AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ನೀನು ಬೇಕು ಅಷ್ಟೇ.. ಹೀಗಂತ ವಿವಾಹಿತ ಯುವತಿಗೆ ಪೀಣ್ಯದಲ್ಲಿ ಭಗ್ನ ಪ್ರೇಮಿಯಿಂದ ನಿರಂತರ ಕಾಟ

ಮೊಬೈಲ್​ ನಂಬರ್‌ ಪಡೆದು ಪದೇ ಪದೆ ಕರೆ ಮಾಡಿ ಮನು ಆ ಮಹಿಳೆಯನ್ನು ಮಾತನಾಡುತ್ತಿದ್ದ. ತನಗೆ ಮದುವೆ ಆಗಿದೆ ಅಂದ್ರೂ ಪತಿಯನ್ನ ಬಿಟ್ಟು ಬರಲು ಒತ್ತಾಯ ಮಾಡುತ್ತಿದ್ದನಂತೆ! ಒಪ್ಪದೆ ಇದ್ದಾಗ ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಹಿಳೆ ಬರುತ್ತಿದ್ದ ಅಟೋ ಅಡ್ಡ ಗಟ್ಟಿ ಅಟೋದಲ್ಲಿ ಆತನೂ ಕುಳಿತು ಅಸಭ್ಯ ವರ್ತನೆ ತೋರಿದ್ದಾನೆ.

ನನಗೆ ನೀನು ಬೇಕು ಅಷ್ಟೇ.. ಹೀಗಂತ ವಿವಾಹಿತ ಯುವತಿಗೆ ಪೀಣ್ಯದಲ್ಲಿ ಭಗ್ನ ಪ್ರೇಮಿಯಿಂದ ನಿರಂತರ ಕಾಟ
ವಿವಾಹಿತ ಯುವತಿಗೆ ಭಗ್ನ ಪ್ರೇಮಿಯಿಂದ ನಿರಂತರ ಕಾಟ
ಬಿ ಮೂರ್ತಿ, ನೆಲಮಂಗಲ
| Edited By: |

Updated on: Dec 11, 2023 | 11:17 AM

Share

ನೆಲಮಂಗಲ, ಡಿಸೆಂಬರ್​ 11: ನೀನು ನನಗೆ ಬೇಕು, ನಿನ್ನ ಜೊತೆಯಲ್ಲಿ ನಾನು ಮಲಗಬೇಕು ಅಷ್ಟೇ.. ಹೀಗಂತ 25 ವರ್ಷದ ವಿವಾಹಿತ ಮಹಿಳೆಗೆ ಭಗ್ನ ಪ್ರೇಮಿಯೊಬ್ಬನಿಂದ ನಿರಂತರ ಕಾಟ ಎದುರಾಗಿದೆ (Torcher). ಈ ಸಂಬಂಧ ಪೀಣ್ಯ (Peenya) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ನೆಲಗದರನಹಳ್ಳಿಯಲ್ಲಿರುವ ಮಣಪ್ಪುರಂ ಫೈನಾನ್ಸ್ ನಲ್ಲಿ ಬಾಧಿತ ಮಹಿಳೆ (Woman) ಕೆಲಸ ಮಾಡುತ್ತಿದ್ದ ವೇಳೆ ಅರೋಪಿ ಮನು ಪರಿಚಯವಾಗಿತ್ತು. ಒಡವೆಗಳನ್ನು ಗಿರವಿ ಇಡಲು ಮತ್ತು ಬಿಡಿಸಿಕೊಳ್ಳಲು ಮನು ಬರುತ್ತಿದ್ದ. ಈ ವೇಳೆ ಸ್ವಲ್ಪಮಟ್ಟಿಗೆ ಸಲುಗೆಯಾಗಿದ್ದು, ಬಳಿಕ ಅವರಿಬ್ಬರದು ಸ್ನೇಹಕ್ಕೆ ತಿರುಗಿತ್ತು.

ಮುಂದೆ ಮಹಿಳೆಯ ಮೊಬೈಲ್​ ನಂಬರ್‌ ಪಡೆದು ಪದೇ ಪದೆ ಕರೆ ಮಾಡಿ ಮನು ಆ ಮಹಿಳೆಯನ್ನು ಮಾತನಾಡುತ್ತಿದ್ದ. ತನಗೆ ಮದುವೆ ಆಗಿದೆ ಅಂದ್ರೂ ಪತಿಯನ್ನ ಬಿಟ್ಟು ಬರಲು ಒತ್ತಾಯ ಮಾಡುತ್ತಿದ್ದನಂತೆ ಮನು! ಒಪ್ಪದೆ ಇದ್ದಾಗ ಮಹಿಳೆ ಬರುತ್ತಿದ್ದ ಅಟೋ ಅಡ್ಡ ಗಟ್ಟಿ ಅಟೋದಲ್ಲಿ ಆತನೂ ಕುಳಿತು ಅಸಭ್ಯ ವರ್ತನೆ ತೋರಿದ್ದಾನೆ.

ಮಹಿಳೆಯ ಜೊತೆ ಪೋಟೋ ತಗೆದು ಬ್ಲಾಕ್ ಮೇಲ್ ಮಾಡಿದ್ದಾನೆ ಮನು. ಈ ವೇಳೆ ಅಟೋ ಚಾಲಕನಿಗೂ ಧಮ್ಕಿ ಹಾಕಿದ್ದಾನೆ. ಅದಾದಮೇಲೆ ಮನು ಅಟೋ ಇಳಿದು ಹೊರಟು ಹೋಗಿದ್ದ. ನಡೆದ ವಿಷಯ ಪತಿಯೊಂದಿಗೆ ಹೇಳಿಕೊಂಡಿದ್ದಾರೆ ಆ ಮಹಿಳೆ.

Also Read: ಸೂಲಿಬೆಲೆ- ರಾಡ್ ನಿಂದ ಹೊಡೆದು ವೃದ್ದ ದಂಪತಿಯ ಹತ್ಯೆ, ಕೋಟಿ ಕೋಟಿ ಆಸ್ತಿ ವಿಚಾರಕ್ಕೆ ನಡೆಯಿತಾ ಕಗ್ಗೊಲೆ?

ತನ್ನ ಪತ್ನಿಯ ತಂಟೆಗೆ ಬಾರದಂತೆ ಮನುಗೆ ಪತಿ ವಾರ್ನ್ ಮಾಡಿದ್ದಾರೆ. ಈ ವೇಳೆ ಮಹಿಳೆಯ ಪತಿಗೂ ಜೀವಬೆದರಿಕೆ ಹಾಕಿದ್ದಾನೆ ಭೂಪ. ಮಹಿಳೆಯ ಜೊತೆಗಿನ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಹಾಕುವ ಬೆದರಿಕೆಯೊಡ್ಡಿದ್ದಾನೆ. ಇದೀಗ ಭಗ್ನ ಪ್ರೇಮಿ ವಿರುದ್ಧ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಮುಂದೇನೋ ಕಾದುನೋಡಬೇಕಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ