ಆನ್​ಲೈನ್​ ಗೇಮಿಂಗ್​ ಹುಚ್ಚಾಟಕ್ಕೆ ಬಿದ್ದು 1 ಲಕ್ಷ ರೂ. ಸಮೇತ ಮನೆಯಿಂದ ಓಡಿ ಹೋದ ಯುವಕ

ಬೆಂಗಳೂರಿನ​ ಯಲಹಂಕದ ಶೇಷಾದ್ರಿಪುರ ಕಾಲೇಜಿನಲ್ಲಿ ಬಿಬಿಎ ಓದುತ್ತಿದ್ದ ಟಿ.ದಾಸರಹಳ್ಳಿಯಲ್ಲಿ ನಿವಾಸಿ ವರುಣ್ (18) ಆನ್ಲೈನ್ ಗೇಮ್​​ನಲ್ಲಿ 20 ಸಾವಿರ ರೂ. ಕಳೆದು, ಮನೆಯಿಂದ ಪರಾರಿಯಾಗಿದ್ದಾನೆ. ಮಗನನ್ನು ಹುಡುಕಿಕೊಡುವಂತೆ ಪೋಷಕರು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಆನ್​ಲೈನ್​ ಗೇಮಿಂಗ್​ ಹುಚ್ಚಾಟಕ್ಕೆ ಬಿದ್ದು 1 ಲಕ್ಷ ರೂ. ಸಮೇತ ಮನೆಯಿಂದ ಓಡಿ ಹೋದ ಯುವಕ
ವರುಣ್​
Edited By:

Updated on: Aug 28, 2024 | 2:40 PM

ಬೆಂಗಳೂರು, ಆಗಸ್ಟ್​ 28: ಬೆಂಗಳೂರಿನ (Bengaluru) ಟಿ.ದಾಸರಹಳ್ಳಿಯಲ್ಲಿ ನಿವಾಸಿ ವರುಣ್ (18) ಆನ್ಲೈನ್ ಗೇಮ್​​ನಲ್ಲಿ (Online Gaming) 20 ಸಾವಿರ ರೂ. ಕಳೆದು, ಮನೆಯಿಂದ ಪರಾರಿಯಾಗಿದ್ದಾನೆ. ಗೌರಮ್ಮ ಮತ್ತು ನಾಗರಾಜ್ ದಂಪತಿಗಳ ಪುತ್ರ ವರುಣ್​ ಯಲಹಂಕದ ಶೇಷಾದ್ರಿಪುರ ಕಾಲೇಜಿನಲ್ಲಿ ಬಿಬಿಎ ಓದುತ್ತಿದ್ದನು. ಈತನಿಗೆ ವಿಪರೀತ ಆನ್ಲೈನ್ ಗೇಮ್ ಆಡುತ್ತಿದ್ದನು. ಒಂದು ತಿಂಗಳ ಹಿಂದೆ ಆನ್ಲೈನ್​ ಗೇಮ್​ನಲ್ಲಿ 20 ಸಾವಿರ ಕಳೆದಿದ್ದಲ್ಲದೆ, ಮನೆಯಲ್ಲಿದ್ದ ಒಂದು ಲಕ್ಷ ರೂಪಾಯಿ ನಗದು ಸಮೇತ ನಾಪತ್ತೆಯಾಗಿದ್ದಾನೆ. ತಿಂಗಳಿಂದ ಮನೆಗೆ ಬಾರದ ಮಗನಿಗಾಗಿ ಪೋಷಕರು ಹುಡುಕಾಟ ನಡೆಸಿದ್ದಾರೆ.

ತಂದೆ ನಾಗರಾಜ್ ಆಟೋ ಚಾಲಕನಾಗಿದ್ದು, ತಾಯಿ ಗೌರಮ್ಮ ಗೃಹಿಣಿ. ಏಕೈಕ ಪುತ್ರ ವರುಣ್ ನಾಪತ್ತೆಯಾದಾಗಿನಿಂದ ದಂಪತಿ ಸರಿಯಾಗಿ ನಿದ್ದ, ಆಹಾರವಿಲ್ಲದೆ ಮಗನ ಚಿಂತನೆಯಲ್ಲಿ ಕೊರಗುತ್ತಿದ್ದಾರೆ. ಮಗ ಮನೆಗೆ ಬಂದರೆ ಸಾಕು, ಯಾವುದೇ ಹಣದ ವಿಷಯ ಎತ್ತುವುದಿಲ್ಲ, ಮಗ ಕಣ್ಮುಂದೆ ಇದ್ದರೆ ಸಾಕು. ಯಾರಾದರು ನನ್ನ ಮಗನನ್ನು ನೋಡಿದ್ದರೆ, ನಮಗೆ ತಿಳಸಿ ಎಂದು ಗೌರಮ್ಮ ಕಣ್ಣೀರು ಹಾಕುತ್ತಿದ್ದಾರೆ. ಮಗನನ್ನು ಹುಡುಕಿಕೊಡುವಂತೆ ಪೋಷಕರು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಆನ್ಲೈನ್​ ಗೇಮ್​​: ಬೆಟ್ಟಿಂಗ್ ಹಣ ಹಂಚಿಕೆಯಲ್ಲಿ ಗಲಾಟೆ, ಡ್ರ್ಯಾಗರ್​ನಿಂದ ಸ್ನೇಹಿತನ ಮೇಲೆ ಮಾರಣಾಂತಿಕ ಹಲ್ಲೆ

ಆನ್​ಲೈನ್ ಬೆಟ್ಟಿಂಗಾಗಿ ಸಾಲ ಮಾಡಿ, ತೀರಿಸಲು ಹಡಿದ ದಾರಿ ವಿಚಿತ್ರ

ಆನ್​ಲೈನ್ ಬೆಟ್ಟಿಂಗ್ ಹುಚ್ಚಾಟಕ್ಕೆ ಬಿದ್ದು ಮೈತುಂಬ ಸಾಲ ಮಾಡಿಕೊಂಡು ಸಾಲ ತೀರಿಸಲು ಸರಗಳ್ಳತನಕ್ಕೆ ಇಳಿದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಬೆಂಗಳೂರಿನ ಕತ್ರಿಗುಪ್ಪೆ ನಿವಾಸಿ ಸುರೇಶ್ ಬಂಧಿತ ಆರೋಪಿ. ಸುರೇಶ್ ಆನ್​ಲೈನ್​ನಲ್ಲಿ ಬೆಟ್ಟಿಂಗ್ ಗೇಮ್ ಆಡುತಿದ್ದನು. ಈ ವೇಳೆ ಸುರೇಶ್​ ಸಾಕಷ್ಟು ಹಣ ಕಳೆದುಕೊಂಡಿದ್ದನು. ಅಲ್ಲದೇ, ಬೆಟ್ಟಿಂಗ್​ ಗೇಮ್​ಗಾಗಿ ಐದು ಲಕ್ಷ ಸಾಲ ಮಾಡಿಕೊಂಡಿದ್ದನು. ಆರೋಪಿ ಸುರೇಶ್​ ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದನು. ಮಾಡಿದ ಸಾಲ ತೀರಿಸಲು ಆಟೋ ಸಹ ಅಡವಿಟ್ಟಿದ್ದನು. ಆದರೂ, ಸಾಲ ತೀರಿರಲಿಲ್ಲ.

ಹೀಗಾಗಿ, ಸಾಲ ತೀರಿಸಲು ದಾರಿ ಕಾಣದೆ ಸರಗಳ್ಳತನಕ್ಕಿಳಿದಿದ್ದನು. ಸುರೇಶ್ ಗಿರಿನಗರದ ಬೈರಪ್ಪ ಲೇಔಟ್​ನಲ್ಲಿ ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಸರ ಕಳ್ಳತನ ಮಾಡಿದ್ದನು. ಪ್ರಕರಣ ದಾಖಲಿಸಿಕೊಂಡಿದ್ದ ಗಿರಿನಗರ ಪೊಲೀಸರು ತನಿಖೆ ನಡೆಸಿ, ಆರೋಪಿ ಸುರೇಶ್​ನನ್ನು ಬಂಧಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
Follow Us