ಪರಪ್ಪನ ಅಗ್ರಹಾರಕ್ಕೆ ಮೊಬೈಲ್ ಜಾಮರ್ ಅಳವಡಿಕೆ, ಸ್ಥಳೀಯರಿಗೆ ಸಂಕಷ್ಟ

ಮೊಬೈಲ್​, ಕಂಪ್ಯೂಟರ್ ಯುಗದಲ್ಲಿ ನೆಟವರ್ಕ್​ ಬಹಳ ಮುಖ್ಯ. ಸ್ವಲ್ಪ ಇಂಟರ್​​ನೆಟ್​ ಡೌನ್​ ಆದ್ರೆ ಚಡಪಡಾಯಿಸುವ ಜನರಿದ್ದಾರೆ. ಅದರಲ್ಲಂತು ವರ್ಕ್​​ ಫ್ರಾಮ್​ ಹೋಮ್​ ಇದ್ದವರಿಗೆ ಯಾವುದೇ ಕಾರಣಕ್ಕೂ ಇಂಟರ್​ನೆಟ್​ ಸ್ಪೀಡ್​ ಕಡಿಮೆಯಾಗಬಾರದು. ಆದರೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೆಕಲ್​ ನಿವಾಸಿಗಳು ನೆಟವರ್ಕ್ ಸಮಸ್ಯೆ ಕಾಡುತ್ತಿದೆ. ಇದಕ್ಕೆ ಕಾರಣವೇನು ಇಲ್ಲಿದೆ ಓದಿ..​​

ಪರಪ್ಪನ ಅಗ್ರಹಾರಕ್ಕೆ ಮೊಬೈಲ್ ಜಾಮರ್ ಅಳವಡಿಕೆ, ಸ್ಥಳೀಯರಿಗೆ ಸಂಕಷ್ಟ
ಬೆಂಗಳೂರು ಕೇಂದ್ರ ಕಾರಾಗೃಹ
Follow us
| Updated By: ವಿವೇಕ ಬಿರಾದಾರ

Updated on: May 17, 2024 | 8:35 AM

ಬೆಂಗಳೂರು, ಮೇ 17: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ಆನೆಕಲ್​ನಲ್ಲಿರುವ (Anekal) ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ (Bengaluru Central Jail) ಇದ್ದುಕೊಂಡೇ ಕೊಲೆಗೆ ಸುಪಾರಿ ನೀಡಿರುವುದು, ಉಗ್ರ ಚಟುವಟಿಕೆಗಳ ನಂಟು ಹೊಂದಿರುವುದು, ಬ್ಲ್ಯಾಕ್​ ಮೇಲ್​ ಮಾಡಿರುವ ಪ್ರಕರಣಗಳು ವರದಿಯಾಗಿವೆ. ಇತ್ತೀಚಿಗೆ ಬೆಂಗಳೂರಿನ ವೈಟ್​ಫಿಲ್ಡ್​ನಲ್ಲಿರುವ ರಾಮೇಶ್ವರಂ ಕೆಫೆ ಬಾಂಬ್​ ಸ್ಫೋಟದ (Rameshwaram Cafe Blast) ಸಂಚನ್ನು ಪರಪ್ಪನ ಅಗ್ರಹಾರದಲ್ಲಿದ್ದುಕೊಂಡೆ ರೂಪಿಸಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಎಲ್ಲ ಘಟನೆಗಳಿಗೆ ಸಂಚು ರೂಪಿಸಲು ಮೊಬೈಲ್​ ಬಳಕೆ ಮಾಡಲಾಗಿದೆ. ಜೈಲಿನಲ್ಲಿರುವ ಖೈದಿಗಳು ಮೊಬೈಲ್​ ಬಳಸುತ್ತಿರುವುದು ರಾಜ್ಯ ಗೃಹ ಸಚಿವಾಲಯಕ್ಕೆ ತಲೆನೋವಾಗಿದೆ.

ಹೀಗಾಗಿ ಖೈದಿಗಳು ಮೊಬೈಲ್ ಬಳಸುವುದನ್ನು ಬ್ರೇಕ್ ಹಾಕಲು ಇಲಾಖೆ ಮೊಬೈಲ್ ನೆಟ್ವರ್ಕ್ ಜಾಮರ್ ಅಳವಡಿಸಿದೆ. ಆದರೆ ಇದರಿಂದ ಜೈಲಿನ ಸುತ್ತಮುತ್ತಲಿನ ವಾಸಿಗಳಿಗೆ ತೊಂದರೆಯಾಗಿದೆ. ಕಳೆದ 3-4 ತಿಂಗಳಿನಿಂದ ಮೊಬೈಲ್ ನೆಟ್ವರ್ಕ್ ಸಮಸ್ಯೆ ಎದುರಾಗಿದೆ. ಜೈಲಿನ ಸುತ್ತಮುತ್ತಲಿನ ನಿವಾಸಿಗಳ ಜೀವನ ದುಸ್ತರವಾಗಿದೆ.

ನೆಟ್ವರ್ಕ್ ಸಮಸ್ಯೆಯಿಂದಾಗಿ ಯಾವುದೇ ತುರ್ತು ಸಂದರ್ಭಗಳಲ್ಲಿ ಪೊಲೀಸ್, ಫೈರ್ ಮತ್ತು ಅಂಬ್ಯುಲೆನ್ಸ್ ಸೇವೆಗೆ ಕರೆ ಮಾಡಲು ಸಾಧ್ಯವಾಗುತ್ತಿಲ್ಲ. ಬೆಳಗ್ಗೆ ಮಕ್ಕಳನ್ನು ಶಾಲೆಗೆ ಕಳುಹಿಸಲು ಬಸ್, ಆಟೋ ವ್ಯವಸ್ಥೆ ಮಾಡಲು ಸಾಧ್ಯವಾಗುತ್ತಿಲ್ಲ. ಶಾಲೆಯಿಂದ ಮಕ್ಕಳು ಮರಳಿ ಕರೆತರಲು ಸಾದ್ಯವಾಗುತ್ತಿಲ್ಲ. ವರ್ಕ್ ಪ್ರಮ್ ಹೋಮ್ ಕೆಲಸ ಮಾಡಲು ಆಗುತ್ತಿಲ್ಲ. ತುರ್ತು ಕರೆ ಸೇರಿದಂತೆ ಯಾವುದೇ ಕರೆ ಸ್ವೀಕರಿಸಲು ಜೈಲಿನಿಂದ ಸರಿಸುಮಾರು ಎರಡು ಕಿ.ಮಿ ದೂರ ಹೋಗಬೇಕಿದೆ ಎಂದು ಅಪಾರ್ಟ್ಮೆಂಟ್ ವಾಸಿಗಳು ಜೈಲು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: CCB Raid: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

ಇನ್ನು ಪರಪ್ಪನ ಅಗ್ರಹಾರ ಜೈಲಿನ ಅಕ್ರಮ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಮೊಬೈಲ್ ಜಾಮರ್ ಅಳವಡಿಕೆ ಮಾಡಿಲ್ಲ. ಬದಲಾಗಿ ಸ್ಥಳೀಯರನ್ನು ಒಕ್ಕಲೆಬ್ಬಿಸಲು ಉದ್ದೇಶ ಪೂರ್ವಕವಾಗಿ ಮೊಬೈಲ್ ಜಾಮರ್ ಅಳವಡಿಕೆ ಮಾಡಲಾಗಿದೆ. ಕಾರಾಗೃಹದ ಅಕ್ಕಪಕ್ಕದ ಆಸ್ತಿಗಳನ್ನು ಖಾಲಿ ಮಾಡಿಸುವ ಸಲುವಾಗಿ ಹೀಗೆ ಮಾಡಲಾಗುತ್ತಿದೆ. ಇದರಿಂದ ಸ್ಥಳೀಯ ನಿವಾಸಿಗಳಿಗೆ ಸಮಸ್ಯೆಯಾಗಿ ಪರಿಣಮಿಸಿದೆ. ಜೈಲಿನ ಸುತ್ತಮುತ್ತಲಿನ 2 ಕಿ.ಮಿ ವ್ಯಾಪ್ತಿಯಲ್ಲಿ ನೆಟ್ವರ್ಕ್ ಸಿಗದೆ ಮೆಸೇಜ್ ಮತ್ತು ಪೋನ್ ಮಾಡಲು ಆಗುತ್ತಿಲ್ಲ. ಈ ಬಗ್ಗೆ ಜೈಲಾಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಜೈಲಿನಲ್ಲಿರುವ ಕೈದಿಗಳು ರಾಜರೋಷವಾಗಿ ಮೊಬೈಲ್, ಸೇರಿದಂತೆ ಮಾದಕ ವಸ್ತುಗಳನ್ನ ಎಗ್ಗಿಲ್ಲದೆ ಬಳಕೆ ಮಾಡಲಾಗುತ್ತಿದೆ. ಜೈಲಿನಲ್ಲಿನ ಕೈದಿಗಳು ಇಂದಿಗೂ ಮೊಬೈಲ್ ಬಳಸುತ್ತಿದ್ದು, ಅವರಿಗೆ ಮೊಬೈಲ್ ನೆಟ್ವರ್ಕ್ ಜಾಮರ್ ಯಾವುದೇ ಎಫೆಕ್ಟ್ ಆಗುತ್ತಿಲ್ಲ. ಆದರೆ ಏನೂ ತಪ್ಪು ಮಾಡದ ಸುತ್ತಮುತ್ತಲಿನ ಸಾವಿರಾರು ಸ್ಥಳೀಯ ವಾಸಿಗಳಿಗೆ ಮೊಬೈಲ್ ನೆಟ್ವರ್ಕ್ ಜಾಮರ್​ನಿಂದ ಶಿಕ್ಷೆ ಅನುಭವಿಸುವಂತಾಗಿರುವುದು ಮಾತ್ರ ವಿಪರ್ಯಾಸ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!