ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚೆಕ್​ ಇನ್, ಚೆಕ್​ ಔಟ್​ಗೆ ಪ್ರಯಾಣಿಕರ ಪರದಾಟ

ಇಂಡಿಗೋ ಏರ್​​ಲೈನ್ಸ್​​ನಲ್ಲಿ ಸರ್ವರ್ ಸಮಸ್ಯೆ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​​ಪೋರ್ಟ್ (Kempegowda International Airport) ​​ನ ಟರ್ಮಿನಲ್​ 1ರಲ್ಲಿ ಚೆಕ್​​ ಇನ್ ಮತ್ತು ಚೆಕ್​ ಔಟ್ ಆಗಲು ನೂರಾರು ಜನ ಪ್ರಯಾಣಿಕರು ಪರದಾಡುವಂತಾಗಿದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚೆಕ್​ ಇನ್, ಚೆಕ್​ ಔಟ್​ಗೆ ಪ್ರಯಾಣಿಕರ ಪರದಾಟ
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚೆಕ್​ ಇನ್, ಚೆಕ್​ ಔಟ್​ಗೆ ಪ್ರಯಾಣಿಕರ ಪರದಾಟ
Edited By: ಕಿರಣ್ ಹನುಮಂತ್​ ಮಾದಾರ್

Updated on: Oct 05, 2024 | 3:18 PM

ಬೆಂಗಳೂರು, ಅ.05: ಇಂಡಿಗೋ ಏರ್​​ಲೈನ್ಸ್​​ನಲ್ಲಿ ಸರ್ವರ್ ಸಮಸ್ಯೆ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​​ಪೋರ್ಟ್(Kempegowda International Airport) ​​ನಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ. ಹೌದು, ಚೆಕ್​​ ಇನ್ ಮತ್ತು ಚೆಕ್​ ಔಟ್ ಆಗಲು ಟರ್ಮಿನಲ್​ 1ರಲ್ಲಿ ನೂರಾರು ಜನ ಪ್ರಯಾಣಿಕರು ಸರತಿ ಸಾಲಿನಲ್ಲಿ ನಿಲ್ಲುವಂತಾಗಿದೆ. ಚೆಕ್​​ಇನ್​ ಸಮಸ್ಯೆ ಹಿನ್ನೆಲೆ ವಿಮಾನಗಳ ಟೇಕಾಫ್​ನಲ್ಲೂ ವಿಳಂಬವಾಗಿದ್ದು, ಏರ್​​ಲೈನ್ಸ್ ಸಿಬ್ಬಂದಿಗಳು  ಕೆಲ ವಿಮಾನಗಳನ್ನು ರಿ ಶೆಡ್ಯೂಲ್ ಮಾಡಿದ್ದಾರೆ. ಬೆಳಗ್ಗೆ 11 ಗಂಟೆಯಿಂದ ಸರ್ವರ್ ಸಮಸ್ಯೆ ಮುಂದುವರೆದಿದ್ದು, ಸಮಯಕ್ಕೆ ಸರಿಯಾಗಿ ಪ್ರಯಾಣ ಮಾಡಲಾಗದೆ ಪ್ರಯಾಣಿಕರು ಕಂಗಾಲಾಗಿದ್ದಾರೆ.

ಇನ್ನು ಕಳೆದ ಜುಲೈ 19 ರಂದು ಕೂಡ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ​ನಲ್ಲಿ ಪ್ರಯಾಣಿಕರು ಪರದಾಡಿದ್ದರು. ನಾಲ್ಕು ಗಂಟೆಗಳ ಕಾಲ ಸರ್ವರ್ ಸಮಸ್ಯೆಯಿಂದ ಕಂಗಾಲಾಗಿದ್ದರು. ಇಂಡಿಗೋ, ಆಕಾಶ್, ಸ್ಪೈಸ್ ಜೆಟ್ ಮತ್ತು ಏರ್ ಇಂಡಿಯಾ ಏಕ್ಸಪ್ರೇಸ್ ಏರ್ಲೈನ್ಸ್ ಸಂಸ್ಥೆಗಳಲ್ಲಿ ಈ ತೊಂದರೆ ಉಂಟಾಗಿತ್ತು. ಪ್ರಯಾಣಿಕರ ಅನುಕೂಲಕ್ಕಾಗಿ ಸಿಬ್ಬಂದಿಗಳು ಮ್ಯಾನುವಲ್​ ಚೆಕ್ ಇನ್ ಮಾಡಿಸುತ್ತಿದ್ದಾರೆ. ಮ್ಯಾನುವಲ್ ಚೆಕಿಂಗ್​ನಿಂದ ಪ್ರಯಾಣಿಕರು ಕ್ಯೂನಲ್ಲಿ ನಿಲ್ಲುವಂತಾಗಿತ್ತು. ಇದೀಗ ಬೆಳಗ್ಗೆ 11 ಗಂಟೆಯಿಂದ ಸರ್ವರ್ ಸಮಸ್ಯೆ ಮುಂದುವರೆದಿದ್ದು, ಪ್ರಯಾಣಿಕರು ಪರದಾಟ ನಡೆಸಿದ್ದಾರೆ.

ಇದನ್ನೂ ಓದಿ:ಮೈಕ್ರೋಸಾಫ್ಟ್​ನ ಕ್ಲೌಡ್​ ಸರ್ವಿಸ್​ ಸಮಸ್ಯೆ: ಬೆಂಗಳೂರು, ಮಂಗಳೂರು ಏರ್​​ಪೋರ್ಟ್​​ನಲ್ಲಿ ಮ್ಯಾನುವಲ್ ಚೆಕ್​ ಇನ್​ ವ್ಯವಸ್ಥೆ

ಅಷ್ಟೇ ಅಲ್ಲ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೂ ಈ ಸಮಸ್ಯೆ ಕಂಡು ಬಂದಿತ್ತು. ಈ ಹಿನ್ನಲೆ ವಿಮಾನ ಸೇವೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಲು ನಿಗದಿತ ಸಮಯಕ್ಕಿಂತ ಮೊದಲೇ ವಿಮಾನ ನಿಲ್ದಾಣಕ್ಕೆ ಬರುವಂತೆ ಪ್ರಯಾಣಿಕರಿಗೆ ವಿಮಾನಯಾನ ಸಂಸ್ಥೆಗಳು ಸೂಚನೆ ನೀಡಿದ್ದವು. ಈ ಕುರಿತು ಎಷ್ಟೇ ಕ್ರಮಕೈಗೊಂಡರೂ ಸಮಸ್ಯೆ ಮಾತ್ರ ತಪ್ಪುತ್ತಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:09 pm, Sat, 5 October 24

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us