೋ, ಇತರೆ ಮಾಹಿತಿಯನ್ನು ಶತ್ರು ರಾಷ್ಟ್ರ ಪಾಕಿಸ್ತಾನಕ್ಕೆ ನೀಡಿದ್ದರು. ಈ ಮಾಹಿತಿ ಆಧಾರದ ಮೇಲೆ ಎನ್​ಐಎ ಅಧಿಕಾರಿಗಳು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

ಇದನ್ನೂ ಓದಿ: ಭಾರತದಲ್ಲಿ ಖಲಿಫೇಟ್, ದೇಶಾದ್ಯಂತ ಪ್ರತಿ ಜಿಲ್ಲೆಯಲ್ಲಿ 50 ಸ್ಲೀಪರ್ ಸೆಲ್: ಬಳ್ಳಾರಿ ಉಗ್ರರ ಬಗ್ಗೆ ಎನ್​ಐಎ ಸ್ಫೋಟಕ ಮಾಹಿತಿ

ತೋಡೂರಿನ ಸುನೀಲ್ ನಾಯ್ಕ್, ಮುದುಗಾದ ವೇತನ್ ತಾಂಡೇಲ್​ ಮತ್ತು ಹಳವಳ್ಳಿಯ ಅಕ್ಷಯ್ ರವಿ ನಾಯ್ಕ್ ವಶಕ್ಕೆ ಪಡೆದು ಎನ್​ಐಎ ಡಿವೈಎಸ್‌ಪಿ, ಮೂವರು ಇನ್ಸ್‌ಪೆಕ್ಟರ್‌ಗಳಿಂದ ವಿಚಾರಣೆ ಮಾಡಿದ್ದರು.

ಓರ್ವನನ್ನು ಗೋವಾದಿಂದ ವಶಕ್ಕೆ ಪಡೆದಿದ್ದು, ಇನ್ನಿಬ್ಬರನ್ನು ಸೀಬರ್ಡ್‌ನಿಂದ ವಶಕ್ಕೆ ಪಡೆಯಲಾಗಿತ್ತು. ಆರೋಪಿಗಳು ಸೀಬರ್ಡ್‌ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ರಾಷ್ಟ್ರವಿರೋಧಿ ಚಟುವಟಿಕೆಯಡಿ 2023ರಲ್ಲಿ ಹೈದ್ರಾಬಾದ್‌ನಲ್ಲಿ ಎನ್​ಐಎ ದೀಪಕ್ ಹಾಗೂ ಇತರರನ್ನು ಬಂಧಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:13 pm, Sat, 31 August 24

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು