AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ಪ್ರಯಾಣದ ವೇಳೆ ಶೌಚಾಲಯದಲ್ಲಿ ಸಿಲುಕಿದ ಪ್ರಯಾಣಿಕ; ಡೋರ್ ಓಪನ್ ಆಗದೆ ಪರದಾಟ, ಮುಂದೇನಾಯ್ತು?

ಮುಂಬೈನಿಂದ ಬೆಂಗಳೂರಿಗೆ ಬರುತ್ತಿದ್ದ ಪ್ರಯಾಣಿಕನೋರ್ವ ಶೌಚಾಲಯದಲ್ಲಿ ಸಿಲುಕಿಕೊಂಡಿದ್ದು ಸುಮಾರು ಒಂದು ಗಂಟೆಗಳ ಕಾರ್ಯಾಚರಣೆ ನಂತರ ಹರಸಾಹಸಪಟ್ಟು ಶೌಚಾಲಯದ ಬಾಗಿಲು ತೆರೆಯಲಾಗಿದೆ. ಒಂದು ಗಂಟೆಗೂ ಹೆಚ್ಚು ಕಾಲ ಶೌಚಾಲಯದಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಪ್ರಯಾಣಿಕ ಡೋರ್ ಓಪನ್ ಆಗುತ್ತಿದ್ದಂತೆ ನಿಟ್ಟುಸಿರುಬಿಟ್ಟಿದ್ದಾರೆ.

ವಿಮಾನ ಪ್ರಯಾಣದ ವೇಳೆ ಶೌಚಾಲಯದಲ್ಲಿ ಸಿಲುಕಿದ ಪ್ರಯಾಣಿಕ; ಡೋರ್ ಓಪನ್ ಆಗದೆ ಪರದಾಟ, ಮುಂದೇನಾಯ್ತು?
ಗಗನಸಖಿ ಪ್ರಯಾಣಿಕನಿಗೆ ಬರೆದ ಪತ್ರ
ನವೀನ್ ಕುಮಾರ್ ಟಿ
| Edited By: ಆಯೇಷಾ ಬಾನು|

Updated on: Jan 17, 2024 | 12:14 PM

Share

ದೇವನಹಳ್ಳಿ, ಜ.17: ಮುಂಬೈನಿಂದ ಬೆಂಗಳೂರಿಗೆ ಬರುವಾಗ ವಿಮಾನದ ಶೌಚಾಲಯದಲ್ಲಿ (Toilet) ಸಿಲುಕಿ ಪ್ರಯಾಣಿಕ ಪರದಾಡಿದ ಘಟನೆ ನಡೆದಿದೆ. ಸ್ಪೈಸ್ ಜೆಟ್ ವಿಮಾನದಲ್ಲಿ (Spicejet) ಇಂದು ಮುಂಜಾನೆ ಮುಂಬೈನಿಂದ ಬೆಂಗಳೂರಿಗೆ ಬರುತ್ತಿದ್ದ ಪ್ರಯಾಣಿಕನೋರ್ವ ಶೌಚಾಲಯದಲ್ಲಿ ಸಿಲುಕಿಕೊಂಡಿದ್ದು ಸುಮಾರು ಒಂದು ಗಂಟೆಗಳ ಕಾರ್ಯಾಚರಣೆ ನಂತರ ಹರಸಾಹಸಪಟ್ಟು ಶೌಚಾಲಯದ ಬಾಗಿಲು ತೆರೆಯಲಾಗಿದೆ. ಒಂದು ಗಂಟೆಗೂ ಹೆಚ್ಚು ಕಾಲ ಶೌಚಾಲಯದಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಪ್ರಯಾಣಿಕ ಡೋರ್ ಓಪನ್ ಆಗುತ್ತಿದ್ದಂತೆ ನಿಟ್ಟುಸಿರುಬಿಟ್ಟಿದ್ದಾರೆ. ಇನ್ನು ಈ ಕಾರ್ಯಾಚರಣೆ ವೇಳೆ ಶೌಚಾಲಯದಲ್ಲಿ ಸಿಲುಕಿದ್ದ ಪ್ರಯಾಣಿಕನಿಗೆ ಧೈರ್ಯ ತುಂಬಲು ಗಗನಸಖಿ ಪತ್ರ ಬರೆದಿದ್ದು ಶ್ಲಾಘನೀಯವಾಗಿತ್ತು.

ಕಳೆದ ರಾತ್ರಿ ಮುಂಬೈನಿಂದ ಬೆಂಗಳೂರಿಗೆ ಬರಲು ಪ್ರಯಾಣಿಕನೋರ್ವ ಸ್ಪೈಸ್ ಜೆಟ್ ವಿಮಾನ ಹತ್ತಿದ್ದ. ವಿಮಾನ ಪ್ರಯಾಣದ ವೇಳೆ ಶೌಚಾಲಯಕ್ಕೆ ಹೋಗಿದ್ದು ಹಿಂದಿರುಗುವಾಗ ಡೋರ್ ಓಪನ್ ಆಗಿಲ್ಲ. ಇದರಿಂದ ಒಂದು ಕ್ಷಣ ಬೆಚ್ಚಿಬಿದ್ದ ಪ್ರಯಾಣಿಕ ಗಾಬರಿಗೊಂಡು ಕಾಪಾಡುವಂತೆ ಕಿರುಚಾಡಿದ್ದಾನೆ. ಪ್ರಯಾಣಿಕನ ಪರದಾಟ ಕಂಡು ವಿಮಾನ ಸಿಬ್ಬಂದಿ ತಕ್ಷಣ ರಕ್ಷಣೆಗೆ ಧಾವಿಸಿದ್ದಾರೆ. ಡೋರ್ ಓಪನ್ ಮಾಡಲು ಹರಸಾಹಸಪಟ್ಟಿದ್ದಾರೆ. ಎಷ್ಟೇ ಪ್ರಯತ್ನ ಪಟ್ಟರೂ ಡೋರ್ ಓಪನ್ ಮಾಡಲು ಆಗದಿದ್ದಾಗ ಶೌಚಾಲಯದಲ್ಲಿದ್ದ ಪ್ರಯಾಣಿಕ ಮತ್ತಷ್ಟು ಗಾಬರಿಗೊಂಡಿದ್ದಾನೆ. ಈ ವೇಳೆ ಗಗನಸಖಿಯೊಬ್ಬರು ಪತ್ರ ಬರೆದು ಶೌಚಾಲಯದ ಒಳಗೆ ಕಳಿಸಿ ಧೈರ್ಯ ತುಂಬು ಕೆಲಸ ಮಾಡಿದ್ದಾರೆ. ನೀವು ಯಾವುದೇ ಕಾರಣಕ್ಕೂ ಗಾಬರಿ ಪಡೆಬೇಡಿ. ನಾವು ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇವೆ. ಕೆಲವೇ ನಿಮಿಷದಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ತಲುಪುತ್ತೇವೆ. ಆಗ ಮೈನ್ ಡೋರ್ ಓಪನ್ ಆಗುತ್ತೆ. ನಮ್ಮ ಇಂಜಿನಿಯರ್ಸ್​ಗಳು ಬಂದು ಶೌಚಾಲಯದ ಬಾಗಿಲು ತೆರೆಯುತ್ತಾರೆ ಎಂದು ಪತ್ರ ಬರೆದು ಧೈರ್ಯ ತುಂಬಿದ್ದಾರೆ.

ಕೊನೆಗೆ ಬೆಳಗ್ಗೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ತಲುಪುತ್ತಿದ್ದಂತೆ ಡೋರ್ ಓಪನ್ ಆಗಿದ್ದು ಒಂದು ಗಂಟೆಯ ಕಾರ್ಯಾಚರಣೆ ಬಳಿಕ ಪ್ರಯಾಣಿಕ ಹೊರ ಬಂದಿದ್ದಾನೆ. ಕೆಐಎಬಿಗೆ ಬಂದ ನಂತರ ಇಂಜಿನಿಯರ್ಸ್​ ಡೋರ್ ಓಪನ್ ಮಾಡಿದ್ದಾರೆ.

ಇದನ್ನೂ ಓದಿ: ಕೋಲಾರ: ಶ್ರೀರಾಮನ ಕಟೌಟ್, ಪ್ಲೆಕ್ಸ್​​ನ್ನು ಬ್ಲೇಡ್​​ನಿಂದ ಹರಿದ ದುಷ್ಕರ್ಮಿಗಳು

ಪೀಣ್ಯ ಫ್ಲೈಓವರ್ ಮತ್ತೆ 3 ದಿನ ಬಂದ್​

ಬೆಂಗಳೂರಿನ ಪೀಣ್ಯ ಫ್ಲೈಓವರ್​​​​ನನ್ನು ಪೊಲೀಸರು ಬಂದ್ ಮಾಡಿದ್ರು. ನಿನ್ನೆಯಿಂದ ಜನವರಿ 19ರ ಬೆಳಗ್ಗೆ 11 ಗಂಟೆವರೆಗೆ ಪೀಣ್ಯ ಫ್ಲೈಓವರ್ ಬಂದ್ ಆಗಿದೆ. ವಯಾಡಕ್ಟ್ ಸಮಗ್ರತೆ ಪರಿಶೀಲನೆ ಹಿನ್ನೆಲೆಯಲ್ಲಿ ಲೋಡ್ ಟೆಸ್ಟಿಂಗ್ ನಡೆಯಲಿದೆ. ಅದಕ್ಕಾಗಿ ಪೀಣ್ಯ ಫ್ಲೈಓವರ್ ಬಂದ್ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಸೂಚನೆ ಮೇರೆಗೆ 3 ದಿನ ಬಂದ್ ಆಗಿದೆ. ಜೊತೆಗೆ ತುಮಕೂರು ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು