AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಹಬ್ಬದ ದಿನವೇ ಈಜಲು ಹೋಗಿದ್ದ ಯುವಕ, ನೀರಿನಲ್ಲಿ ಮುಳುಗಿ ಸಾವು

ಅವನು ಜೀವನ ಕಟ್ಟಿಕೊಳ್ಳೋಕೆ ದೂರದ ಕೇರಳದಿಂದ ಕಳೆದ 2 ವರ್ಷದ ಹಿಂದೆ ರಾಜ್ಯಕ್ಕೆ ಬಂದಿದ್ದ, ಇಲ್ಲಿಯೇ ಖಾಸಗಿ ಕಂಪನಿಯ ಗೌಡನ್​ನಲ್ಲಿ ಕೆಲಸ ಮಾಡುತ್ತಿದ್ದ. ಎಲ್ಲವೂ ಚೆನ್ನಾಗೆ ನಡೆಯುತ್ತಿತ್ತು. ಆದ್ರೆ, ಗೌರಿ-ಗಣೇಶ ಹಬ್ಬದ ರಜೆ ಸಿಕ್ಕಿತು ಎಂದು ಕ್ವಾರಿಯಲ್ಲಿ ಈಜಲು ಹೋಗಿ ಆ ಯುವಕ ತನ್ನ ಪ್ರಾಣವನ್ನೆ ಬಿಟ್ಟಿದ್ದಾನೆ.

ನೆಲಮಂಗಲ: ಹಬ್ಬದ ದಿನವೇ ಈಜಲು ಹೋಗಿದ್ದ ಯುವಕ, ನೀರಿನಲ್ಲಿ ಮುಳುಗಿ ಸಾವು
ಮೃತ ಯುವಕ
ಬಿ ಮೂರ್ತಿ, ನೆಲಮಂಗಲ
| Edited By: |

Updated on: Sep 19, 2023 | 10:34 PM

Share

ಬೆಂಗಳೂರು ಗ್ರಾಮಾಂತರ, ಸೆ.19: ವಿಶಾಲವಾದ ಕಲ್ಲಿನ ಕ್ವಾರಿ, ಸುತ್ತಲೂ ನಿಂತಿರುವ ಪೊಲೀಸರು ಹಾಗೂ ಅಗ್ನಿಶಾಮಕ ತುರ್ತು ಸೇವೆಗಳ ಸಿಬ್ಬಂದಿ. ಸತತ6 ಗಂಟೆ ಪ್ರಯತ್ನ ನಡೆಸಿದ ಅಗ್ನಿಶಾಮಕ ದಳದ ಅಧಿಕಾರಿಗಳು, 21 ವರ್ಷದ ಅಜ್ಮಲ್ ಎನ್ನುವ ಯುವಕನ ಮೃತ ದೇಹ ಹೊರತೆಗೆದಿದ್ದಾರೆ. ಹೌದು, ಈ ದೃಶ್ಯಗಳು ಕಂಡುಬಂದಿದ್ದು ಬೆಂಗಳೂರು ಗ್ರಾಮಾಂತರ (Bengaluru Rural)ಜಿಲ್ಲೆಯ ನೆಲಮಂಗಲ ತಾಲೂಕಿನ ಮೈಲನಹಳ್ಳಿಯ ಕ್ವಾರಿಯಲ್ಲಿ. ಹೆಲ್ಪರ್ ವೃತ್ತಿ ಮಾಡುತ್ತಾ ನೆಲಮಂಗಲದಲ್ಲಿ ವಾಸವಿದ್ದ ಮೃತ ಅಜ್ಮಲ್, ನಿನ್ನೆ(ಸೆ.18) ಸಂಜೆ ಈಜಲು ಕ್ವಾರಿಗೆ ಹೋಗಿ ಶವವಾಗಿ ಪತ್ತೆಯಾಗಿದ್ದಾನೆ.

ಮೃತ ಅಜ್ಮಲ್​ಗೆ ನೀರು ಎಂದರೆ ಎಲ್ಲಿಲ್ಲದ ಪ್ರೀತಿ, ಅಲ್ಲದೆ ಈತ ಈಜು ಕೂಡ ಕಲಿತಿದ್ದ. ಹೀಗಿದ್ದಾಗ ಕ್ವಾರೆಯಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಈ ವೇಳೆ, ಆಳವನ್ನು ತಿಳಿಯದೆಯೇ ಕ್ವಾರೆ ನೀರಿಗೆ ಇಳಿದು ಮುಳುಗಿದ್ದಾನೆ. ಕೂಡಲೇ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ, 6 ಗಂಟೆಗಳ‌ ಸತತ ಪ್ರಯತ್ನದ ಬಳಿಕ ಹಲವು ಸಲಕರಣೆಗಳನ್ನು ಬಳಸಿ ಮೃತ ದೇಹವನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ:ನೆಲಮಂಗಲ: ಡಿವೈಡರ್‌ಗೆ ಗುದ್ದಿದ ಕಾರು; 5ಜನ ಇಂಜಿನಿಯರ್​ಗಳ ಪೈಕಿ ಮೂವರು ಸ್ಥಳದಲ್ಲೇ ಸಾವು

ಸದ್ಯ ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬದ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಇತ್ತ ದೂರದಿಂದ ಬಂದು, ಬದುಕು ಕಟ್ಟಿಕೊಂಡು ಕುಟುಂಬದ ಜವಾಬ್ದಾರಿ ಹೊತ್ತಿದ್ದವನು ನೀರು ಪಾಲಾಗಿದ್ದಾನೆ.

ಕ್ಯಾಂಟರ್‌ಗೆ ಹಿಂಬದಿಯಿಂದ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು ಗ್ರಾಮಾಂತರ: ಕ್ಯಾಂಟರ್‌ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ, ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್‌ಪೇಟೆಯ ದೊಡ್ಡಬಳ್ಳಾಪುರ ರಸ್ತೆಯಲ್ಲಿ ನಡೆದಿದೆ. ತಾಲೂಕಿನ ಹೊನ್ನೇನಹಳ್ಳಿಯ ಯುವಕ ಮಣಿ(27)ಮೃತ ಸವಾರ. ಸುರಿಯುವ ಮಳೆಯಲ್ಲಿ ದಾರಿ ಕಾಣದೆ ಕ್ಯಾಂಟರ್​ಗೆ ಬೈಕ್ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಈ ಕುರಿತು ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!