AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಅವಧಿ ಮೀರಿದ ತಿಂಡಿ ಪ್ಯಾಕೇಟ್ ಮೇಲೆ ಹೊಸ ಎಕ್ಸ್​ಪೈರ್ ಡೇಟ್ ಮುದ್ರಿಸುತ್ತಿದ್ದ ಗೋಡೌನ್ ಮೇಲೆ ಪೊಲೀಸರ ದಾಳಿ

ಅಂಗಡಿಗಳಲ್ಲಿ ಯಾವುದೇ ವಸ್ತುವನ್ನು ಖರೀದಿಸುವಾಗ ಅದರ ಎಕ್ಸ್​ಪೈರ್ ಡೇಟ್ ಪರಿಶೀಲಸಲಾಗುತ್ತದೆ. ಆದರೆ, ಅವಧಿ ಮೀರಿದ ಪ್ಯಾಕೇಟ್​ಗಳಿಗೆ ಹೊಸ ಅವಧಿ ದಿನಾಂಕ ಮುದ್ರಿಸಿದರೆ ಏನು ಮಾಡೋದು? ಇಂತಹದ್ದೊಂದು ಪ್ರಕರಣ ಬೆಂಗಳೂರು ಉತ್ತರ ತಾಲೂಕಿನ ಗೋಪಾಲಪುರ ವೇರ್ ಹೌಸ್​ನಲ್ಲಿ ನಡೆದಿದೆ.

ನೆಲಮಂಗಲ: ಅವಧಿ ಮೀರಿದ ತಿಂಡಿ ಪ್ಯಾಕೇಟ್ ಮೇಲೆ ಹೊಸ ಎಕ್ಸ್​ಪೈರ್ ಡೇಟ್ ಮುದ್ರಿಸುತ್ತಿದ್ದ ಗೋಡೌನ್ ಮೇಲೆ ಪೊಲೀಸರ ದಾಳಿ
ಅವಧಿ ಮೀರಿದ ತಿಂಡಿ ಪ್ಯಾಕೇಟ್ ಮೇಲೆ ಹೊಸ ಎಕ್ಸ್​ಪೈರ್ ಡೇಟ್ ಮುದ್ರಿಸುತ್ತಿದ್ದ ಗೋಡೌನ್ ಮೇಲೆ ಪೊಲೀಸರ ದಾಳಿ
ಬಿ ಮೂರ್ತಿ, ನೆಲಮಂಗಲ
| Edited By: Rakesh Nayak Manchi|

Updated on: Dec 01, 2023 | 12:24 PM

Share

ನೆಲಮಂಗಲ, ಡಿ.1: ಹಣದಾಸೆಗೆ ಬಿದ್ದ ವ್ಯಕ್ತಿಯೊಬ್ಬ, ಅವಧಿ ಮೀರಿದ ಮಕ್ಕಳ ತಿಂಡಿ ಪ್ಯಾಕೇಟ್​ಗಳಿಗೆ ಹೊಸ ಅವಧಿ ದಿನಾಂಕ ಮುದ್ರಿಸಿ ಮಾರಾಟ ಮಾಡುತ್ತಿದ್ದ ಪ್ರಕರಣ ಬೆಂಗಳೂರು (Bengaluru) ಉತ್ತರ ತಾಲೂಕಿನ ಗೋಪಾಲಪುರ ವೇರ್​ಹೌಸ್​ನಲ್ಲಿ ಬೆಳಕಿಗೆ ಬಂದಿದೆ. ಗೋಡೌನ್​ ಮೇಲೆ ಪೊಲೀಸರು ದಾಳಿ ನಡೆಸಿ ಕೋಟ್ಯಂತರ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಕೋರಮಂಗಲದ ರೋಹಿತ್ ಫರ್ನಾಂಡಿಸ್ ಎಂಬಾತ ಗ್ರಾಮದ ನಾರಯಣಪ್ಪ ಅವರಿಂದ ಆರು ತಿಂಗಳ ಹಿಂದೆ ಗೋಡೌನ್ ಅನ್ನು ಬಾಡಿಗೆಗೆ ಪಡೆದಿದ್ದನು. ಹಣದ ದುರಾಸೆಗೆ ಬಿದ್ದಿದ್ದ ರೋಹಿತ್ ಫರ್ನಾಂಡಿಸ್, ಕಂಪನಿಯ ಯಾವುದೇ ನಾಮಪಾಲಕ ಹಾಕದೆ ಬೆಂಗಳೂರಿನಿಂದ ಅವಧಿ ಮೀರಿದ ಆಹಾರ ಪ್ಯಾಕೇಟ್ ತರಿಸಿಕೊಂಡು ಹೊಸ ಅವಧಿ ದಿನಾಂಕ ಮುದ್ರಿಸುತ್ತಿದ್ದನು.

ಇದನ್ನೂ ಓದಿ: ಬೆಂಗಳೂರು: ಅವಧಿ ಮೀರಿದ ಇಂಜಕ್ಷನ್ ನೀಡಿದ್ದ ಸಂಜೀವಿನಿ ಆಸ್ಪತ್ರೆ ವಿರುದ್ಧ FIR

ಥಿನ್ನರ್ ಹಾಗೂ ಕೆಮಿಕಲ್ ಸಹಾಯದಿಂದ ಹೊಸ ಎಕ್ಸ್​ಪೈರ್ ಡೇಟ್ ಮುದ್ರಣ ಮಾಡಲಾಗುತ್ತಿತ್ತು. ಈ ವಿಚಾರ ಸ್ಥಳೀಯರಿಗೆ ತಿಳಿದು ಮಾಹಿತಿ ಬಹಿರಂಗವಾಗಿದೆ. ತಕ್ಷಣ ದಾಳಿ ನಡೆಸಿದ ಮಾದನಾಯಕನಹಳ್ಳಿ ಠಾಣಾ ಪೊಲೀಸರು, ಮ್ಯಾನೇಜರ್ ವೆಂಕಟೇಶ್ ಸೇರಿದಂತೆ ಇಬ್ಬರನ್ನು ಬಂಧಿಸಿದ್ದು, ಕೋಟ್ಯಂತರ ಮೌಲ್ಯದ ಆಹಾರ ಸಾಮಾಗ್ರಿಗಳು, ಧಿನ್ನರ್ ಹಾಗೂ ಕೆಮಿಕಲ್​ ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ 15 ಕ್ಕೂ ಹೆಚ್ಚು ಕಾರ್ಮಿಕರು ಸ್ಥಳದಿಂದ ಪರಾರಿಯಾಗಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ