AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಆಕಸ್ಮಿಕ ಬೆಂಕಿ; ಕಿಡಿಗೇಡಿಗಳು ಕೃತ್ಯ ಎಸಗಿರುವ ಶಂಕೆ

ನೆಲಮಂಗಲದ ಪೇಟೆ ಬೀದಿಯ ಹಿಪ್ಪೇ ಆಂಜನೇಯ ಬಡಾವಣೆಯ ನಂದೀಶ್ ಅವರಿಗೆ ಸೇರಿದ ಮಹೀಂದ್ರ ಎಕ್ಸ್ ಯುವಿ 500 ಕಾರಿಗೆ ಬೆಂಕಿ ತಗುಲಿದೆ. ಸದ್ಯ ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿಗಳಿಂದ ಬೆಂಕಿ ನಂದಿಸುವ ಕಾರ್ಯ ಯಶಸ್ವಿಯಾಗಿದೆ.

ನೆಲಮಂಗಲ: ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಆಕಸ್ಮಿಕ ಬೆಂಕಿ; ಕಿಡಿಗೇಡಿಗಳು ಕೃತ್ಯ ಎಸಗಿರುವ ಶಂಕೆ
ಬೆಂಕಿಗಾಹುತಿಯಾದ ಕಾರು
TV9 Web
| Edited By: |

Updated on:Nov 30, 2021 | 2:58 PM

Share

ನೆಲಮಂಗಲ: ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಆಕಸ್ಮಿಕ ಬೆಂಕಿ (Fire accident) ತಗುಲಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದಲ್ಲಿ ನಡೆದಿದೆ. ನೆಲಮಂಗಲದ ಪೇಟೆ ಬೀದಿಯ ಹಿಪ್ಪೇ ಆಂಜನೇಯ ಬಡಾವಣೆಯ ನಂದೀಶ್ ಅವರಿಗೆ ಸೇರಿದ ಮಹೀಂದ್ರ ಎಕ್ಸ್ ಯುವಿ 500 ಕಾರಿಗೆ ಬೆಂಕಿ ತಗುಲಿದೆ. ಸದ್ಯ ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿಗಳಿಂದ ಬೆಂಕಿ ನಂದಿಸುವ ಕಾರ್ಯ ಯಶಸ್ವಿಯಾಗಿದೆ. ಯಾರೋ ಕಿಡಿಗೇಡಿಗಳೇ ಬೇಕಂತಲೇ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದ್ದು, ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಕೋಲಾರ: ಚಾಕುವಿನಿಂದ ಸೊಸೆ ಮೇಲೆ ಅತ್ತೆ, ಮಾವನಿಂದ ಹಲ್ಲೆ ಸೋಸೆ ಮೇಲೆ ಅತ್ತೆ, ಮಾವ ಚಾಕಿವಿನಿಂದ ಹಲ್ಲೆ ಮಾಡಿದ ಘಟನೆ ಕೋಲಾರ ಜಿಲ್ಲೆಯ ರಾಜಾ ನಗರದಲ್ಲಿ ನಡೆದಿದೆ. ಅರಬಿಂದ್ ಸುಲ್ತಾನ್ ಚಾಕುವಿನಿಂದ ತೀವ್ರ ಗಾಯಗೊಂಡ ಮಹಿಳೆ. ಮಾವ ನವಾಜ್ ಬೇಗ್ ಮತ್ತು ಅತ್ತೆ ನಪ್ಸಿನ್ ತಾಜ್ ಸೇರಿ ಸಂಬಂಧಿಗಳು ಹಲ್ಲೆ ಮಾಡಿದ್ದಾರೆ ಎಂದು ಸೋಸೆ ಆರೋಪ ಮಾಡಿದ್ದಾರೆ. ಅರಬಿಂದ್ ಸುಲ್ತಾನ್ ಮತ್ತು ಮುಕ್ತಿಯಾರ್ ಬೇಗ್ ಅವರು ಪ್ರೀತಿಸಿ ಮದುವೆಯಾಗಿದ್ದರು. ಮದುವೆಯನ್ನು ಸಹಿಸದೆ ಪ್ರತಿದಿನ ಅತ್ತೆ ಮಾವ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.

ಡಿ.26 ರಂದು ಸೊಸೆಯ ಮೇಲೆ ಮಾವ ಮತ್ತು ಅತ್ತೆ ಕುಟುಂಬದಿಂದ‌ ಹಲ್ಲೆ‌ ನಡೆದಿದ್ದು, ಕೋಲಾರದ‌ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸದ್ಯ ಜಿಲ್ಲಾಸ್ಪತ್ರೆಯಲ್ಲಿ ಅರಬಿಂದ್ ಸುಲ್ತಾನ್ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು: ಬೈಕ್ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್ ಜೆಜೆ ನಗರ ಪೊಲೀಸರು ನಗರದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಆರು ಜನರು ಸೇರಿ ಗುಂಪು ಕಟ್ಟಿಕೊಂಡು ಬೈಕ್ ಕಳ್ಳತನ ಮಾಡುತ್ತಿದ್ದರು. ಸದ್ಯ ಅರೋಪಿಗಳ ಬಳಿಯಿದ್ದ ಒಟ್ಟು ಹದಿನೆಂಟು ಬೈಕ್ ಹಾಗೂ ಹತ್ತು ಲಕ್ಷದ ಐವತ್ತು ಸಾವಿರ ಮೌಲ್ಯದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ರಾತ್ರಿ ಸಮಯದಲ್ಲಿ ಹಾಗೂ ಹಗಲು ಸಮಯದಲ್ಲಿ ಬೈಟ್ ಕಳ್ಳತನ ಮಾಡುತ್ತಿದ್ದ ಆರೋಪಿಗಳಾದ ಮಹಮದ್ ಅರ್ಬಾಜ್, ಸೈಯದ್ ಹಯಾತ್,ಮಹಮದ್ ಜೈನ್, ಮುಬಾರಕ್ ಪಾಷ, ವರೂಣ್ ಕುಮಾರ್, ಶಾಹಬಾಜ್ ಬಂಧಿಸಲಾಗಿದೆ.

ಇದನ್ನೂ ಓದಿ: ಐಷಾರಾಮಿ ಕಾರಿಗೆ ಬೆಂಕಿ ಹಚ್ಚಿರುವ ಕಿಡಿಗೇಡಿಗಳು; ಬೆಂಕಿ ಇಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ದಾವಣಗೆರೆಯಲ್ಲಿ ಮೊಬೈಲ್ ಟವರ್ ಜನರೇಟರ್​ಗೆ ಆಕಸ್ಮಿಕ ಬೆಂಕಿ! ಭಾರಿ ಪ್ರಮಾಣದಲ್ಲಿ ಆವರಿಸಿದ ಹೊಗೆ

Published On - 2:40 pm, Tue, 30 November 21

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್