AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಬಸ್ ಪೇಟೆ: ಫ್ಲೈ ಓವರ್ ಮೇಲೆ ಸಂಚರಿಸುವ ಕೆಎಸ್ಆರ್​ಟಿಸಿ ಬಸ್​ಗಳ ವಿರುದ್ಧ ಸ್ಥಳೀಯರ ಪ್ರತಿಭಟನೆ

ಫ್ಲೈ ಓವರ್ ಕೆಳಗೆ ಸಂಚಾರ ಮಾಡುವಂತೆ ಸಾರಿಗೆ ಇಲಾಖೆ ಅದೇಶವಿದ್ದರೂ ಅದನ್ನು ಗಣನೆಗೆ ತೆಗೆದುಕೊಳ್ಳದ ಬಸ್ ಚಾಲಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು, ರಸ್ತೆಯಲ್ಲಿ ಚಲಿಸುತ್ತಿರುವ ಕೆಎಸ್ಆರ್​ಟಿಸಿ ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ.

ದಾಬಸ್ ಪೇಟೆ: ಫ್ಲೈ ಓವರ್ ಮೇಲೆ ಸಂಚರಿಸುವ ಕೆಎಸ್ಆರ್​ಟಿಸಿ ಬಸ್​ಗಳ ವಿರುದ್ಧ ಸ್ಥಳೀಯರ ಪ್ರತಿಭಟನೆ
ಸ್ಥಳೀಯರ ಪ್ರತಿಭಟನೆ
TV9 Web
| Edited By: |

Updated on:Aug 31, 2021 | 11:18 AM

Share

ಬೆಂಗಳೂರು: ಫ್ಲೈಓವರ್ ಮೇಲೆ ಸಂಚರಿಸುವ ಕೆಎಸ್ಆರ್​ಟಿಸಿ ಬಸ್​ಗಳ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸಿದ ಘಟನೆ ಬೆಂಗಳೂರಿನ ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ದಾಬಸ್‌ ಪೇಟೆಯಲ್ಲಿ ನಡೆದಿದೆ. ಫ್ಲೈಓವರ್ ಮೇಲೆ ಸಂಚರಿಸುವ ಬಸ್​ಗಳು, ವಿದ್ಯಾರ್ಥಿಗಳು ಸೇರಿದಂತೆ ಇತರರಿಗೆ ದಾಬಸ್ ಪೇಟೆಯಲ್ಲಿ ನಿಲ್ಲಿಸದೆ ಹಾಗೆಯೇ ಹೋಗುತ್ತಿದ್ದವು. ಇದರಿಂದ ಸಾರ್ವಜನಿಕರು ಪ್ರತಿದಿನ ಸಂಕಷ್ಟ ಎದುರಿಸುವಂತಾಗಿದೆ. ಈ ಬಗ್ಗೆ ಸಾಕಷ್ಟು ಬಾರಿ ದೂರು ನೀಡಿದರೂ ಯಾವುದೇ ಪ್ರಯೋಜನವಾಗದ ಕಾರಣ ಸ್ಥಳೀಯರು ಇಂದು ಪ್ರತಿಭಟನೆಗೆ ಮುಂದಾಗಿದ್ದಾರೆ.

ಫ್ಲೈ ಓವರ್ ಕೆಳಗೆ ಸಂಚಾರ ಮಾಡುವಂತೆ ಸಾರಿಗೆ ಇಲಾಖೆ ಅದೇಶವಿದ್ದರೂ ಅದನ್ನು ಗಣನೆಗೆ ತೆಗೆದುಕೊಳ್ಳದ ಬಸ್ ಚಾಲಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು, ರಸ್ತೆಯಲ್ಲಿ ಚಲಿಸುತ್ತಿರುವ ಕೆಎಸ್ಆರ್​ಟಿಸಿ ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ. ಸ್ಥಳೀಯರೊಂದಿಗೆ ಬಿಜೆಪಿ ಕಾರ್ಯಕರ್ತರೂ ಸೇರಿ ಪ್ರತಿಭಟನೆ ನಡೆಸಿದ್ದಾರೆ. ಹೀಗಾಗಿ ಬೆಂಗಳೂರಿಗೆ ಬರುತ್ತಿರುವ ಬಸ್ ಸಂಚಾರದಲ್ಲಿ ಇಂದು ವ್ಯತ್ಯಯ ಕಂಡುಬಂದಿದೆ.

ಬಾಗಲಕೋಟೆ: ಬಾರ್ ಅಂಡ್ ರೆಸ್ಟೊರೆಂಟ್ ಸ್ಥಳಾಂತರಕ್ಕೆ ಆಗ್ರಹ ಬಾರ್ ಅಂಡ್ ರೆಸ್ಟೊರೆಂಟ್ ಸ್ಥಳಾಂತರಕ್ಕೆ ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಚನಾಳ ಗ್ರಾಮದಲ್ಲಿ ಕಳೆದ ಎಂಟು ದಿನಗಳಿಂದ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಚನಾಳ ಗ್ರಾಮದ ಬಳಿಯ ಕಿಂಗ್ಸ್ ಬಾರ್ ಸ್ಥಳಾಂತರಕ್ಕೆ ಒತ್ತಾಯಿಸಿ ಮಹಿಳೆಯರು ಬಾರ್ ಎದುರಿಗೆ ಅಡುಗೆ ಮಾಡಿ, ಉಪಹಾರ ಸೇವಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಬಾರ್​ನಿಂದ ಗ್ರಾಮದ ಯುವಕರು ಹಾಳಾಗುತ್ತಿದ್ದಾರೆ. ಮನೆಯಲ್ಲಿ ನಿತ್ಯವೂ ಜಗಳ ಶುರುವಾಗಿದೆ‌. ಮನೆಯಲ್ಲಿನ ವಸ್ತುಗಳನ್ನು ಕುಡಿಯುವುದಕ್ಕಾಗಿಯೇ ಮಾರಾಟ ಮಾಡುತ್ತಿದ್ದಾರೆ. ನಮ್ಮ ಸಂಸಾರ ಬೀದಿಗೆ ಬರುತ್ತಿದೆ. ಹೀಗಾಗಿ ಬಾರ್ ಸ್ಥಳಾಂತರ ಮಾಡಿ. ಬಾರ್ ಸ್ಥಳಾಂತರ ಮಾಡುವವರೆಗೂ ಜಾಗ ಬಿಟ್ಟು ಕದಲುವುದಿಲ್ಲ ಎಂದು ಪ್ರತಿಭಟನಾನೀರತ ಮಹಿಳೆಯರು ತಿಳಿಸಿದ್ದಾರೆ.

ಇದನ್ನೂ ಓದಿ: ನೂತನ ಶಿಕ್ಷಣ ಪದ್ಧತಿಯಲ್ಲಿ ಮೌಢ್ಯತೆ ತುಂಬಿದೆ, ವರ್ಣಾಶ್ರಮ ಮತ್ತೆ ಬರಲಿದೆ; ಮಂಗಳೂರು ವಿವಿ ಬಳಿ ಸಿಎಫ್​ಐ ಪ್ರತಿಭಟನೆ

ಬಾಗಲಕೋಟೆ: ಬಾರ್ ಅಂಡ್ ರೆಸ್ಟೊರೆಂಟ್ ಸ್ಥಳಾಂತರಕ್ಕೆ ಆಗ್ರಹ; ಎಂಟನೇ ದಿನಕ್ಕೆ ಕಾಲಿಟ್ಟ ಮಹಿಳೆಯರ ಪ್ರತಿಭಟನೆ

Published On - 11:17 am, Tue, 31 August 21

ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ