AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ನೀನು ಬೇಕು ಅಷ್ಟೇ.. ಹೀಗಂತ ವಿವಾಹಿತ ಯುವತಿಗೆ ಪೀಣ್ಯದಲ್ಲಿ ಭಗ್ನ ಪ್ರೇಮಿಯಿಂದ ನಿರಂತರ ಕಾಟ

ಮೊಬೈಲ್​ ನಂಬರ್‌ ಪಡೆದು ಪದೇ ಪದೆ ಕರೆ ಮಾಡಿ ಮನು ಆ ಮಹಿಳೆಯನ್ನು ಮಾತನಾಡುತ್ತಿದ್ದ. ತನಗೆ ಮದುವೆ ಆಗಿದೆ ಅಂದ್ರೂ ಪತಿಯನ್ನ ಬಿಟ್ಟು ಬರಲು ಒತ್ತಾಯ ಮಾಡುತ್ತಿದ್ದನಂತೆ! ಒಪ್ಪದೆ ಇದ್ದಾಗ ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಹಿಳೆ ಬರುತ್ತಿದ್ದ ಅಟೋ ಅಡ್ಡ ಗಟ್ಟಿ ಅಟೋದಲ್ಲಿ ಆತನೂ ಕುಳಿತು ಅಸಭ್ಯ ವರ್ತನೆ ತೋರಿದ್ದಾನೆ.

ನನಗೆ ನೀನು ಬೇಕು ಅಷ್ಟೇ.. ಹೀಗಂತ ವಿವಾಹಿತ ಯುವತಿಗೆ ಪೀಣ್ಯದಲ್ಲಿ ಭಗ್ನ ಪ್ರೇಮಿಯಿಂದ ನಿರಂತರ ಕಾಟ
ವಿವಾಹಿತ ಯುವತಿಗೆ ಭಗ್ನ ಪ್ರೇಮಿಯಿಂದ ನಿರಂತರ ಕಾಟ
ಬಿ ಮೂರ್ತಿ, ನೆಲಮಂಗಲ
| Edited By: |

Updated on: Dec 11, 2023 | 11:17 AM

Share

ನೆಲಮಂಗಲ, ಡಿಸೆಂಬರ್​ 11: ನೀನು ನನಗೆ ಬೇಕು, ನಿನ್ನ ಜೊತೆಯಲ್ಲಿ ನಾನು ಮಲಗಬೇಕು ಅಷ್ಟೇ.. ಹೀಗಂತ 25 ವರ್ಷದ ವಿವಾಹಿತ ಮಹಿಳೆಗೆ ಭಗ್ನ ಪ್ರೇಮಿಯೊಬ್ಬನಿಂದ ನಿರಂತರ ಕಾಟ ಎದುರಾಗಿದೆ (Torcher). ಈ ಸಂಬಂಧ ಪೀಣ್ಯ (Peenya) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ನೆಲಗದರನಹಳ್ಳಿಯಲ್ಲಿರುವ ಮಣಪ್ಪುರಂ ಫೈನಾನ್ಸ್ ನಲ್ಲಿ ಬಾಧಿತ ಮಹಿಳೆ (Woman) ಕೆಲಸ ಮಾಡುತ್ತಿದ್ದ ವೇಳೆ ಅರೋಪಿ ಮನು ಪರಿಚಯವಾಗಿತ್ತು. ಒಡವೆಗಳನ್ನು ಗಿರವಿ ಇಡಲು ಮತ್ತು ಬಿಡಿಸಿಕೊಳ್ಳಲು ಮನು ಬರುತ್ತಿದ್ದ. ಈ ವೇಳೆ ಸ್ವಲ್ಪಮಟ್ಟಿಗೆ ಸಲುಗೆಯಾಗಿದ್ದು, ಬಳಿಕ ಅವರಿಬ್ಬರದು ಸ್ನೇಹಕ್ಕೆ ತಿರುಗಿತ್ತು.

ಮುಂದೆ ಮಹಿಳೆಯ ಮೊಬೈಲ್​ ನಂಬರ್‌ ಪಡೆದು ಪದೇ ಪದೆ ಕರೆ ಮಾಡಿ ಮನು ಆ ಮಹಿಳೆಯನ್ನು ಮಾತನಾಡುತ್ತಿದ್ದ. ತನಗೆ ಮದುವೆ ಆಗಿದೆ ಅಂದ್ರೂ ಪತಿಯನ್ನ ಬಿಟ್ಟು ಬರಲು ಒತ್ತಾಯ ಮಾಡುತ್ತಿದ್ದನಂತೆ ಮನು! ಒಪ್ಪದೆ ಇದ್ದಾಗ ಮಹಿಳೆ ಬರುತ್ತಿದ್ದ ಅಟೋ ಅಡ್ಡ ಗಟ್ಟಿ ಅಟೋದಲ್ಲಿ ಆತನೂ ಕುಳಿತು ಅಸಭ್ಯ ವರ್ತನೆ ತೋರಿದ್ದಾನೆ.

ಮಹಿಳೆಯ ಜೊತೆ ಪೋಟೋ ತಗೆದು ಬ್ಲಾಕ್ ಮೇಲ್ ಮಾಡಿದ್ದಾನೆ ಮನು. ಈ ವೇಳೆ ಅಟೋ ಚಾಲಕನಿಗೂ ಧಮ್ಕಿ ಹಾಕಿದ್ದಾನೆ. ಅದಾದಮೇಲೆ ಮನು ಅಟೋ ಇಳಿದು ಹೊರಟು ಹೋಗಿದ್ದ. ನಡೆದ ವಿಷಯ ಪತಿಯೊಂದಿಗೆ ಹೇಳಿಕೊಂಡಿದ್ದಾರೆ ಆ ಮಹಿಳೆ.

Also Read: ಸೂಲಿಬೆಲೆ- ರಾಡ್ ನಿಂದ ಹೊಡೆದು ವೃದ್ದ ದಂಪತಿಯ ಹತ್ಯೆ, ಕೋಟಿ ಕೋಟಿ ಆಸ್ತಿ ವಿಚಾರಕ್ಕೆ ನಡೆಯಿತಾ ಕಗ್ಗೊಲೆ?

ತನ್ನ ಪತ್ನಿಯ ತಂಟೆಗೆ ಬಾರದಂತೆ ಮನುಗೆ ಪತಿ ವಾರ್ನ್ ಮಾಡಿದ್ದಾರೆ. ಈ ವೇಳೆ ಮಹಿಳೆಯ ಪತಿಗೂ ಜೀವಬೆದರಿಕೆ ಹಾಕಿದ್ದಾನೆ ಭೂಪ. ಮಹಿಳೆಯ ಜೊತೆಗಿನ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಹಾಕುವ ಬೆದರಿಕೆಯೊಡ್ಡಿದ್ದಾನೆ. ಇದೀಗ ಭಗ್ನ ಪ್ರೇಮಿ ವಿರುದ್ಧ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಮುಂದೇನೋ ಕಾದುನೋಡಬೇಕಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್