ಬನ್ನೇರುಘಟ್ಟ ಪಾರ್ಕ್​​ನಲ್ಲಿ ದುರ್ಘಟನೆ, ಸಿಬ್ಬಂದಿ ಸಾವು

ಆನೇಕಲ್: ಬನ್ನೇರುಘಟ್ಟ ಪಾರ್ಕ್​​ನಲ್ಲಿ ಸೋಲಾರ್ ವಿದ್ಯುತ್ ತಂತಿ ಪರಿಶೀಲನೆ ವೇಳೆ ಸಿಬ್ಬಂದಿಯೊಬ್ಬರು ಗೋಡೆಯಿಂದ‌ ಬಿದ್ದು ಸಾವನ್ನಪ್ಪಿದ್ದಾರೆ. ಸಸ್ಯಹಾರಿ ಪ್ರಾಣಿ ಸಫಾರಿ ಆವರಣದಲ್ಲಿ ಈ ದುರ್ಘಟನೆ ನಡೆದಿದ್ದು, ದೊಡ್ಡಯ್ಯ(45) ಸಾವನ್ನಪ್ಪಿದ ದುರ್ದೈವಿ. ಇವರು ಬನ್ನೇರುಘಟ್ಟದ ಬೈರಪ್ಪನಹಳ್ಳಿ ಮೂಲದವರು. ಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದರು. ಇಂದು ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಸೋಲಾರ್ ವಿದ್ಯುತ್ ತಂತಿ ಪರಿಶೀಲನೆ ನಡೆಸಲಾಗುತ್ತಿತ್ತು. ಆ ವೇಳೆ ಆಯತಪ್ಪಿ, 15 ಅಡಿ‌ ಎತ್ತರದ‌ ಗೋಡೆಯ ಮೇಲಿಂದ ಕಳಗೆ ಬಿದ್ದಿದ್ದಾರೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ […]

ಬನ್ನೇರುಘಟ್ಟ ಪಾರ್ಕ್​​ನಲ್ಲಿ ದುರ್ಘಟನೆ, ಸಿಬ್ಬಂದಿ ಸಾವು
ಸಾಧು ಶ್ರೀನಾಥ್​

Updated on: Nov 29, 2019 | 5:15 PM

ಆನೇಕಲ್: ಬನ್ನೇರುಘಟ್ಟ ಪಾರ್ಕ್​​ನಲ್ಲಿ ಸೋಲಾರ್ ವಿದ್ಯುತ್ ತಂತಿ ಪರಿಶೀಲನೆ ವೇಳೆ ಸಿಬ್ಬಂದಿಯೊಬ್ಬರು ಗೋಡೆಯಿಂದ‌ ಬಿದ್ದು ಸಾವನ್ನಪ್ಪಿದ್ದಾರೆ. ಸಸ್ಯಹಾರಿ ಪ್ರಾಣಿ ಸಫಾರಿ ಆವರಣದಲ್ಲಿ ಈ ದುರ್ಘಟನೆ ನಡೆದಿದ್ದು, ದೊಡ್ಡಯ್ಯ(45) ಸಾವನ್ನಪ್ಪಿದ ದುರ್ದೈವಿ. ಇವರು ಬನ್ನೇರುಘಟ್ಟದ ಬೈರಪ್ಪನಹಳ್ಳಿ ಮೂಲದವರು. ಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದರು.

ಇಂದು ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಸೋಲಾರ್ ವಿದ್ಯುತ್ ತಂತಿ ಪರಿಶೀಲನೆ ನಡೆಸಲಾಗುತ್ತಿತ್ತು. ಆ ವೇಳೆ ಆಯತಪ್ಪಿ, 15 ಅಡಿ‌ ಎತ್ತರದ‌ ಗೋಡೆಯ ಮೇಲಿಂದ ಕಳಗೆ ಬಿದ್ದಿದ್ದಾರೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us