AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಅವಧಿ ಮೀರಿದ ತಿಂಡಿ ಪ್ಯಾಕೇಟ್ ಮೇಲೆ ಹೊಸ ಎಕ್ಸ್​ಪೈರ್ ಡೇಟ್ ಮುದ್ರಿಸುತ್ತಿದ್ದ ಗೋಡೌನ್ ಮೇಲೆ ಪೊಲೀಸರ ದಾಳಿ

ಅಂಗಡಿಗಳಲ್ಲಿ ಯಾವುದೇ ವಸ್ತುವನ್ನು ಖರೀದಿಸುವಾಗ ಅದರ ಎಕ್ಸ್​ಪೈರ್ ಡೇಟ್ ಪರಿಶೀಲಸಲಾಗುತ್ತದೆ. ಆದರೆ, ಅವಧಿ ಮೀರಿದ ಪ್ಯಾಕೇಟ್​ಗಳಿಗೆ ಹೊಸ ಅವಧಿ ದಿನಾಂಕ ಮುದ್ರಿಸಿದರೆ ಏನು ಮಾಡೋದು? ಇಂತಹದ್ದೊಂದು ಪ್ರಕರಣ ಬೆಂಗಳೂರು ಉತ್ತರ ತಾಲೂಕಿನ ಗೋಪಾಲಪುರ ವೇರ್ ಹೌಸ್​ನಲ್ಲಿ ನಡೆದಿದೆ.

ನೆಲಮಂಗಲ: ಅವಧಿ ಮೀರಿದ ತಿಂಡಿ ಪ್ಯಾಕೇಟ್ ಮೇಲೆ ಹೊಸ ಎಕ್ಸ್​ಪೈರ್ ಡೇಟ್ ಮುದ್ರಿಸುತ್ತಿದ್ದ ಗೋಡೌನ್ ಮೇಲೆ ಪೊಲೀಸರ ದಾಳಿ
ಅವಧಿ ಮೀರಿದ ತಿಂಡಿ ಪ್ಯಾಕೇಟ್ ಮೇಲೆ ಹೊಸ ಎಕ್ಸ್​ಪೈರ್ ಡೇಟ್ ಮುದ್ರಿಸುತ್ತಿದ್ದ ಗೋಡೌನ್ ಮೇಲೆ ಪೊಲೀಸರ ದಾಳಿ
ಬಿ ಮೂರ್ತಿ, ನೆಲಮಂಗಲ
| Updated By: Rakesh Nayak Manchi|

Updated on: Dec 01, 2023 | 12:24 PM

Share

ನೆಲಮಂಗಲ, ಡಿ.1: ಹಣದಾಸೆಗೆ ಬಿದ್ದ ವ್ಯಕ್ತಿಯೊಬ್ಬ, ಅವಧಿ ಮೀರಿದ ಮಕ್ಕಳ ತಿಂಡಿ ಪ್ಯಾಕೇಟ್​ಗಳಿಗೆ ಹೊಸ ಅವಧಿ ದಿನಾಂಕ ಮುದ್ರಿಸಿ ಮಾರಾಟ ಮಾಡುತ್ತಿದ್ದ ಪ್ರಕರಣ ಬೆಂಗಳೂರು (Bengaluru) ಉತ್ತರ ತಾಲೂಕಿನ ಗೋಪಾಲಪುರ ವೇರ್​ಹೌಸ್​ನಲ್ಲಿ ಬೆಳಕಿಗೆ ಬಂದಿದೆ. ಗೋಡೌನ್​ ಮೇಲೆ ಪೊಲೀಸರು ದಾಳಿ ನಡೆಸಿ ಕೋಟ್ಯಂತರ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಕೋರಮಂಗಲದ ರೋಹಿತ್ ಫರ್ನಾಂಡಿಸ್ ಎಂಬಾತ ಗ್ರಾಮದ ನಾರಯಣಪ್ಪ ಅವರಿಂದ ಆರು ತಿಂಗಳ ಹಿಂದೆ ಗೋಡೌನ್ ಅನ್ನು ಬಾಡಿಗೆಗೆ ಪಡೆದಿದ್ದನು. ಹಣದ ದುರಾಸೆಗೆ ಬಿದ್ದಿದ್ದ ರೋಹಿತ್ ಫರ್ನಾಂಡಿಸ್, ಕಂಪನಿಯ ಯಾವುದೇ ನಾಮಪಾಲಕ ಹಾಕದೆ ಬೆಂಗಳೂರಿನಿಂದ ಅವಧಿ ಮೀರಿದ ಆಹಾರ ಪ್ಯಾಕೇಟ್ ತರಿಸಿಕೊಂಡು ಹೊಸ ಅವಧಿ ದಿನಾಂಕ ಮುದ್ರಿಸುತ್ತಿದ್ದನು.

ಇದನ್ನೂ ಓದಿ: ಬೆಂಗಳೂರು: ಅವಧಿ ಮೀರಿದ ಇಂಜಕ್ಷನ್ ನೀಡಿದ್ದ ಸಂಜೀವಿನಿ ಆಸ್ಪತ್ರೆ ವಿರುದ್ಧ FIR

ಥಿನ್ನರ್ ಹಾಗೂ ಕೆಮಿಕಲ್ ಸಹಾಯದಿಂದ ಹೊಸ ಎಕ್ಸ್​ಪೈರ್ ಡೇಟ್ ಮುದ್ರಣ ಮಾಡಲಾಗುತ್ತಿತ್ತು. ಈ ವಿಚಾರ ಸ್ಥಳೀಯರಿಗೆ ತಿಳಿದು ಮಾಹಿತಿ ಬಹಿರಂಗವಾಗಿದೆ. ತಕ್ಷಣ ದಾಳಿ ನಡೆಸಿದ ಮಾದನಾಯಕನಹಳ್ಳಿ ಠಾಣಾ ಪೊಲೀಸರು, ಮ್ಯಾನೇಜರ್ ವೆಂಕಟೇಶ್ ಸೇರಿದಂತೆ ಇಬ್ಬರನ್ನು ಬಂಧಿಸಿದ್ದು, ಕೋಟ್ಯಂತರ ಮೌಲ್ಯದ ಆಹಾರ ಸಾಮಾಗ್ರಿಗಳು, ಧಿನ್ನರ್ ಹಾಗೂ ಕೆಮಿಕಲ್​ ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ 15 ಕ್ಕೂ ಹೆಚ್ಚು ಕಾರ್ಮಿಕರು ಸ್ಥಳದಿಂದ ಪರಾರಿಯಾಗಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ