AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮ ಪಂಚಾಯತಿ ಗಾದಿಗಾಗಿ ಆಪರೇಷನ್ ಆಟ: ಕಾಂಗ್ರೆಸ್​​, ಬಿಜೆಪಿ ಮಧ್ಯೆ ಅಧ್ಯಕ್ಷ ಸ್ಥಾನಕ್ಕೆ ಗುದ್ದಾಟ

ಬೆಂಗಳೂರು ನಗರ ಜಿಲ್ಲೆ ಉತ್ತರ ತಾಲೂಕಿನ ಬಾಗಲೂರು ಗ್ರಾಮ ಪಂಚಾಯತಿ ಸದ್ಯ ಪ್ರತಿಷ್ಠೆಯ ಕಣವಾಗಿದೆ. ಕಾಂಗ್ರೆಸ್​ ಮತ್ತು ಬಿಜೆಪಿ ನಡುವೆ ಆಪರೇಷನ್ ಕಾಳಗಕ್ಕೆ ಟ್ವಿಸ್ಟ್ ಸಿಕ್ಕಿದೆ. ಹಾಲಿ ಅಧ್ಯಕ್ಷ ಸ್ಥಾನ ಉಳಿಸಿಕೊಳ್ಳಲು ಕಾಂಗ್ರೆಸ್​ ಒಂದು ಕಡೆಯಾದರೆ, ಹೊಸದಾಗಿ ಅಧ್ಯಕ್ಷ ‌ಸ್ಥಾನ ಪಡೆಯಲು ಕಸರತ್ತು ನಡೆಸುತ್ತಿರುವ ಬಿಜೆಪಿ ಮತ್ತೊಂದು ಕಡೆ.

ಗ್ರಾಮ ಪಂಚಾಯತಿ ಗಾದಿಗಾಗಿ ಆಪರೇಷನ್ ಆಟ: ಕಾಂಗ್ರೆಸ್​​, ಬಿಜೆಪಿ ಮಧ್ಯೆ ಅಧ್ಯಕ್ಷ ಸ್ಥಾನಕ್ಕೆ ಗುದ್ದಾಟ
ಬಾಗಲೂರು ಗ್ರಾಮ ಪಂಚಾಯತಿ
ನವೀನ್ ಕುಮಾರ್ ಟಿ
| Edited By: |

Updated on:Dec 13, 2023 | 4:21 PM

Share

ದೇವನಹಳ್ಳಿ, ಡಿಸೆಂಬರ್​​ 13: ಬೆಂಗಳೂರು ಉತ್ತರ ತಾಲೂಕಿನ ಬಾಗಲೂರು ಗ್ರಾಮ ಪಂಚಾಯತಿ ಹುದ್ದೆಗೆ ಕಾಂಗ್ರೆಸ್ (Congress)​ ಮತ್ತು ಬಿಜೆಪಿ ನಡುವೆ ಗಾದಿಗಾಗಿ ಹೋರಾಟವೇ ನಡೆಯುತ್ತಿದೆ. ಹಾಲಿ ಅಧ್ಯಕ್ಷ ಸ್ಥಾನ ಉಳಿಸಿಕೊಳ್ಳಲು ಕಾಂಗ್ರೆಸ್​ ಒಂದು ಕಡೆಯಾದರೆ, ಹೊಸದಾಗಿ ಅಧ್ಯಕ್ಷ ‌ಸ್ಥಾನ ಪಡೆಯಲು ಕಸರತ್ತು ನಡೆಸುತ್ತಿರುವ ಬಿಜೆಪಿ ಮತ್ತೊಂದು ಕಡೆ. ಈ ಹಿಂದೆ ಪಂಚಾಯತಿ ಚುನಾವಣೆಯಲ್ಲಿ 17 ಜನ ಕಾಂಗ್ರೆಸ್​ ಬೆಂಬಲಿತರು, 6 ಜನ ಬಿಜೆಪಿ ಹಾಗೂ ಮೂವರು ಜೆಡಿಎಸ್ ಸದಸ್ಯರು ಗೆದ್ದಿದ್ದರು.

ಸ್ಟೇ ತಂದು ಬಿಜೆಪಿ ಆಪರೇಷನ್​ಗೆ ಟಾಂಗ್ ಕೊಟ್ಟ ಕಾಂಗ್ರೆಸ್​

ಗೆದ್ದ ಕಾಂಗ್ರೆಸ್​​ ಸದಸ್ಯರನ್ನ ರೆಸಾರ್ಟ್​ಗೆ ಕರೆದುಕೊಂಡು ಹೋಗಿದ್ದ ಬಿಜೆಪಿ ಬೆಂಬಲಿತರು ಆಪರೇಷನ್ ಮಾಡಲು ಹೊರಟಿದ್ದರು. ಕಾಂಗ್ರೆಸ್​ ಬೆಂಬಲಿತ ಅಧ್ಯಕ್ಷ ಮುನೇಗೌಡ ವಿರುದ್ದ ಸದಸ್ಯರು ಅವಿಶ್ವಾಸ ಮಂಡನೆ ನಿರ್ಣಯ ಮಾಡಿದ್ದರು. ಜೊತೆಗೆ ಬಿಜೆಪಿ ಬೆಂಬಲಿತ ಸದಸ್ಯನಿಗೆ ಅಧ್ಯಕ್ಷ ಸ್ಥಾನ ನೀಡಲು ಬಿಜೆಪಿ ಸದಸ್ಯರು ಆಪರೇಷನ್ ಮಾಡಿದ್ದರು. ಆಪರೇಷನ್ ಕಮಲಕ್ಕೆ ಒಳಗಾದ ಕಾಂಗ್ರೆಸ್​ ಸದಸ್ಯರು ಪಬ್​ನಲ್ಲಿ ಮೋಜು ಮಸ್ತಿ ಮಾಡುತ್ತಿದ್ದ ವಿಡಿಯೋ ಸಹ ವೈರಲ್​ ಆಗಿತ್ತು.

ಇದನ್ನೂ ಓದಿ: Puthila Parivar : ಗ್ರಾಮ ಪಂಚಾಯಿತಿ ಉಪಚುನಾವಣೆಯಲ್ಲೂ ಪುತ್ತಿಲ ಪರಿವಾರ ಕಮಾಲ್, ಬಿಜೆಪಿಗೆ ಮುಖಭಂಗ

ಆದರೆ ಕೊನೆ ಕ್ಷಣದಲ್ಲಿ ಅಧ್ಯಕ್ಷ ಆಯ್ಕೆಗೆ ಕಾಂಗ್ರೆಸ್​ ಮುಖಂಡರು ಕೋರ್ಟ್​​ನಿಂದ ಸ್ಟೇ ತಂದಿದ್ದರು. ಹಾಗಾಗಿ  ತಾತ್ಕಾಲಿಕವಾಗಿ ಗ್ರಾಮ ಪಂಚಾಯತಿ ಅಧ್ಯಕ್ಷ ಆಯ್ಕೆಯನ್ನು ಮುಂದೂಡಿಕೆ ಮಾಡಲಾಗಿತ್ತು.

ಇದನ್ನೂ ಓದಿ: ಗ್ರಾಮವನ್ನೇ ಮಾರಿದ ಗ್ರಾಮ ಪಂಚಾಯ್ತಿ PDO ವೆಂಕಟೇಶ ಅಮಾನತು-ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ CEO ಆದೇಶ

ಪಂಚಾಯತಿಗೆ ಆದಾಯ ಹೆಚ್ಚಾಗಿರುವ ಹಿ‌ನ್ನೆಲೆ ಅಧ್ಯಕ್ಷ ಸ್ಥಾನಕ್ಕೆ ಭಾರಿ ಪೈಟ್ ಶುರುವಾಗಿದೆ. ಆಯ್ಕೆ ಮುಂದೂಡಿಕೆಯಾದ ಕಾರಣ ಹೂವಿನ ಹಾರ ಹಾಕಿಕೊಂಡು ಕಾಂಗ್ರೆಸ್​ ಸದಸ್ಯರು‌ ಸಂಭ್ರಮಿಸಿದ್ದರು. ಸದ್ಯ ಬಾಗಲೂರು ಗ್ರಾಮ ಪಂಚಾಯಿತಿ ಕಂದಾಯ ಸಚಿವ ಕೃಷ್ಣಬೈರೆಗೌಡಗೆ ಪ್ರತಿಷ್ಠೆಯ ಕಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:19 pm, Wed, 13 December 23

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್