AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚೆಕ್​ ಇನ್, ಚೆಕ್​ ಔಟ್​ಗೆ ಪ್ರಯಾಣಿಕರ ಪರದಾಟ

ಇಂಡಿಗೋ ಏರ್​​ಲೈನ್ಸ್​​ನಲ್ಲಿ ಸರ್ವರ್ ಸಮಸ್ಯೆ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​​ಪೋರ್ಟ್ (Kempegowda International Airport) ​​ನ ಟರ್ಮಿನಲ್​ 1ರಲ್ಲಿ ಚೆಕ್​​ ಇನ್ ಮತ್ತು ಚೆಕ್​ ಔಟ್ ಆಗಲು ನೂರಾರು ಜನ ಪ್ರಯಾಣಿಕರು ಪರದಾಡುವಂತಾಗಿದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚೆಕ್​ ಇನ್, ಚೆಕ್​ ಔಟ್​ಗೆ ಪ್ರಯಾಣಿಕರ ಪರದಾಟ
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚೆಕ್​ ಇನ್, ಚೆಕ್​ ಔಟ್​ಗೆ ಪ್ರಯಾಣಿಕರ ಪರದಾಟ
ನವೀನ್ ಕುಮಾರ್ ಟಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Oct 05, 2024 | 3:18 PM

Share

ಬೆಂಗಳೂರು, ಅ.05: ಇಂಡಿಗೋ ಏರ್​​ಲೈನ್ಸ್​​ನಲ್ಲಿ ಸರ್ವರ್ ಸಮಸ್ಯೆ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​​ಪೋರ್ಟ್(Kempegowda International Airport) ​​ನಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ. ಹೌದು, ಚೆಕ್​​ ಇನ್ ಮತ್ತು ಚೆಕ್​ ಔಟ್ ಆಗಲು ಟರ್ಮಿನಲ್​ 1ರಲ್ಲಿ ನೂರಾರು ಜನ ಪ್ರಯಾಣಿಕರು ಸರತಿ ಸಾಲಿನಲ್ಲಿ ನಿಲ್ಲುವಂತಾಗಿದೆ. ಚೆಕ್​​ಇನ್​ ಸಮಸ್ಯೆ ಹಿನ್ನೆಲೆ ವಿಮಾನಗಳ ಟೇಕಾಫ್​ನಲ್ಲೂ ವಿಳಂಬವಾಗಿದ್ದು, ಏರ್​​ಲೈನ್ಸ್ ಸಿಬ್ಬಂದಿಗಳು  ಕೆಲ ವಿಮಾನಗಳನ್ನು ರಿ ಶೆಡ್ಯೂಲ್ ಮಾಡಿದ್ದಾರೆ. ಬೆಳಗ್ಗೆ 11 ಗಂಟೆಯಿಂದ ಸರ್ವರ್ ಸಮಸ್ಯೆ ಮುಂದುವರೆದಿದ್ದು, ಸಮಯಕ್ಕೆ ಸರಿಯಾಗಿ ಪ್ರಯಾಣ ಮಾಡಲಾಗದೆ ಪ್ರಯಾಣಿಕರು ಕಂಗಾಲಾಗಿದ್ದಾರೆ.

ಇನ್ನು ಕಳೆದ ಜುಲೈ 19 ರಂದು ಕೂಡ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ​ನಲ್ಲಿ ಪ್ರಯಾಣಿಕರು ಪರದಾಡಿದ್ದರು. ನಾಲ್ಕು ಗಂಟೆಗಳ ಕಾಲ ಸರ್ವರ್ ಸಮಸ್ಯೆಯಿಂದ ಕಂಗಾಲಾಗಿದ್ದರು. ಇಂಡಿಗೋ, ಆಕಾಶ್, ಸ್ಪೈಸ್ ಜೆಟ್ ಮತ್ತು ಏರ್ ಇಂಡಿಯಾ ಏಕ್ಸಪ್ರೇಸ್ ಏರ್ಲೈನ್ಸ್ ಸಂಸ್ಥೆಗಳಲ್ಲಿ ಈ ತೊಂದರೆ ಉಂಟಾಗಿತ್ತು. ಪ್ರಯಾಣಿಕರ ಅನುಕೂಲಕ್ಕಾಗಿ ಸಿಬ್ಬಂದಿಗಳು ಮ್ಯಾನುವಲ್​ ಚೆಕ್ ಇನ್ ಮಾಡಿಸುತ್ತಿದ್ದಾರೆ. ಮ್ಯಾನುವಲ್ ಚೆಕಿಂಗ್​ನಿಂದ ಪ್ರಯಾಣಿಕರು ಕ್ಯೂನಲ್ಲಿ ನಿಲ್ಲುವಂತಾಗಿತ್ತು. ಇದೀಗ ಬೆಳಗ್ಗೆ 11 ಗಂಟೆಯಿಂದ ಸರ್ವರ್ ಸಮಸ್ಯೆ ಮುಂದುವರೆದಿದ್ದು, ಪ್ರಯಾಣಿಕರು ಪರದಾಟ ನಡೆಸಿದ್ದಾರೆ.

ಇದನ್ನೂ ಓದಿ:ಮೈಕ್ರೋಸಾಫ್ಟ್​ನ ಕ್ಲೌಡ್​ ಸರ್ವಿಸ್​ ಸಮಸ್ಯೆ: ಬೆಂಗಳೂರು, ಮಂಗಳೂರು ಏರ್​​ಪೋರ್ಟ್​​ನಲ್ಲಿ ಮ್ಯಾನುವಲ್ ಚೆಕ್​ ಇನ್​ ವ್ಯವಸ್ಥೆ

ಅಷ್ಟೇ ಅಲ್ಲ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೂ ಈ ಸಮಸ್ಯೆ ಕಂಡು ಬಂದಿತ್ತು. ಈ ಹಿನ್ನಲೆ ವಿಮಾನ ಸೇವೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಲು ನಿಗದಿತ ಸಮಯಕ್ಕಿಂತ ಮೊದಲೇ ವಿಮಾನ ನಿಲ್ದಾಣಕ್ಕೆ ಬರುವಂತೆ ಪ್ರಯಾಣಿಕರಿಗೆ ವಿಮಾನಯಾನ ಸಂಸ್ಥೆಗಳು ಸೂಚನೆ ನೀಡಿದ್ದವು. ಈ ಕುರಿತು ಎಷ್ಟೇ ಕ್ರಮಕೈಗೊಂಡರೂ ಸಮಸ್ಯೆ ಮಾತ್ರ ತಪ್ಪುತ್ತಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:09 pm, Sat, 5 October 24

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ