AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚೆಕ್​ ಇನ್, ಚೆಕ್​ ಔಟ್​ಗೆ ಪ್ರಯಾಣಿಕರ ಪರದಾಟ

ಇಂಡಿಗೋ ಏರ್​​ಲೈನ್ಸ್​​ನಲ್ಲಿ ಸರ್ವರ್ ಸಮಸ್ಯೆ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​​ಪೋರ್ಟ್ (Kempegowda International Airport) ​​ನ ಟರ್ಮಿನಲ್​ 1ರಲ್ಲಿ ಚೆಕ್​​ ಇನ್ ಮತ್ತು ಚೆಕ್​ ಔಟ್ ಆಗಲು ನೂರಾರು ಜನ ಪ್ರಯಾಣಿಕರು ಪರದಾಡುವಂತಾಗಿದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚೆಕ್​ ಇನ್, ಚೆಕ್​ ಔಟ್​ಗೆ ಪ್ರಯಾಣಿಕರ ಪರದಾಟ
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚೆಕ್​ ಇನ್, ಚೆಕ್​ ಔಟ್​ಗೆ ಪ್ರಯಾಣಿಕರ ಪರದಾಟ
ನವೀನ್ ಕುಮಾರ್ ಟಿ
| Edited By: |

Updated on:Oct 05, 2024 | 3:18 PM

Share

ಬೆಂಗಳೂರು, ಅ.05: ಇಂಡಿಗೋ ಏರ್​​ಲೈನ್ಸ್​​ನಲ್ಲಿ ಸರ್ವರ್ ಸಮಸ್ಯೆ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​​ಪೋರ್ಟ್(Kempegowda International Airport) ​​ನಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ. ಹೌದು, ಚೆಕ್​​ ಇನ್ ಮತ್ತು ಚೆಕ್​ ಔಟ್ ಆಗಲು ಟರ್ಮಿನಲ್​ 1ರಲ್ಲಿ ನೂರಾರು ಜನ ಪ್ರಯಾಣಿಕರು ಸರತಿ ಸಾಲಿನಲ್ಲಿ ನಿಲ್ಲುವಂತಾಗಿದೆ. ಚೆಕ್​​ಇನ್​ ಸಮಸ್ಯೆ ಹಿನ್ನೆಲೆ ವಿಮಾನಗಳ ಟೇಕಾಫ್​ನಲ್ಲೂ ವಿಳಂಬವಾಗಿದ್ದು, ಏರ್​​ಲೈನ್ಸ್ ಸಿಬ್ಬಂದಿಗಳು  ಕೆಲ ವಿಮಾನಗಳನ್ನು ರಿ ಶೆಡ್ಯೂಲ್ ಮಾಡಿದ್ದಾರೆ. ಬೆಳಗ್ಗೆ 11 ಗಂಟೆಯಿಂದ ಸರ್ವರ್ ಸಮಸ್ಯೆ ಮುಂದುವರೆದಿದ್ದು, ಸಮಯಕ್ಕೆ ಸರಿಯಾಗಿ ಪ್ರಯಾಣ ಮಾಡಲಾಗದೆ ಪ್ರಯಾಣಿಕರು ಕಂಗಾಲಾಗಿದ್ದಾರೆ.

ಇನ್ನು ಕಳೆದ ಜುಲೈ 19 ರಂದು ಕೂಡ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ​ನಲ್ಲಿ ಪ್ರಯಾಣಿಕರು ಪರದಾಡಿದ್ದರು. ನಾಲ್ಕು ಗಂಟೆಗಳ ಕಾಲ ಸರ್ವರ್ ಸಮಸ್ಯೆಯಿಂದ ಕಂಗಾಲಾಗಿದ್ದರು. ಇಂಡಿಗೋ, ಆಕಾಶ್, ಸ್ಪೈಸ್ ಜೆಟ್ ಮತ್ತು ಏರ್ ಇಂಡಿಯಾ ಏಕ್ಸಪ್ರೇಸ್ ಏರ್ಲೈನ್ಸ್ ಸಂಸ್ಥೆಗಳಲ್ಲಿ ಈ ತೊಂದರೆ ಉಂಟಾಗಿತ್ತು. ಪ್ರಯಾಣಿಕರ ಅನುಕೂಲಕ್ಕಾಗಿ ಸಿಬ್ಬಂದಿಗಳು ಮ್ಯಾನುವಲ್​ ಚೆಕ್ ಇನ್ ಮಾಡಿಸುತ್ತಿದ್ದಾರೆ. ಮ್ಯಾನುವಲ್ ಚೆಕಿಂಗ್​ನಿಂದ ಪ್ರಯಾಣಿಕರು ಕ್ಯೂನಲ್ಲಿ ನಿಲ್ಲುವಂತಾಗಿತ್ತು. ಇದೀಗ ಬೆಳಗ್ಗೆ 11 ಗಂಟೆಯಿಂದ ಸರ್ವರ್ ಸಮಸ್ಯೆ ಮುಂದುವರೆದಿದ್ದು, ಪ್ರಯಾಣಿಕರು ಪರದಾಟ ನಡೆಸಿದ್ದಾರೆ.

ಇದನ್ನೂ ಓದಿ:ಮೈಕ್ರೋಸಾಫ್ಟ್​ನ ಕ್ಲೌಡ್​ ಸರ್ವಿಸ್​ ಸಮಸ್ಯೆ: ಬೆಂಗಳೂರು, ಮಂಗಳೂರು ಏರ್​​ಪೋರ್ಟ್​​ನಲ್ಲಿ ಮ್ಯಾನುವಲ್ ಚೆಕ್​ ಇನ್​ ವ್ಯವಸ್ಥೆ

ಅಷ್ಟೇ ಅಲ್ಲ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೂ ಈ ಸಮಸ್ಯೆ ಕಂಡು ಬಂದಿತ್ತು. ಈ ಹಿನ್ನಲೆ ವಿಮಾನ ಸೇವೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಲು ನಿಗದಿತ ಸಮಯಕ್ಕಿಂತ ಮೊದಲೇ ವಿಮಾನ ನಿಲ್ದಾಣಕ್ಕೆ ಬರುವಂತೆ ಪ್ರಯಾಣಿಕರಿಗೆ ವಿಮಾನಯಾನ ಸಂಸ್ಥೆಗಳು ಸೂಚನೆ ನೀಡಿದ್ದವು. ಈ ಕುರಿತು ಎಷ್ಟೇ ಕ್ರಮಕೈಗೊಂಡರೂ ಸಮಸ್ಯೆ ಮಾತ್ರ ತಪ್ಪುತ್ತಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:09 pm, Sat, 5 October 24

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ