AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮ ಪಂಚಾಯತಿ ಗಾದಿಗಾಗಿ ಆಪರೇಷನ್ ಆಟ: ಕಾಂಗ್ರೆಸ್​​, ಬಿಜೆಪಿ ಮಧ್ಯೆ ಅಧ್ಯಕ್ಷ ಸ್ಥಾನಕ್ಕೆ ಗುದ್ದಾಟ

ಬೆಂಗಳೂರು ನಗರ ಜಿಲ್ಲೆ ಉತ್ತರ ತಾಲೂಕಿನ ಬಾಗಲೂರು ಗ್ರಾಮ ಪಂಚಾಯತಿ ಸದ್ಯ ಪ್ರತಿಷ್ಠೆಯ ಕಣವಾಗಿದೆ. ಕಾಂಗ್ರೆಸ್​ ಮತ್ತು ಬಿಜೆಪಿ ನಡುವೆ ಆಪರೇಷನ್ ಕಾಳಗಕ್ಕೆ ಟ್ವಿಸ್ಟ್ ಸಿಕ್ಕಿದೆ. ಹಾಲಿ ಅಧ್ಯಕ್ಷ ಸ್ಥಾನ ಉಳಿಸಿಕೊಳ್ಳಲು ಕಾಂಗ್ರೆಸ್​ ಒಂದು ಕಡೆಯಾದರೆ, ಹೊಸದಾಗಿ ಅಧ್ಯಕ್ಷ ‌ಸ್ಥಾನ ಪಡೆಯಲು ಕಸರತ್ತು ನಡೆಸುತ್ತಿರುವ ಬಿಜೆಪಿ ಮತ್ತೊಂದು ಕಡೆ.

ಗ್ರಾಮ ಪಂಚಾಯತಿ ಗಾದಿಗಾಗಿ ಆಪರೇಷನ್ ಆಟ: ಕಾಂಗ್ರೆಸ್​​, ಬಿಜೆಪಿ ಮಧ್ಯೆ ಅಧ್ಯಕ್ಷ ಸ್ಥಾನಕ್ಕೆ ಗುದ್ದಾಟ
ಬಾಗಲೂರು ಗ್ರಾಮ ಪಂಚಾಯತಿ
Follow us
ನವೀನ್ ಕುಮಾರ್ ಟಿ
| Updated By: ಗಂಗಾಧರ​ ಬ. ಸಾಬೋಜಿ

Updated on:Dec 13, 2023 | 4:21 PM

ದೇವನಹಳ್ಳಿ, ಡಿಸೆಂಬರ್​​ 13: ಬೆಂಗಳೂರು ಉತ್ತರ ತಾಲೂಕಿನ ಬಾಗಲೂರು ಗ್ರಾಮ ಪಂಚಾಯತಿ ಹುದ್ದೆಗೆ ಕಾಂಗ್ರೆಸ್ (Congress)​ ಮತ್ತು ಬಿಜೆಪಿ ನಡುವೆ ಗಾದಿಗಾಗಿ ಹೋರಾಟವೇ ನಡೆಯುತ್ತಿದೆ. ಹಾಲಿ ಅಧ್ಯಕ್ಷ ಸ್ಥಾನ ಉಳಿಸಿಕೊಳ್ಳಲು ಕಾಂಗ್ರೆಸ್​ ಒಂದು ಕಡೆಯಾದರೆ, ಹೊಸದಾಗಿ ಅಧ್ಯಕ್ಷ ‌ಸ್ಥಾನ ಪಡೆಯಲು ಕಸರತ್ತು ನಡೆಸುತ್ತಿರುವ ಬಿಜೆಪಿ ಮತ್ತೊಂದು ಕಡೆ. ಈ ಹಿಂದೆ ಪಂಚಾಯತಿ ಚುನಾವಣೆಯಲ್ಲಿ 17 ಜನ ಕಾಂಗ್ರೆಸ್​ ಬೆಂಬಲಿತರು, 6 ಜನ ಬಿಜೆಪಿ ಹಾಗೂ ಮೂವರು ಜೆಡಿಎಸ್ ಸದಸ್ಯರು ಗೆದ್ದಿದ್ದರು.

ಸ್ಟೇ ತಂದು ಬಿಜೆಪಿ ಆಪರೇಷನ್​ಗೆ ಟಾಂಗ್ ಕೊಟ್ಟ ಕಾಂಗ್ರೆಸ್​

ಗೆದ್ದ ಕಾಂಗ್ರೆಸ್​​ ಸದಸ್ಯರನ್ನ ರೆಸಾರ್ಟ್​ಗೆ ಕರೆದುಕೊಂಡು ಹೋಗಿದ್ದ ಬಿಜೆಪಿ ಬೆಂಬಲಿತರು ಆಪರೇಷನ್ ಮಾಡಲು ಹೊರಟಿದ್ದರು. ಕಾಂಗ್ರೆಸ್​ ಬೆಂಬಲಿತ ಅಧ್ಯಕ್ಷ ಮುನೇಗೌಡ ವಿರುದ್ದ ಸದಸ್ಯರು ಅವಿಶ್ವಾಸ ಮಂಡನೆ ನಿರ್ಣಯ ಮಾಡಿದ್ದರು. ಜೊತೆಗೆ ಬಿಜೆಪಿ ಬೆಂಬಲಿತ ಸದಸ್ಯನಿಗೆ ಅಧ್ಯಕ್ಷ ಸ್ಥಾನ ನೀಡಲು ಬಿಜೆಪಿ ಸದಸ್ಯರು ಆಪರೇಷನ್ ಮಾಡಿದ್ದರು. ಆಪರೇಷನ್ ಕಮಲಕ್ಕೆ ಒಳಗಾದ ಕಾಂಗ್ರೆಸ್​ ಸದಸ್ಯರು ಪಬ್​ನಲ್ಲಿ ಮೋಜು ಮಸ್ತಿ ಮಾಡುತ್ತಿದ್ದ ವಿಡಿಯೋ ಸಹ ವೈರಲ್​ ಆಗಿತ್ತು.

ಇದನ್ನೂ ಓದಿ: Puthila Parivar : ಗ್ರಾಮ ಪಂಚಾಯಿತಿ ಉಪಚುನಾವಣೆಯಲ್ಲೂ ಪುತ್ತಿಲ ಪರಿವಾರ ಕಮಾಲ್, ಬಿಜೆಪಿಗೆ ಮುಖಭಂಗ

ಆದರೆ ಕೊನೆ ಕ್ಷಣದಲ್ಲಿ ಅಧ್ಯಕ್ಷ ಆಯ್ಕೆಗೆ ಕಾಂಗ್ರೆಸ್​ ಮುಖಂಡರು ಕೋರ್ಟ್​​ನಿಂದ ಸ್ಟೇ ತಂದಿದ್ದರು. ಹಾಗಾಗಿ  ತಾತ್ಕಾಲಿಕವಾಗಿ ಗ್ರಾಮ ಪಂಚಾಯತಿ ಅಧ್ಯಕ್ಷ ಆಯ್ಕೆಯನ್ನು ಮುಂದೂಡಿಕೆ ಮಾಡಲಾಗಿತ್ತು.

ಇದನ್ನೂ ಓದಿ: ಗ್ರಾಮವನ್ನೇ ಮಾರಿದ ಗ್ರಾಮ ಪಂಚಾಯ್ತಿ PDO ವೆಂಕಟೇಶ ಅಮಾನತು-ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ CEO ಆದೇಶ

ಪಂಚಾಯತಿಗೆ ಆದಾಯ ಹೆಚ್ಚಾಗಿರುವ ಹಿ‌ನ್ನೆಲೆ ಅಧ್ಯಕ್ಷ ಸ್ಥಾನಕ್ಕೆ ಭಾರಿ ಪೈಟ್ ಶುರುವಾಗಿದೆ. ಆಯ್ಕೆ ಮುಂದೂಡಿಕೆಯಾದ ಕಾರಣ ಹೂವಿನ ಹಾರ ಹಾಕಿಕೊಂಡು ಕಾಂಗ್ರೆಸ್​ ಸದಸ್ಯರು‌ ಸಂಭ್ರಮಿಸಿದ್ದರು. ಸದ್ಯ ಬಾಗಲೂರು ಗ್ರಾಮ ಪಂಚಾಯಿತಿ ಕಂದಾಯ ಸಚಿವ ಕೃಷ್ಣಬೈರೆಗೌಡಗೆ ಪ್ರತಿಷ್ಠೆಯ ಕಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:19 pm, Wed, 13 December 23