Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚೆಕ್​ ಇನ್, ಚೆಕ್​ ಔಟ್​ಗೆ ಪ್ರಯಾಣಿಕರ ಪರದಾಟ

ಇಂಡಿಗೋ ಏರ್​​ಲೈನ್ಸ್​​ನಲ್ಲಿ ಸರ್ವರ್ ಸಮಸ್ಯೆ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​​ಪೋರ್ಟ್ (Kempegowda International Airport) ​​ನ ಟರ್ಮಿನಲ್​ 1ರಲ್ಲಿ ಚೆಕ್​​ ಇನ್ ಮತ್ತು ಚೆಕ್​ ಔಟ್ ಆಗಲು ನೂರಾರು ಜನ ಪ್ರಯಾಣಿಕರು ಪರದಾಡುವಂತಾಗಿದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚೆಕ್​ ಇನ್, ಚೆಕ್​ ಔಟ್​ಗೆ ಪ್ರಯಾಣಿಕರ ಪರದಾಟ
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚೆಕ್​ ಇನ್, ಚೆಕ್​ ಔಟ್​ಗೆ ಪ್ರಯಾಣಿಕರ ಪರದಾಟ
Follow us
ನವೀನ್ ಕುಮಾರ್ ಟಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 05, 2024 | 3:18 PM

ಬೆಂಗಳೂರು, ಅ.05: ಇಂಡಿಗೋ ಏರ್​​ಲೈನ್ಸ್​​ನಲ್ಲಿ ಸರ್ವರ್ ಸಮಸ್ಯೆ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​​ಪೋರ್ಟ್(Kempegowda International Airport) ​​ನಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ. ಹೌದು, ಚೆಕ್​​ ಇನ್ ಮತ್ತು ಚೆಕ್​ ಔಟ್ ಆಗಲು ಟರ್ಮಿನಲ್​ 1ರಲ್ಲಿ ನೂರಾರು ಜನ ಪ್ರಯಾಣಿಕರು ಸರತಿ ಸಾಲಿನಲ್ಲಿ ನಿಲ್ಲುವಂತಾಗಿದೆ. ಚೆಕ್​​ಇನ್​ ಸಮಸ್ಯೆ ಹಿನ್ನೆಲೆ ವಿಮಾನಗಳ ಟೇಕಾಫ್​ನಲ್ಲೂ ವಿಳಂಬವಾಗಿದ್ದು, ಏರ್​​ಲೈನ್ಸ್ ಸಿಬ್ಬಂದಿಗಳು  ಕೆಲ ವಿಮಾನಗಳನ್ನು ರಿ ಶೆಡ್ಯೂಲ್ ಮಾಡಿದ್ದಾರೆ. ಬೆಳಗ್ಗೆ 11 ಗಂಟೆಯಿಂದ ಸರ್ವರ್ ಸಮಸ್ಯೆ ಮುಂದುವರೆದಿದ್ದು, ಸಮಯಕ್ಕೆ ಸರಿಯಾಗಿ ಪ್ರಯಾಣ ಮಾಡಲಾಗದೆ ಪ್ರಯಾಣಿಕರು ಕಂಗಾಲಾಗಿದ್ದಾರೆ.

ಇನ್ನು ಕಳೆದ ಜುಲೈ 19 ರಂದು ಕೂಡ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ​ನಲ್ಲಿ ಪ್ರಯಾಣಿಕರು ಪರದಾಡಿದ್ದರು. ನಾಲ್ಕು ಗಂಟೆಗಳ ಕಾಲ ಸರ್ವರ್ ಸಮಸ್ಯೆಯಿಂದ ಕಂಗಾಲಾಗಿದ್ದರು. ಇಂಡಿಗೋ, ಆಕಾಶ್, ಸ್ಪೈಸ್ ಜೆಟ್ ಮತ್ತು ಏರ್ ಇಂಡಿಯಾ ಏಕ್ಸಪ್ರೇಸ್ ಏರ್ಲೈನ್ಸ್ ಸಂಸ್ಥೆಗಳಲ್ಲಿ ಈ ತೊಂದರೆ ಉಂಟಾಗಿತ್ತು. ಪ್ರಯಾಣಿಕರ ಅನುಕೂಲಕ್ಕಾಗಿ ಸಿಬ್ಬಂದಿಗಳು ಮ್ಯಾನುವಲ್​ ಚೆಕ್ ಇನ್ ಮಾಡಿಸುತ್ತಿದ್ದಾರೆ. ಮ್ಯಾನುವಲ್ ಚೆಕಿಂಗ್​ನಿಂದ ಪ್ರಯಾಣಿಕರು ಕ್ಯೂನಲ್ಲಿ ನಿಲ್ಲುವಂತಾಗಿತ್ತು. ಇದೀಗ ಬೆಳಗ್ಗೆ 11 ಗಂಟೆಯಿಂದ ಸರ್ವರ್ ಸಮಸ್ಯೆ ಮುಂದುವರೆದಿದ್ದು, ಪ್ರಯಾಣಿಕರು ಪರದಾಟ ನಡೆಸಿದ್ದಾರೆ.

ಇದನ್ನೂ ಓದಿ:ಮೈಕ್ರೋಸಾಫ್ಟ್​ನ ಕ್ಲೌಡ್​ ಸರ್ವಿಸ್​ ಸಮಸ್ಯೆ: ಬೆಂಗಳೂರು, ಮಂಗಳೂರು ಏರ್​​ಪೋರ್ಟ್​​ನಲ್ಲಿ ಮ್ಯಾನುವಲ್ ಚೆಕ್​ ಇನ್​ ವ್ಯವಸ್ಥೆ

ಅಷ್ಟೇ ಅಲ್ಲ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೂ ಈ ಸಮಸ್ಯೆ ಕಂಡು ಬಂದಿತ್ತು. ಈ ಹಿನ್ನಲೆ ವಿಮಾನ ಸೇವೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಲು ನಿಗದಿತ ಸಮಯಕ್ಕಿಂತ ಮೊದಲೇ ವಿಮಾನ ನಿಲ್ದಾಣಕ್ಕೆ ಬರುವಂತೆ ಪ್ರಯಾಣಿಕರಿಗೆ ವಿಮಾನಯಾನ ಸಂಸ್ಥೆಗಳು ಸೂಚನೆ ನೀಡಿದ್ದವು. ಈ ಕುರಿತು ಎಷ್ಟೇ ಕ್ರಮಕೈಗೊಂಡರೂ ಸಮಸ್ಯೆ ಮಾತ್ರ ತಪ್ಪುತ್ತಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:09 pm, Sat, 5 October 24

2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು