AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಹಣ ಕೇಳಿದ್ದಕ್ಕೆ ಪಾನಿಪುರಿ ಅಂಗಡಿ ಧ್ವಂಸ ಪ್ರಕರಣ; ಆರೋಪಿ ವಿರುದ್ದ ರೌಡಿಶೀಟ್‌ ಓಪನ್‌ ಮಾಡಲು ಸೂಚಿಸಿದ ಎಸ್ಪಿ

ನೆಲಮಂಗಲದ ಅಂಗಡಿಯೊಂದರಲ್ಲಿ ಪಾನಿಪುರಿ ತಿಂದಿದ್ದ ಆರೋಪಿ ರಂಜಿತ್‌, ಅಂಗಡಿ ಮಾಲೀಕ ಹಣ ಕೇಳಿದ್ದಕ್ಕೆ ದರ್ಪ ತೋರಿ, ಪುಡಿರೌಡಿ ರಂಜಿತ್‌ ಪಾನಿಪುರಿ ಅಂಗಡಿ ಧ್ವಂಸಗೊಳಿಸಿ ಪುಂಡಾಟ ಮೆರೆದಿದ್ದ. ಈ ಹಿನ್ನಲೆ ಇದೀಗ ಆತನ ವಿರುದ್ಧ ರೌಡಿಶೀಟ್‌ ಓಪನ್‌ ಮಾಡಲು ಬೆಂಗಳೂರು ಗ್ರಾಮಾಂತರ SP ಮಲ್ಲಿಕಾರ್ಜುನ ಬಾಲದಂಡಿ ಸೂಚನೆ ನೀಡಿದ್ದಾರೆ.

ನೆಲಮಂಗಲ: ಹಣ ಕೇಳಿದ್ದಕ್ಕೆ ಪಾನಿಪುರಿ ಅಂಗಡಿ ಧ್ವಂಸ ಪ್ರಕರಣ; ಆರೋಪಿ ವಿರುದ್ದ ರೌಡಿಶೀಟ್‌ ಓಪನ್‌ ಮಾಡಲು ಸೂಚಿಸಿದ ಎಸ್ಪಿ
ಆರೋಪಿ ಅರೆಸ್ಟ್​
ಬಿ ಮೂರ್ತಿ, ನೆಲಮಂಗಲ
| Edited By: |

Updated on:Aug 29, 2023 | 5:26 PM

Share

ಬೆಂಗಳೂರು ಗ್ರಾಮಾಂತರ, ಆ.29: ಹಣ ಕೇಳಿದ್ದಕ್ಕೆ ಪಾನಿಪೂರಿ(panipuri) ಅಂಗಡಿ ಧ್ವಂಸಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಂಜಿತ್‌ ವಿರುದ್ಧ ರೌಡಿಶೀಟ್‌ ಓಪನ್‌ ಮಾಡಲು ಬೆಂಗಳೂರು ಗ್ರಾಮಾಂತರ (Bengaluru Rural) ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಸೂಚನೆ ನೀಡಿದ್ದಾರೆ. 2 ಕೊಲೆ ಯತ್ನ, ಸುಲಿಗೆ ಕೇಸ್‌ನಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಎಸ್‌ಪಿ ಸೂಚಿಸಿದ್ದಾರೆ. ನೆಲಮಂಗಲದ (Nelamangala) ಅಂಗಡಿಯೊಂದರಲ್ಲಿ ಪಾನಿಪುರಿ ತಿಂದಿದ್ದ ಆರೋಪಿ ರಂಜಿತ್‌, ಅಂಗಡಿ ಮಾಲೀಕ ಹಣ ಕೇಳಿದ್ದಕ್ಕೆ ದರ್ಪ ತೋರಿ, ಪುಡಿರೌಡಿ ರಂಜಿತ್‌ ಪಾನಿಪುರಿ ಅಂಗಡಿ ಧ್ವಂಸಗೊಳಿಸಿ ಪುಂಡಾಟ ಮೆರೆದಿದ್ದ.

ಘಟನೆ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಪಾನಿಪೂರಿ ತಿಂದು ಹಣ ಕೇಳಿದ್ದಕ್ಕೆ ಜೈಲಿನಿಂದ ಆಚೆ ಬಂದಿದ್ದ ದುಷ್ಕರ್ಮಿಯೊಬ್ಬ ಅವಾಜ್ ಹಾಕಿ, ಏಯ್ ನಾನ್ಯಾರು ಗೊತ್ತಾ? ನನ್ನ ಬಳಿಯೇ ಹಣ ಕೇಳುತ್ತೀಯಾ ಎಂದು ಪುಡಿ ರೌಡಿ ಅವಾಜ್ ಹಾಕಿದ್ದ. ಪ್ರಶ್ನೆ ಮಾಡಿದ ಜನರ ಎದುರು ಷರ್ಟ್ ಬಿಚ್ಚಿ ದರ್ಪ ತೋರಿಸಿದ್ದ ರಂಜಿತ್ ಎಂಬಾತ ಪುನೀತ್ ಅವರ ಪಾನಿಪೂರಿ ಅಂಗಡಿಯನ್ನೇ ಧ್ವಂಸ ಮಾಡಿದ್ದ.

ಇದನ್ನೂ ಓದಿ:ಪಾನಿಪುರಿ ತಿಂದು ಹಣ ಕೇಳಿದ್ದಕ್ಕೆ ನೆಲಮಂಗಲದಲ್ಲಿ ಪುಡಿ ರೌಡಿಯ ಆವಾಜ್, ಜನರ ಎದುರು ಷರ್ಟ್ ಬಿಚ್ಚಿ ದರ್ಪ!

ಹೌದು, ವಾಜರಹಳ್ಳಿಯ ರಂಜಿತ್ ಇತ್ತೀಚೆಗೆ ರಾಬರಿ ಕೇಸ್​ನಲ್ಲಿ ಜೈಲಿಗೆ ಹೋಗಿ ಬಂದಿದ್ದ. ಅದ್ರೂ ಬುದ್ಧಿ ಕಲಿಯದೆ ಪುಂಡಾಟಿಕೆ ಮೆ್ರೆದಿದ್ದ. ಅರೋಪಿಯ ಈ ಕೃತ್ಯ ಸಿಸಿಟಿವಿ ಕ್ಯಾಮಾರದಲ್ಲಿ ಸೆರೆಯಾಗಿತ್ತು. ಬಳಿಕ ನೆಲಮಂಗಲ ಪೊಲೀಸರು ಅರೋಪಿ ಪತ್ತೆಗಾಗಿ ಶೋಧ ನಡೆಸಿದ್ದರು. ಇದೀಗ ಆರೋಪಿ ವಿರುದ್ಧ ರೌಡಿಶೀಟ್​ ಓಪನ್​ ಮಾಡಲು ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಸೂಚನೆ ನೀಡಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 5:26 pm, Tue, 29 August 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!