AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಲಿನಿಂದ ಕೆಂಗೆಟ್ಟು ಹಣ್ಣು, ಜ್ಯೂಸ್​ಗಳ ಕಡೆ ಮುಖ ಮಾಡಿದ ಜನ; ದುಬಾರಿಯಾದ ದರ

ಈ ವರ್ಷ ರಣ ಬಿಸಿಲಿನ ತಾಪಮಾನಕ್ಕೆ ರಾಜ್ಯದೆಲ್ಲೆಡೆ ಜನ ತತ್ತರಿಸಿ ಹೋಗಿದ್ದಾರೆ. ಇತ್ತ ಸಿಲಿಕಾನ್ ಸಿಟಿ ಹೊರವಲಯದಲ್ಲೂ ಬಿಸಿಲಿನ ದಗೆಗೆ ಮನೆಯಿಂದ ಹೊರಗೆ ಬರಲು ಕೂಡ ಜನ ಹೆದರುವಂತಾಗಿದೆ. ಈ ವರ್ಷ ಗರಿಷ್ಠ ಬಿಸಿಲಿನ ತಾಪಮಾನ ದಾಖಲಾಗುತ್ತಿದ್ದು, ಜನ ತಮ್ಮ ದಣಿವನ್ನ ನಿವಾರಿಸಿಕೊಳ್ಳಲು ಹಣ್ಣು ಹಾಗೂ ಜ್ಯೂಸ್​ಗಳ ಕಡೆ ಮುಖ ಮಾಡಿದ್ದಾರೆ. ಆದ್ರೆ, ಹಣ್ಣು ಜ್ಯೂಸ್​ಗಳ ದರ ಜನರಿಗೆ ಶಾಕ್ ನೀಡಿದೆ.

ಬಿಸಿಲಿನಿಂದ ಕೆಂಗೆಟ್ಟು ಹಣ್ಣು, ಜ್ಯೂಸ್​ಗಳ ಕಡೆ ಮುಖ ಮಾಡಿದ ಜನ; ದುಬಾರಿಯಾದ ದರ
ಹಣ್ಣು, ಜ್ಯೂಸ್​ಗಳ ಕಡೆ ಮುಖ ಮಾಡಿದ ಜನ; ದುಬಾರಿಯಾದ ದರ
ನವೀನ್ ಕುಮಾರ್ ಟಿ
| Edited By: |

Updated on:Apr 09, 2024 | 9:33 PM

Share

ಬೆಂಗಳೂರು ಗ್ರಾಮಾಂತರ, ಏ.09: ಜಿಲ್ಲೆಯ ದೇವನಹಳ್ಳಿಯಲ್ಲಿ(Devanahalli) ಈ ವರ್ಷ ಗರಿಷ್ಠ 38 ಸೆಲ್ಸಿಯಸ್​ನಷ್ಟು ಬಿಸಲಿನ ತಾಪಮಾನ ದಾಖಲಾಗಿದ್ದು, ಜನ ಬಿಸಿಲಿಗೆ ಹೈರಾಣಾಗಿ ಹೋಗಿದ್ದಾರೆ. ಜನರು ತಮ್ಮ ದಣಿವಾರಿಸಿಕೊಳ್ಳಲು ಈಗ ಹಣ್ಣು ಮತ್ತು ಜ್ಯೂಸ್​ಗಳ ಕಡೆ ಮುಖ ಮಾಡಿದ್ದಾರೆ. ಬಿಸಿಲಿಗೆ ಮೈ ತಂಪೆರಿಸುವ ಕಲ್ಲಂಗಡಿ, ಪಪಾಯ, ಕರ್ಬುಜಾ ಸೇರಿದಂತೆ ಇನ್ನಿತರ ಹಣ್ಣುಗಳ ಖರೀದಿ ಹೆಚ್ಚು ಜೋರಾಗಿ ನಡೆಯುತ್ತಿದೆ. ಆದರೆ, ಬಿರು ಬಿಸಲಿಗೆ ಬೋರ್ವೆಲ್​​ಗಳಲ್ಲಿ ನೀರಿನ ಮಟ್ಟ ಕುಸಿಯುತ್ತಿದ್ದು, ಹಣ್ಣುಗಳ ಪೂರೈಕೆ ಗಿಂತ ಬೇಡಿಕೆ ಜಾಸ್ತಿ ಆಗಿದೆ. ಇದರಿಂದ ಅವುಗಳ ದರ ಕೂಡ ಸಹಜವಾಗಿ ದುಬಾರಿಯಾಗಿದ್ದು, ಜನರಿಗೆ ಶಾಕ್ ನೀಡಿದೆ.

ದರಗಳ ವಿವರ

                           ಹಿಂದಿನ ದರ                       ಇಂದಿನ ದರ

  • ಕಲ್ಲಂಗಡಿ     ಕೆಜಿಗೆ 15 ರಿಂದ 20 ರೂ.         30 ರಿಂದ 35 ರೂ
  • ಕರ್ಬೂಜ     ಕೆಜಿಗೆ 15 ರೂ.                                40 ರೂ
  • ಪಪಾಯ              15 ರೂ.                                    40 ರೂ
  • ಎಳನೀರು      30 ರಿಂದ 40 ರೂ.                        50 ರೂ

ಅಂದಹಾಗೆ ಬಿಸಲಿಗೆ ದಗೆಗೆ ಹಣ್ಣುಗಳು ನೀರಿನ ಅಭಾವದಿಂದ ಮಾರುಕಟ್ಟೆಗೆ ಬರುವ ಸರಕು ಪ್ರಮಾಣ ಕೂಡ ಕಡಿಮೆಯೇ ಇದೆ. ಆದ್ದರಿಂದ ಈಗ ಅವುಗಳ ರೇಟ್ ಕೂಡ ದುಬಾರಿಯಾಗಿದ್ದು, ಜನರು ಈ ರಣ ಬಿಸಲಿಗೆ ಛತ್ರಿ ಹಿಡಿದು ನಡೆಯುವಂತಾಗಿದೆ. ಇತ್ತ ಜನರು ದಣಿವನ್ನು ನೀಗಿಸಿಕೊಳ್ಳಲು ಅಲ್ಲಲ್ಲಿ ಇರುವ ಎಳನೀರು, ಕಬ್ಬಿನ ರಸ, ಮಜ್ಜಿಗೆ ಹಾಗೂ ಇನ್ನಿತರ ತಂಪು ಪಾನಿಯಗಳನ್ನು ಕುಡಿದು ದಣಿವರಿಸಿಕೊಳ್ಳುತ್ತಿದ್ದಾರೆ. ಹಾಗೆಯೇ ಹಣ್ಣುಗಳ ಬೆಲೆಯು ಕೂಡ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಬೆಲೆ ಮೂರು ಪಟ್ಟು ಹೆಚ್ಚಾಗಿದೆ. ಆದರೂ ಜನ ವಿಧಿ ಇಲ್ಲದೇ ತಮ್ಮ ದೇಹದ ದಣಿವರಿಸಿಕೊಳ್ಳಲು ಖರೀದಿಗೆ ಮುಗಿ ಬಿದ್ದಿದ್ದಾರೆ.

ಇದನ್ನೂ ಓದಿ:Most Expensive Fruits: ವಿಶ್ವದ ಅತ್ಯಂತ ದುಬಾರಿ ಹಣ್ಣುಗಳು ಇಲ್ಲಿದೆ 

ಒಂದು ಕಡೆ ಬೆಲೆ ಇದ್ದರೂ, ಹಣ್ಣುಗಳ ಪೂರೈಕೆ ಕಡಿಮೆ ಇದ್ದು, ವರುಣನ ಆಗಮನದ ನೀರಿಕ್ಷೆಯಲ್ಲಿ ಜನ ಇದ್ದಾರೆ. ಒಟ್ಟಾರೆ ಮನೆಯಿಂದ ಹೊರಗಡೆ ಬರಲು ಜನ ಈ ರಣ ಬಿಸಲಿಗೆ ತತ್ತರಿಸಿ ಹೋಗಿದ್ದಾರೆ. ಬಿಸಲಿನ ತಾಪಮಾನವನ್ನ ಧಣಿವರಿಸಿಕೊಳ್ಳಲು ಹಣ್ಣು, ಜ್ಯೂಸ್ ರೇಟ್ ಹೆಚ್ಚಾಗಿದ್ದರೂ ವಿಧಿಯಿಲ್ಲದೆ ಖರೀದಿ ಮಾಡಿಕೊಳ್ತಿದ್ದಾರೆ. ಆದ್ರೆ, ಆದಷ್ಟು ಬೇಗ ವರುಣ ಕೃಪೆ ತೋರಿ, ಬೇಗ ಮಳೆ ಬಂದು ವಾತಾವರಣ ತಂಪಾಗಲಿ ಎಂದು ದೇವರನ್ನ ಪ್ರಾರ್ಥಿಸುತ್ತಿರುವುದಂತೂ ಸುಳ್ಳಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:30 pm, Tue, 9 April 24

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ