ನನಗೆ ನೀನು ಬೇಕು ಅಷ್ಟೇ.. ಹೀಗಂತ ವಿವಾಹಿತ ಯುವತಿಗೆ ಪೀಣ್ಯದಲ್ಲಿ ಭಗ್ನ ಪ್ರೇಮಿಯಿಂದ ನಿರಂತರ ಕಾಟ

ಮೊಬೈಲ್​ ನಂಬರ್‌ ಪಡೆದು ಪದೇ ಪದೆ ಕರೆ ಮಾಡಿ ಮನು ಆ ಮಹಿಳೆಯನ್ನು ಮಾತನಾಡುತ್ತಿದ್ದ. ತನಗೆ ಮದುವೆ ಆಗಿದೆ ಅಂದ್ರೂ ಪತಿಯನ್ನ ಬಿಟ್ಟು ಬರಲು ಒತ್ತಾಯ ಮಾಡುತ್ತಿದ್ದನಂತೆ! ಒಪ್ಪದೆ ಇದ್ದಾಗ ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಹಿಳೆ ಬರುತ್ತಿದ್ದ ಅಟೋ ಅಡ್ಡ ಗಟ್ಟಿ ಅಟೋದಲ್ಲಿ ಆತನೂ ಕುಳಿತು ಅಸಭ್ಯ ವರ್ತನೆ ತೋರಿದ್ದಾನೆ.

ನನಗೆ ನೀನು ಬೇಕು ಅಷ್ಟೇ.. ಹೀಗಂತ ವಿವಾಹಿತ ಯುವತಿಗೆ ಪೀಣ್ಯದಲ್ಲಿ ಭಗ್ನ ಪ್ರೇಮಿಯಿಂದ ನಿರಂತರ ಕಾಟ
ವಿವಾಹಿತ ಯುವತಿಗೆ ಭಗ್ನ ಪ್ರೇಮಿಯಿಂದ ನಿರಂತರ ಕಾಟ
Follow us
| Updated By: ಸಾಧು ಶ್ರೀನಾಥ್​

Updated on: Dec 11, 2023 | 11:17 AM

ನೆಲಮಂಗಲ, ಡಿಸೆಂಬರ್​ 11: ನೀನು ನನಗೆ ಬೇಕು, ನಿನ್ನ ಜೊತೆಯಲ್ಲಿ ನಾನು ಮಲಗಬೇಕು ಅಷ್ಟೇ.. ಹೀಗಂತ 25 ವರ್ಷದ ವಿವಾಹಿತ ಮಹಿಳೆಗೆ ಭಗ್ನ ಪ್ರೇಮಿಯೊಬ್ಬನಿಂದ ನಿರಂತರ ಕಾಟ ಎದುರಾಗಿದೆ (Torcher). ಈ ಸಂಬಂಧ ಪೀಣ್ಯ (Peenya) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ನೆಲಗದರನಹಳ್ಳಿಯಲ್ಲಿರುವ ಮಣಪ್ಪುರಂ ಫೈನಾನ್ಸ್ ನಲ್ಲಿ ಬಾಧಿತ ಮಹಿಳೆ (Woman) ಕೆಲಸ ಮಾಡುತ್ತಿದ್ದ ವೇಳೆ ಅರೋಪಿ ಮನು ಪರಿಚಯವಾಗಿತ್ತು. ಒಡವೆಗಳನ್ನು ಗಿರವಿ ಇಡಲು ಮತ್ತು ಬಿಡಿಸಿಕೊಳ್ಳಲು ಮನು ಬರುತ್ತಿದ್ದ. ಈ ವೇಳೆ ಸ್ವಲ್ಪಮಟ್ಟಿಗೆ ಸಲುಗೆಯಾಗಿದ್ದು, ಬಳಿಕ ಅವರಿಬ್ಬರದು ಸ್ನೇಹಕ್ಕೆ ತಿರುಗಿತ್ತು.

ಮುಂದೆ ಮಹಿಳೆಯ ಮೊಬೈಲ್​ ನಂಬರ್‌ ಪಡೆದು ಪದೇ ಪದೆ ಕರೆ ಮಾಡಿ ಮನು ಆ ಮಹಿಳೆಯನ್ನು ಮಾತನಾಡುತ್ತಿದ್ದ. ತನಗೆ ಮದುವೆ ಆಗಿದೆ ಅಂದ್ರೂ ಪತಿಯನ್ನ ಬಿಟ್ಟು ಬರಲು ಒತ್ತಾಯ ಮಾಡುತ್ತಿದ್ದನಂತೆ ಮನು! ಒಪ್ಪದೆ ಇದ್ದಾಗ ಮಹಿಳೆ ಬರುತ್ತಿದ್ದ ಅಟೋ ಅಡ್ಡ ಗಟ್ಟಿ ಅಟೋದಲ್ಲಿ ಆತನೂ ಕುಳಿತು ಅಸಭ್ಯ ವರ್ತನೆ ತೋರಿದ್ದಾನೆ.

ಮಹಿಳೆಯ ಜೊತೆ ಪೋಟೋ ತಗೆದು ಬ್ಲಾಕ್ ಮೇಲ್ ಮಾಡಿದ್ದಾನೆ ಮನು. ಈ ವೇಳೆ ಅಟೋ ಚಾಲಕನಿಗೂ ಧಮ್ಕಿ ಹಾಕಿದ್ದಾನೆ. ಅದಾದಮೇಲೆ ಮನು ಅಟೋ ಇಳಿದು ಹೊರಟು ಹೋಗಿದ್ದ. ನಡೆದ ವಿಷಯ ಪತಿಯೊಂದಿಗೆ ಹೇಳಿಕೊಂಡಿದ್ದಾರೆ ಆ ಮಹಿಳೆ.

Also Read: ಸೂಲಿಬೆಲೆ- ರಾಡ್ ನಿಂದ ಹೊಡೆದು ವೃದ್ದ ದಂಪತಿಯ ಹತ್ಯೆ, ಕೋಟಿ ಕೋಟಿ ಆಸ್ತಿ ವಿಚಾರಕ್ಕೆ ನಡೆಯಿತಾ ಕಗ್ಗೊಲೆ?

ತನ್ನ ಪತ್ನಿಯ ತಂಟೆಗೆ ಬಾರದಂತೆ ಮನುಗೆ ಪತಿ ವಾರ್ನ್ ಮಾಡಿದ್ದಾರೆ. ಈ ವೇಳೆ ಮಹಿಳೆಯ ಪತಿಗೂ ಜೀವಬೆದರಿಕೆ ಹಾಕಿದ್ದಾನೆ ಭೂಪ. ಮಹಿಳೆಯ ಜೊತೆಗಿನ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಹಾಕುವ ಬೆದರಿಕೆಯೊಡ್ಡಿದ್ದಾನೆ. ಇದೀಗ ಭಗ್ನ ಪ್ರೇಮಿ ವಿರುದ್ಧ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಮುಂದೇನೋ ಕಾದುನೋಡಬೇಕಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು