Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಅವಧಿ ಮೀರಿದ ತಿಂಡಿ ಪ್ಯಾಕೇಟ್ ಮೇಲೆ ಹೊಸ ಎಕ್ಸ್​ಪೈರ್ ಡೇಟ್ ಮುದ್ರಿಸುತ್ತಿದ್ದ ಗೋಡೌನ್ ಮೇಲೆ ಪೊಲೀಸರ ದಾಳಿ

ಅಂಗಡಿಗಳಲ್ಲಿ ಯಾವುದೇ ವಸ್ತುವನ್ನು ಖರೀದಿಸುವಾಗ ಅದರ ಎಕ್ಸ್​ಪೈರ್ ಡೇಟ್ ಪರಿಶೀಲಸಲಾಗುತ್ತದೆ. ಆದರೆ, ಅವಧಿ ಮೀರಿದ ಪ್ಯಾಕೇಟ್​ಗಳಿಗೆ ಹೊಸ ಅವಧಿ ದಿನಾಂಕ ಮುದ್ರಿಸಿದರೆ ಏನು ಮಾಡೋದು? ಇಂತಹದ್ದೊಂದು ಪ್ರಕರಣ ಬೆಂಗಳೂರು ಉತ್ತರ ತಾಲೂಕಿನ ಗೋಪಾಲಪುರ ವೇರ್ ಹೌಸ್​ನಲ್ಲಿ ನಡೆದಿದೆ.

ನೆಲಮಂಗಲ: ಅವಧಿ ಮೀರಿದ ತಿಂಡಿ ಪ್ಯಾಕೇಟ್ ಮೇಲೆ ಹೊಸ ಎಕ್ಸ್​ಪೈರ್ ಡೇಟ್ ಮುದ್ರಿಸುತ್ತಿದ್ದ ಗೋಡೌನ್ ಮೇಲೆ ಪೊಲೀಸರ ದಾಳಿ
ಅವಧಿ ಮೀರಿದ ತಿಂಡಿ ಪ್ಯಾಕೇಟ್ ಮೇಲೆ ಹೊಸ ಎಕ್ಸ್​ಪೈರ್ ಡೇಟ್ ಮುದ್ರಿಸುತ್ತಿದ್ದ ಗೋಡೌನ್ ಮೇಲೆ ಪೊಲೀಸರ ದಾಳಿ
Follow us
ಬಿ ಮೂರ್ತಿ, ನೆಲಮಂಗಲ
| Updated By: Rakesh Nayak Manchi

Updated on: Dec 01, 2023 | 12:24 PM

ನೆಲಮಂಗಲ, ಡಿ.1: ಹಣದಾಸೆಗೆ ಬಿದ್ದ ವ್ಯಕ್ತಿಯೊಬ್ಬ, ಅವಧಿ ಮೀರಿದ ಮಕ್ಕಳ ತಿಂಡಿ ಪ್ಯಾಕೇಟ್​ಗಳಿಗೆ ಹೊಸ ಅವಧಿ ದಿನಾಂಕ ಮುದ್ರಿಸಿ ಮಾರಾಟ ಮಾಡುತ್ತಿದ್ದ ಪ್ರಕರಣ ಬೆಂಗಳೂರು (Bengaluru) ಉತ್ತರ ತಾಲೂಕಿನ ಗೋಪಾಲಪುರ ವೇರ್​ಹೌಸ್​ನಲ್ಲಿ ಬೆಳಕಿಗೆ ಬಂದಿದೆ. ಗೋಡೌನ್​ ಮೇಲೆ ಪೊಲೀಸರು ದಾಳಿ ನಡೆಸಿ ಕೋಟ್ಯಂತರ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಕೋರಮಂಗಲದ ರೋಹಿತ್ ಫರ್ನಾಂಡಿಸ್ ಎಂಬಾತ ಗ್ರಾಮದ ನಾರಯಣಪ್ಪ ಅವರಿಂದ ಆರು ತಿಂಗಳ ಹಿಂದೆ ಗೋಡೌನ್ ಅನ್ನು ಬಾಡಿಗೆಗೆ ಪಡೆದಿದ್ದನು. ಹಣದ ದುರಾಸೆಗೆ ಬಿದ್ದಿದ್ದ ರೋಹಿತ್ ಫರ್ನಾಂಡಿಸ್, ಕಂಪನಿಯ ಯಾವುದೇ ನಾಮಪಾಲಕ ಹಾಕದೆ ಬೆಂಗಳೂರಿನಿಂದ ಅವಧಿ ಮೀರಿದ ಆಹಾರ ಪ್ಯಾಕೇಟ್ ತರಿಸಿಕೊಂಡು ಹೊಸ ಅವಧಿ ದಿನಾಂಕ ಮುದ್ರಿಸುತ್ತಿದ್ದನು.

ಇದನ್ನೂ ಓದಿ: ಬೆಂಗಳೂರು: ಅವಧಿ ಮೀರಿದ ಇಂಜಕ್ಷನ್ ನೀಡಿದ್ದ ಸಂಜೀವಿನಿ ಆಸ್ಪತ್ರೆ ವಿರುದ್ಧ FIR

ಥಿನ್ನರ್ ಹಾಗೂ ಕೆಮಿಕಲ್ ಸಹಾಯದಿಂದ ಹೊಸ ಎಕ್ಸ್​ಪೈರ್ ಡೇಟ್ ಮುದ್ರಣ ಮಾಡಲಾಗುತ್ತಿತ್ತು. ಈ ವಿಚಾರ ಸ್ಥಳೀಯರಿಗೆ ತಿಳಿದು ಮಾಹಿತಿ ಬಹಿರಂಗವಾಗಿದೆ. ತಕ್ಷಣ ದಾಳಿ ನಡೆಸಿದ ಮಾದನಾಯಕನಹಳ್ಳಿ ಠಾಣಾ ಪೊಲೀಸರು, ಮ್ಯಾನೇಜರ್ ವೆಂಕಟೇಶ್ ಸೇರಿದಂತೆ ಇಬ್ಬರನ್ನು ಬಂಧಿಸಿದ್ದು, ಕೋಟ್ಯಂತರ ಮೌಲ್ಯದ ಆಹಾರ ಸಾಮಾಗ್ರಿಗಳು, ಧಿನ್ನರ್ ಹಾಗೂ ಕೆಮಿಕಲ್​ ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ 15 ಕ್ಕೂ ಹೆಚ್ಚು ಕಾರ್ಮಿಕರು ಸ್ಥಳದಿಂದ ಪರಾರಿಯಾಗಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ