AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಲ್ಲಿ ಬಂದು ಲೂಟಿ ಮಾಡುತ್ತಿದ್ದ ಕುಖ್ಯಾತ ಮನೆಗಳ್ಳ ಕಳ್​ ಮಂಜ ಅರೆಸ್ಟ್​; 5 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಆಭರಣ ವಶಕ್ಕೆ

ಆಗಸ್ಟ್ 5ರಂದು ವಕೀಲರಿಗೆ ಹಣ ಕೊಡಲು ಬೆಂಗಳೂರು ಉತ್ತರ ತಾಲ್ಲೂಕಿನ ಗೋವಿಂದಪುರ ಗ್ರಾಮದ ಗಂಗಮ್ಮ ಅವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮಂಜುನಾಥ ಅದರಿಂದಲೇ ಶುಲ್ಕ ಕಟ್ಟಿದ್ದ.  5 ಲಕ್ಷ ರೂಪಾಯಿಗೂ ಹೆಚ್ಚು ಬೆಲೆಬಾಳುವ ಚಿನ್ನಾಭರಣಗಳನ್ನ ಕದ್ದಿದ್ದ ಖದೀಮ ಮಂಜುನಾಥನ ಕೃತ್ಯ ಮನೆಯ ಸಮೀಪದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಕಾರಲ್ಲಿ ಬಂದು ಲೂಟಿ ಮಾಡುತ್ತಿದ್ದ ಕುಖ್ಯಾತ ಮನೆಗಳ್ಳ ಕಳ್​ ಮಂಜ ಅರೆಸ್ಟ್​; 5 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಆಭರಣ ವಶಕ್ಕೆ
ಮಾದನಾಯಕನಹಳ್ಳಿ ಪೊಲೀಸ್​ ಠಾಣೆ
Follow us
TV9 Web
| Updated By: Skanda

Updated on: Aug 28, 2021 | 10:42 AM

ನೆಲಮಂಗಲ: ಕಾರಿನಲ್ಲಿ ಬಂದು ಮನೆಗಳ್ಳತನ ಮಾಡುತ್ತಿದ್ದ ಕುಖ್ಯಾತ ಮನೆಗಳ್ಳ ಮಂಜುನಾಥ್ ಅಲಿಯಾಸ್​​ ಕಳ್ ಮಂಜ (35) ಎಂಬಾತನನ್ನು ಮಾದನಾಯಕನಹಳ್ಳಿ ಪೊಲೀಸರು ಸಿನಿಮೀಯ ರೀತಿಯಲ್ಲಿ ಬಂಧಿಸಿದ್ದಾರೆ. ತುಮಕೂರು ಮೂಲದ ಮಂಜುನಾಥ್ 10ಕ್ಕೂ ಹೆಚ್ಚು ಮನೆಗಳ್ಳತನ ಮಾಡಿದ ಅರೋಪ ಎದುರಿಸುತ್ತಿದ್ದು, ಕಳ್ಳತನಕ್ಕಿಳಿಯುವಾಗ ಮೊಬೈಲ್ ಫೋನ್ ಬಳಸದೇ, ಯಾವುದೇ ಸುಳಿವು ಬಿಟ್ಟುಕೊಡದೇ ಪೊಲೀಸರಿಗೆ ತಲೆನೋವಾಗಿದ್ದ. ಬೆಂಗಳೂರಿನ ಅಂದ್ರಹಳ್ಳಿಯಲ್ಲಿ ವಾಸವಿದ್ದ ಮಂಜುನಾಥ್ ಅಲಿಯಾಸ್ ಕಳ್ ಮಂಜ ತಾನು ಕದ್ದ ಚಿನ್ನವನ್ನ ಇಬ್ಬರು ಪತ್ನಿಯರ ಕಡೆಯಿಂದ ಗಿರಿವಿ ಇಡಿಸುತ್ತಿದ್ದ ಎಂದು ತಿಳಿದುಬಂದಿದೆ. ಈ ಚಾಲಾಕಿ ಕಳ್ಳ ಆಗಸ್ಟ್ 5ರಂದು ವಕೀಲರಿಗೆ ಹಣ ಕೊಡಲೆಂದು ಕಳ್ಳತನ ಮಾಡಲು ಹೋಗಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅದನ್ನು ಆಧರಿಸಿ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಮಾದನಾಯಕನಹಳ್ಳಿ ಪೊಲೀಸರು ಸಿನಿಮೀಯ ರೀತಿಯಲ್ಲಿ ಮಂಜುನಾಥನನ್ನು ಬಂಧಿಸಿದ್ದು, ಈ ಕಾರ್ಯಾಚರಣೆಗೆ ಸಿಸಿಟಿವಿ ಸಹಕಾರಿಯಾಗಿದೆ. ಆಗಸ್ಟ್ 5ರಂದು ವಕೀಲರಿಗೆ ಹಣ ಕೊಡಲು ಬೆಂಗಳೂರು ಉತ್ತರ ತಾಲ್ಲೂಕಿನ ಗೋವಿಂದಪುರ ಗ್ರಾಮದ ಗಂಗಮ್ಮ ಅವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮಂಜುನಾಥ ಅದರಿಂದಲೇ ಶುಲ್ಕ ಕಟ್ಟಿದ್ದ.  5 ಲಕ್ಷ ರೂಪಾಯಿಗೂ ಹೆಚ್ಚು ಬೆಲೆಬಾಳುವ ಚಿನ್ನಾಭರಣಗಳನ್ನ ಕದ್ದಿದ್ದ ಖದೀಮ ಮಂಜುನಾಥನ ಕೃತ್ಯ ಮನೆಯ ಸಮೀಪದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಕಾರಿನೊಂದಿಗೆ ಆತನ ದೃಶ್ಯವೂ ಸೆರೆಯಾಗಿದ್ದರಿಂದ ಪೊಲೀಸರು ಅದರ ಜಾಡು ಹಿಡಿದು ಹೊರಟಿದ್ದಾರೆ.

ಸಿಸಿ ಕ್ಯಾಮೆರಾದ ದೃಶ್ಯ ಆಧರಿಸಿ ತನಿಖೆ ನಡೆಸುವಾಗ ಮಂಜುನಾಥ್ ಅಲಿಯಾಸ್​ ಕಳ್ ಮಂಜ ಅಂಧ್ರಹಳ್ಳಿಯ ಚಿಕನ್ ಅಂಗಡಿ ಬಳಿ ಸೆರೆಯಾಗಿದ್ದಾನೆ. ಆತನಿಂದ ಸುಮಾರು 5 ಲಕ್ಷ ರೂಪಾಯಿ ಬೆಲೆಬಾಳುವ 160ಗ್ರಾಂ ಚಿನ್ನಾಭರಣಗಳನ್ನು ಜಪ್ತಿ ಮಾಡಲಾಗಿದ್ದು, ಪೊಲೀಸರಿಗೆ ತಲೆನೋವಾಗಿ ಕಾಡಿದ್ದವನು ಕೊನೆಗೂ ಮಾದನಾಯಕನಹಳ್ಳಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಕಾರಿನಲ್ಲೇ ಹೋಗಿ ಕಳ್ಳತನ ಮಾಡುತ್ತಿದ್ದ ಈತ ಕಳ್ಳತನಕ್ಕಿಳಿಯುವಾಗ ಮೊಬೈಲ್ ಫೋನ್ ಬಳಸುತ್ತಿರಲಿಲ್ಲ, ಯಾವುದೇ ಸುಳಿವು ಬಿಟ್ಟು ಕೊಡುತ್ತಿರಲಿಲ್ಲ ಹಾಗೂ ಕದ್ದ ಚಿನ್ನವನ್ನ ಇಬ್ಬರು ಪತ್ನಿಯರ ಕಡೆಯಿಂದ ಗಿರಿವಿ ಇಡುತ್ತಿದ್ದ ಎನ್ನುವ ಅಂಶವೂ ಗಮನಾರ್ಹವಾಗಿದ್ದು, 10ಕ್ಕೂ ಹೆಚ್ಚು ಮನೆಗಳ್ಳತನ ಮಾಡಿದ ಅರೋಪ ಈತನ ಮೇಲಿರುವುದರಿಂದ ತನಿಖೆ ಮುಂದುವರೆದಿದೆ.

ಇದನ್ನೂ ಓದಿ: ಮೈಸೂರು: ತಮ್ಮನ್ನು ಹಿಡಿಯಲು ಬರುತ್ತಿದ್ದಾನೆ ಎಂದು ಭಾವಿಸಿ ಅಮಾಯಕ ಹುಡುಗನಿಗೆ ಗುಂಡು ಹೊಡೆದು ಕೊಂದ ಕಳ್ಳರು 

ಮುತ್ತೂಟ್ ಫೈನಾನ್ಸ್‌ನಲ್ಲಿ ಕಳ್ಳತನ ಮಾಡಿ ಪರಾರಿಯಾಗಲು ಯತ್ನಿಸಿದ ಗಾರ್ಡ್ಸ್ ಅರೆಸ್ಟ್, 4 ಕೋಟಿ ಮೌಲ್ಯದ ಚಿನ್ನಾಭರಣ ಜಪ್ತಿ

(Police arrest house robber named Kalmanja in Nelamangala)

Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?