ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಪೋಲಿಸ್ ಹೆಡ್ ಕಾನ್‌ಸ್ಟೇಬಲ್ ಸ್ಥಳದಲ್ಲೇ ಸಾವು!

ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾగి ಪೋಲಿಸ್ ಹೆಡ್ ಕಾನ್‌ಸ್ಟೇಬಲ್ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಬೆಂಗಳೂರು- ಹಾಸನ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ನಡೆದಿದೆ. ಕರ್ತವ್ಯ ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಪೋಲಿಸ್ ಹೆಡ್ ಕಾನ್‌ಸ್ಟೇಬಲ್ ಸ್ಥಳದಲ್ಲೇ ಸಾವು!
ಶ್ರೀನಿವಾಸ್ , ಮೃತ ಪೋಲಿಸ್ ಹೆಡ್ ಕಾನ್‌ಸ್ಟೇಬಲ್
Edited By:

Updated on: Oct 06, 2023 | 3:03 PM

ಬೆಂಗಳೂರು (ಅಕ್ಟೋಬರ್.06): ಎರಡು ಬೈಕ್‌ಗಳ (Buke) ನಡುವೆ ಮುಖಾಮುಖಿ ಡಿಕ್ಕಿಯಾగి (Accident) ಪೋಲಿಸ್ ಹೆಡ್ ಕಾನ್‌ಸ್ಟೇಬಲ್ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಬೆಂಗಳೂರು- ಹಾಸನ ಹೆದ್ದಾರಿಯ ಸೋಲೂರು ಗ್ರಾಮದ ಬಳಿ ಸರ್ವೀಸ್ ರಸ್ತೆಯಲ್ಲಿ ನಡೆದಿದೆ. ಬೆಂಗಳೂರು ಕಮಲನಗರದಲ್ಲಿ ವಾಸವಾಗಿದ್ದ ಶ್ರೀನಿವಾಸ್ (45) ಮೃತ ಪೋಲಿಸ್ ಹೆಡ್ ಕಾನ್‌ಸ್ಟೇಬಲ್. ಸೋಲೂರು ಮೂಲದ ಮೃತ ಪೋಲಿಸ್ ಹೆಡ್ ಕಾನ್‌ಸ್ಟೇಬಲ್ ಬೆಂಗಳೂರಿನ ಉಪ್ಪಾರಪೇಟೆ ಪೋಲಿಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಡ್ಯೂಟಿ ಮುಗಿಸಿ ಬೈಕ್​ನಲ್ಲಿ ಮನೆಗೆ ವಾಪಸ್​ ಬರುತ್ತಿದ್ದ ವೇಳೆ ಮತ್ತೊಂದು ಬೈಕ್​ ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ ಹೆಡ್ ಕಾನ್‌ಸ್ಟೇಬಲ್ ಶ್ರೀನಿವಾಸ್ ಸ್ಥಳದಲ್ಲೇ ಸಾವನಪ್ಪಿದ್ದಾರೆ.

ಇನ್ನು ಮತ್ತೊಂದು ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆದ್ರೆ, ಆ ಬೈಕ್ ಸವಾರ ಘಟನೆ ನಡೆದ ಸ್ಥಳದಲ್ಲೇ ಬೈಕ್​ ಬಿಟ್ಟು ಪರಾರಿಯಾಗಿದ್ದಾನೆ. ಈ ಬಗ್ಗೆ ಕುದೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಮೃತದೇಹವನ್ನು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಆಸ್ಪತ್ರೆಗೆ ಉಪ್ಪಾರಪೇಟೆ ಸಂಚಾರಿ ಎಸಿಪಿ ಪುಟ್ಟಮ್ಮ ಭೇಟಿ ನೀಡಿದ್ದು, ಶ್ರೀನಿವಾಸ್‌ ಮೃತ ದೇಹವನ್ನು ಪರಿಶೀಲಿಸಿ ಬಳಿಕ ಮರಣೋತ್ತರ ಪರೀಕ್ಷೆಗೆ ಅನುಮತಿ ನೀಡಿದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
Follow Us