AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ತರಬನಹಳ್ಳಿಯಲ್ಲಿ ಕಸ ವಿಲೇವಾರಿ ಘಟಕ ವಿರೋಧಿಸಿ ಪ್ರತಿಭಟನೆ; ಕೆಲಸ ನಿಲ್ಲಿಸದಿದ್ದರೆ ಒಂದು ಲಕ್ಷ ಜನರೊಂದಿಗೆ ಧರಣಿ ನಡೆಸುವ ಎಚ್ಚರಿಕೆ

ಕಸ ಘಟಕ ಅರಂಭಿಸಿದ್ರೆ ದುರ್ನಾಥ, ಸಾಂಕ್ರಾಮಿಕ ರೋಗ ಬರುತ್ತೆ. ಹಾಗಾಗಿ ಸ್ಥಳೀಯರು ಕಸ ವಿಲೇವಾರಿ ಘಟಕ ಮಾಡಲು ಬಿಡುವುದಿಲ್ಲ. ಗ್ರಾಮಕ್ಕೆ ನೀರಿನ ಸಂಪರ್ಕ ಇಲ್ಲಿಂದಲೇ ಒದಗಿಸಲಾಗಿದೆ. ಅರ್ಕಾವತಿ ನದಿ ನೀರು ವರ್ಷ ಪೂರ್ತಿ ಇಲ್ಲಿ ತುಂಬಿ ಹರಿಯುತ್ತೆ ಎಂದು ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.

ನೆಲಮಂಗಲ: ತರಬನಹಳ್ಳಿಯಲ್ಲಿ ಕಸ ವಿಲೇವಾರಿ ಘಟಕ ವಿರೋಧಿಸಿ ಪ್ರತಿಭಟನೆ; ಕೆಲಸ ನಿಲ್ಲಿಸದಿದ್ದರೆ ಒಂದು ಲಕ್ಷ ಜನರೊಂದಿಗೆ ಧರಣಿ ನಡೆಸುವ ಎಚ್ಚರಿಕೆ
ನೆಲಮಂಗಲ: ತರಬನಹಳ್ಳಿಯಲ್ಲಿ ಕಸ ವಿಲೇವಾರಿ ಘಟಕ ವಿರೋಧಿಸಿ ಪ್ರತಿಭಟನೆ; ಕೆಲಸ ನಿಲ್ಲಿಸದಿದ್ದರೆ ಒಂದು ಲಕ್ಷ ಜನರೊಂದಿಗೆ ಧರಣಿ ನಡೆಸುವ ಎಚ್ಚರಿಕೆ
TV9 Web
| Edited By: |

Updated on: Mar 07, 2022 | 5:56 PM

Share

ನೆಲಮಂಗಲ: ಬೆಂಗಳೂರು ಉತ್ತರ ತಾಲೂಕಿನ ತರಬನಹಳ್ಳಿ ಗ್ರಾಮದಲ್ಲಿ ಕಸ ವಿಲೇವಾರಿ ಘಟಕಕ್ಕೆ(Garbage Disposal Unit) ಸ್ಥಳೀಯ ನಿವಾಸಿಗಳ ವಿರೋಧ ವ್ಯಕ್ತವಾಗಿದೆ. ಕಸ ವಿಲೇವಾರಿ ಘಟಕದಿಂದ ಆರೋಗ್ಯ ಸಮಸ್ಯೆಗಳು ಎದುರಾಗಿವೆ ಎಂದ ತರಬನಹಳ್ಳಿ ಸುತ್ತಮುತ್ತಲಿನ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಕಸ ವಿಲೇವಾರಿ ಘಟಕ ನಿಲ್ಲಿಸಿ, ಗ್ರಾಮಸ್ಥರನ್ನ ಉಳಿಸಿರೆಂದು ಸ್ಥಳದಲ್ಲಿ ಧರಣಿ ನಡೆಸಿದ್ದಾರೆ.

ಕಸ ಘಟಕ ಅರಂಭಿಸಿದ್ರೆ ದುರ್ನಾಥ, ಸಾಂಕ್ರಾಮಿಕ ರೋಗ ಬರುತ್ತೆ. ಹಾಗಾಗಿ ಸ್ಥಳೀಯರು ಕಸ ವಿಲೇವಾರಿ ಘಟಕ ಮಾಡಲು ಬಿಡುವುದಿಲ್ಲ. ಗ್ರಾಮಕ್ಕೆ ನೀರಿನ ಸಂಪರ್ಕ ಇಲ್ಲಿಂದಲೇ ಒದಗಿಸಲಾಗಿದೆ. ಅರ್ಕಾವತಿ ನದಿ ನೀರು ವರ್ಷ ಪೂರ್ತಿ ಇಲ್ಲಿ ತುಂಬಿ ಹರಿಯುತ್ತೆ. ಅವೈಜ್ಞಾನಿಕವಾಗಿ ಶಾಸಕ ಎಸ್.ಆರ್.ವಿಶ್ವನಾಥ್ ಇಲ್ಲಿ ಘಟಕ ಸ್ಥಾಪಿಸಲು ಅನುಮತಿ ಕೊಟ್ಟಿದ್ದಾರೆ. ಸ್ಥಳೀಯ ವಾಸ್ತವ ಮಾಹಿತಿ ಬಚ್ಚಿಟ್ಟು ಡಿಪಿಆರ್ ಮಾಡಿದ್ದಾರೆ ಅಧಿಕಾರಿಗಳು ಎಂದು ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.

ಜಿಲ್ಲಾಧಿಕಾರಿ ಹಾಗೂ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಕೊಟ್ರು ಪ್ರಯೋಜನ ಆಗಿಲ್ಲ. ನಾವು ಪ್ರತಿಭಟನೆಗೆ ಬಂದ ಕೂಡಲೇ ಕೆಲಸಗಾರರು ಜೆಸಿಬಿ ಸಮೇತವಾಗಿ ಓಡುತ್ತಿದ್ದಾರೆ. ಶಾಸಕರು ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಗಿದಿದೆ ಅಂತಿದ್ದಾರೆ. ಕೂಡಲೇ ಕಾಮಗಾರಿ ನಿಲ್ಲಿಸದಿದ್ದರೆ ಒಂದು ಲಕ್ಷ ಜನ ಸೇರಿ ಪ್ರತಿಭಟನೆ ಮಾಡುತ್ತೇವೆ ಎಂದು ಸ್ಥಳೀಯರು ಎಚ್ಚರಿಕೆ ಕೊಟ್ಟಿದ್ದಾರೆ.

ಇದನ್ನೂ ಓದಿ: Watch: ಸ್ಥಳಾಂತರಿಸುವ ಮುನ್ನ ಉಕ್ರೇನ್​​ನಲ್ಲಿ ಗಾಯಗೊಂಡ ಭಾರತೀಯ ವಿದ್ಯಾರ್ಥಿಗೆ ಸಚಿವ ವಿಕೆ ಸಿಂಗ್ ಭರವಸೆ

ಎರಡನೇ ಕೇಸಿನಲ್ಲಿಯೂ ಜಾಮೀನು ಮಂಜೂರು, ವಕೀಲ ಜಗದೀಶ್ ಜೈಲಿನಿಂದ ಶೀಘ್ರದಲ್ಲೇ ಬಿಡುಗಡೆ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್