ನನಗೆ ನೀನು ಬೇಕು ಅಷ್ಟೇ.. ಹೀಗಂತ ವಿವಾಹಿತ ಯುವತಿಗೆ ಪೀಣ್ಯದಲ್ಲಿ ಭಗ್ನ ಪ್ರೇಮಿಯಿಂದ ನಿರಂತರ ಕಾಟ

ಮೊಬೈಲ್​ ನಂಬರ್‌ ಪಡೆದು ಪದೇ ಪದೆ ಕರೆ ಮಾಡಿ ಮನು ಆ ಮಹಿಳೆಯನ್ನು ಮಾತನಾಡುತ್ತಿದ್ದ. ತನಗೆ ಮದುವೆ ಆಗಿದೆ ಅಂದ್ರೂ ಪತಿಯನ್ನ ಬಿಟ್ಟು ಬರಲು ಒತ್ತಾಯ ಮಾಡುತ್ತಿದ್ದನಂತೆ! ಒಪ್ಪದೆ ಇದ್ದಾಗ ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಹಿಳೆ ಬರುತ್ತಿದ್ದ ಅಟೋ ಅಡ್ಡ ಗಟ್ಟಿ ಅಟೋದಲ್ಲಿ ಆತನೂ ಕುಳಿತು ಅಸಭ್ಯ ವರ್ತನೆ ತೋರಿದ್ದಾನೆ.

ನನಗೆ ನೀನು ಬೇಕು ಅಷ್ಟೇ.. ಹೀಗಂತ ವಿವಾಹಿತ ಯುವತಿಗೆ ಪೀಣ್ಯದಲ್ಲಿ ಭಗ್ನ ಪ್ರೇಮಿಯಿಂದ ನಿರಂತರ ಕಾಟ
ವಿವಾಹಿತ ಯುವತಿಗೆ ಭಗ್ನ ಪ್ರೇಮಿಯಿಂದ ನಿರಂತರ ಕಾಟ
Edited By:

Updated on: Dec 11, 2023 | 11:17 AM

ನೆಲಮಂಗಲ, ಡಿಸೆಂಬರ್​ 11: ನೀನು ನನಗೆ ಬೇಕು, ನಿನ್ನ ಜೊತೆಯಲ್ಲಿ ನಾನು ಮಲಗಬೇಕು ಅಷ್ಟೇ.. ಹೀಗಂತ 25 ವರ್ಷದ ವಿವಾಹಿತ ಮಹಿಳೆಗೆ ಭಗ್ನ ಪ್ರೇಮಿಯೊಬ್ಬನಿಂದ ನಿರಂತರ ಕಾಟ ಎದುರಾಗಿದೆ (Torcher). ಈ ಸಂಬಂಧ ಪೀಣ್ಯ (Peenya) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ನೆಲಗದರನಹಳ್ಳಿಯಲ್ಲಿರುವ ಮಣಪ್ಪುರಂ ಫೈನಾನ್ಸ್ ನಲ್ಲಿ ಬಾಧಿತ ಮಹಿಳೆ (Woman) ಕೆಲಸ ಮಾಡುತ್ತಿದ್ದ ವೇಳೆ ಅರೋಪಿ ಮನು ಪರಿಚಯವಾಗಿತ್ತು. ಒಡವೆಗಳನ್ನು ಗಿರವಿ ಇಡಲು ಮತ್ತು ಬಿಡಿಸಿಕೊಳ್ಳಲು ಮನು ಬರುತ್ತಿದ್ದ. ಈ ವೇಳೆ ಸ್ವಲ್ಪಮಟ್ಟಿಗೆ ಸಲುಗೆಯಾಗಿದ್ದು, ಬಳಿಕ ಅವರಿಬ್ಬರದು ಸ್ನೇಹಕ್ಕೆ ತಿರುಗಿತ್ತು.

ಮುಂದೆ ಮಹಿಳೆಯ ಮೊಬೈಲ್​ ನಂಬರ್‌ ಪಡೆದು ಪದೇ ಪದೆ ಕರೆ ಮಾಡಿ ಮನು ಆ ಮಹಿಳೆಯನ್ನು ಮಾತನಾಡುತ್ತಿದ್ದ. ತನಗೆ ಮದುವೆ ಆಗಿದೆ ಅಂದ್ರೂ ಪತಿಯನ್ನ ಬಿಟ್ಟು ಬರಲು ಒತ್ತಾಯ ಮಾಡುತ್ತಿದ್ದನಂತೆ ಮನು! ಒಪ್ಪದೆ ಇದ್ದಾಗ ಮಹಿಳೆ ಬರುತ್ತಿದ್ದ ಅಟೋ ಅಡ್ಡ ಗಟ್ಟಿ ಅಟೋದಲ್ಲಿ ಆತನೂ ಕುಳಿತು ಅಸಭ್ಯ ವರ್ತನೆ ತೋರಿದ್ದಾನೆ.

ಮಹಿಳೆಯ ಜೊತೆ ಪೋಟೋ ತಗೆದು ಬ್ಲಾಕ್ ಮೇಲ್ ಮಾಡಿದ್ದಾನೆ ಮನು. ಈ ವೇಳೆ ಅಟೋ ಚಾಲಕನಿಗೂ ಧಮ್ಕಿ ಹಾಕಿದ್ದಾನೆ. ಅದಾದಮೇಲೆ ಮನು ಅಟೋ ಇಳಿದು ಹೊರಟು ಹೋಗಿದ್ದ. ನಡೆದ ವಿಷಯ ಪತಿಯೊಂದಿಗೆ ಹೇಳಿಕೊಂಡಿದ್ದಾರೆ ಆ ಮಹಿಳೆ.

Also Read: ಸೂಲಿಬೆಲೆ- ರಾಡ್ ನಿಂದ ಹೊಡೆದು ವೃದ್ದ ದಂಪತಿಯ ಹತ್ಯೆ, ಕೋಟಿ ಕೋಟಿ ಆಸ್ತಿ ವಿಚಾರಕ್ಕೆ ನಡೆಯಿತಾ ಕಗ್ಗೊಲೆ?

ತನ್ನ ಪತ್ನಿಯ ತಂಟೆಗೆ ಬಾರದಂತೆ ಮನುಗೆ ಪತಿ ವಾರ್ನ್ ಮಾಡಿದ್ದಾರೆ. ಈ ವೇಳೆ ಮಹಿಳೆಯ ಪತಿಗೂ ಜೀವಬೆದರಿಕೆ ಹಾಕಿದ್ದಾನೆ ಭೂಪ. ಮಹಿಳೆಯ ಜೊತೆಗಿನ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಹಾಕುವ ಬೆದರಿಕೆಯೊಡ್ಡಿದ್ದಾನೆ. ಇದೀಗ ಭಗ್ನ ಪ್ರೇಮಿ ವಿರುದ್ಧ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಮುಂದೇನೋ ಕಾದುನೋಡಬೇಕಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
Follow Us