AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀಟಿ ಹೆಸರಲ್ಲಿ ಉಂಡೆನಾಮ; ಲಕ್ಷ ಲಕ್ಷ ಹಣ ಕಟ್ಟಿಸಿಕೊಂಡು ಪರಾರಿಯಾದ ಕುಟುಂಬ, ಬೀದಿಗೆ ಬಂದ ಜನರಿಂದ ಪ್ರತಿಭಟನೆ

ಹೊಸಕೋಟೆಯಲ್ಲಿ ಕಳೆದ ಹಲವು ವರ್ಷಗಳಿಂದ ಶಿವಕುಮಾರ್ ಎಂಬುವವರು ಚೀಟಿ ನಡೆಸುತ್ತಿದ್ದರು. ಇವರನ್ನು ನಂಬಿ ನೂರಾರು ಜನ ಚೀಟಿ ಹಾಕಿದ್ದಾರೆ. ಆದ್ರೆ ಕಳೆದ ಆಗಸ್ಟ್ ನಲ್ಲಿ ಅನಾರೋಗ್ಯದಿಂದ ಶಿವಕುಮಾರ್ ಸಾವನ್ನಪ್ಪಿದ್ರು.

ಚೀಟಿ ಹೆಸರಲ್ಲಿ ಉಂಡೆನಾಮ; ಲಕ್ಷ ಲಕ್ಷ ಹಣ ಕಟ್ಟಿಸಿಕೊಂಡು ಪರಾರಿಯಾದ ಕುಟುಂಬ, ಬೀದಿಗೆ ಬಂದ ಜನರಿಂದ ಪ್ರತಿಭಟನೆ
ಶಿವಕುಮಾರ್ ಕುಟುಂಬ
TV9 Web
| Edited By: |

Updated on:Nov 25, 2021 | 1:01 PM

Share

ದೇವನಹಳ್ಳಿ: ಚೀಟಿ ಹೆಸರಲ್ಲಿ ಬಡ ಜನರಿಗೆ ಉಂಡೆನಾಮ ಹಾಕಲಾಗಿದೆ. ಲಕ್ಷ ಲಕ್ಷ ಹಣ ಕಟ್ಟಿಸಿಕೊಂಡು ವಂಚನೆ ಮಾಡಲಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ನಡೆದಿದೆ.

ಹೊಸಕೋಟೆಯಲ್ಲಿ ಕಳೆದ ಹಲವು ವರ್ಷಗಳಿಂದ ಶಿವಕುಮಾರ್ ಎಂಬುವವರು ಚೀಟಿ ನಡೆಸುತ್ತಿದ್ದರು. ಇವರನ್ನು ನಂಬಿ ನೂರಾರು ಜನ ಚೀಟಿ ಹಾಕಿದ್ದಾರೆ. ಆದ್ರೆ ಕಳೆದ ಆಗಸ್ಟ್ ನಲ್ಲಿ ಅನಾರೋಗ್ಯದಿಂದ ಶಿವಕುಮಾರ್ ಸಾವನ್ನಪ್ಪಿದ್ರು. ಇದಾದ ಬಳಿಕ ಇದೀಗ ಹಣದೊಂದಿಗೆ ಕುಟುಂಬಸ್ಥರು ಪರಾರಿಯಾಗಿದ್ದಾರೆ ಎಂದು ಆರೋಪಿಸಿ ಜನ ಪ್ರತಿಭಟನೆ ನಡೆಸುತ್ತಿದ್ದಾರೆ. ಕೂಲಿ ಮಾಡಿ ಕೂಡಿಟ್ಟಿದ್ದ ಹಣ ಕಳೆದುಕೊಂಡ ಜನರು ಕೆಇಬಿ ಕಪ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

Protest

ಚೀಟಿ ಹೆಸರಲ್ಲಿ ಬಡ ಜನರಿಗೆ ಉಂಡೆನಾಮ; ಲಕ್ಷ ಲಕ್ಷ ಹಣ ಕಟ್ಟಿಸಿಕೊಂಡು ಪರಾರಿಯಾದ ಕುಟುಂಬ, ಬೀದಿಯಲ್ಲಿ ಕುಳಿತು ಜನರಿಂದ ಪ್ರತಿಭಟನೆ

ಕೂಲಿ ಮಾಡಿ‌ ಹೂ ಮಾರಿ ಹಣ ಕಟಿದ್ದೀವಿ, ಮಗಳ ಮದುವೆ ಮತ್ತು ವಿದ್ಯಾಭ್ಯಾಸಕ್ಕಾಗಿ ಹಣ ಕೂಡಿಟ್ಟಿದ್ವಿ ಆದ್ರೆ ಇದೀಗ ಮೋಸ ಮಾಡಿ ಹಣದೊಂದಿಗೆ ಎಸ್ಕೇಪ್ ಆಗಿದ್ದಾರೆ. ನಮಗೆ ನ್ಯಾಯ ಕೊಡಿಸಿ ಚೀಟಿ ನಡೆಸಿ ಮುನ್ನೂರಕ್ಕೂ ಅಧಿಕ ಜನರಿಗೆ ವಂಚನೆ ಮಾಡಲಾಗಿದೆ. ಪರಾರಿಯಾಗಿರೂ ಕುಟುಂಬಸ್ಥರಿಂದ ಹಣ ಕೊಡಿಸಿ ಅಂತಾ ನೊಂದ ಮಹಿಳೆಯರು ಕಣ್ಣೀರು ಹಾಕುತ್ತ ರಸ್ತೆಯಲ್ಲಿ ಕುಳಿತು ಧರಣಿ ನಡೆಸುತ್ತಿದ್ದಾರೆ. 80 ಕ್ಕೂ ಅಧಿಕ ಜನರು ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಚೀಟಿ ಅವ್ಯವಹಾರದಲ್ಲಿ ಭಾಗಿಯಾಗಿದ್ದ ದಂಪತಿಯಿಂದ ಮನೆ ಖರೀದಿ; ಸೈನಿಕನ ವಿರುದ್ಧ ದೂರು ದಾಖಲು

Published On - 12:43 pm, Thu, 25 November 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ